ಕುಸಿಯುವ ಭೀತಿಯಲ್ಲಿ ದೇವಗಿರಿ ಸರಕಾರಿ ಶಾಲೆ
ಮಕ್ಕಳ ಕೊರತೆಯಿಂದ 8 ವರ್ಷಗಳಿಂದ ತೆರೆಯದ ವಿದ್ಯಾಲಯ
Team Udayavani, Jul 9, 2020, 6:03 AM IST
ಮುಂಡಾಜೆ: ಸಾವಿರಾರು ಜನರಿಗೆ ಅಕ್ಷರ ಜ್ಞಾನ ಕಲಿಸಿ ವಿದ್ಯಾವಂತರನ್ನಾಗಿ ಮಾಡಿ, ಸಮಾಜಕ್ಕೆ ಮಾದರಿಯಾಗಿದ್ದ ಸರಕಾರಿ ಶಾಲೆ ಯೊಂದು ವಿದ್ಯಾರ್ಥಿಗಳ ಕೊರತೆಯಿಂದ 8 ವರ್ಷಗಳ ಹಿಂದೆ ಮುಚ್ಚಲ್ಪಟ್ಟು, ಸದ್ಯ ದಲ್ಲೇ ಧರಾಶಾಯಿಯಾಗುವ ಪರಿಸ್ಥಿತಿಗೆ ತಲುಪಿರುವುದು ಬೇಸರದ ಸಂಗತಿ.
ಇದು ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ದೇವಗಿರಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವ್ಯಥೆ.
2012ರಿಂದ ಮುಚ್ಚಿದೆ
ಈ ಸರಕಾರಿ ಶಾಲೆ ಸುಮಾರು 30 ವರ್ಷಗಳ ಹಿಂದೆ ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆರಂಭವಾಯಿತು. ಸುಮಾರು 1 ಎಕ್ರೆ ಜಾಗವನ್ನು ಊರವರೊಬ್ಬರು ಶಾಲೆಗಾಗಿ ನೀಡಿದ್ದಾರೆ. ಎಲ್ಲ ವಿಚಾರಗಳಲ್ಲೂ ವ್ಯವಸ್ಥಿತವಾಗಿದ್ದ ಶಾಲೆ 2012ರಲ್ಲಿ ವಿದ್ಯಾರ್ಥಿಗಳ ದಾಖ ಲಾತಿ ಕೊರತೆಯಿಂದ ಮುಚ್ಚಲ್ಪಟ್ಟಿದೆ. ನೆರಿಯ ಗ್ರಾಮದ ದೇವಗಿರಿ, ಅಂಬಟೆಮಲೆ ಮೊದಲಾದ ಪ್ರದೇಶಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಈ ಶಾಲೆಯು ಆಸರೆಯಾಗಿತ್ತು. 1ರಿಂದ 7ನೇ ತರಗತಿ ತನಕ ಇದ್ದ ಶಾಲೆಯಲ್ಲಿ ಹಲವು ವರ್ಷ 200ಕ್ಕಿಂತ ಅಧಿಕ ಮಕ್ಕಳ ಹಾಜರಾತಿ ಇರುತ್ತಿತ್ತು. ಆದರೆ ಮುಂದೆ ಮಕ್ಕಳ ದಾಖಲಾತಿ ಕ್ಷೀಣಿಸಿ, 2012ರಿಂದ ಮುಚ್ಚಿಹೋಗಿದೆ. ಆದರೆ ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಶಾಲೆಯನ್ನು ಮತ್ತೆ ತೆರೆಯುವ ಬಗ್ಗೆ ಯಾವುದೇ ರೀತಿಯಲ್ಲಿ ಪ್ರಯತ್ನಿಸದಿರುವುದು ವಿಪರ್ಯಾಸ.
ಶಿಥಿಲಗೊಂಡ ಶಾಲೆ
ಶಾಲಾ ಪರಿಸರದ ಸುತ್ತ ಗಿಡಗಂಟಿ ಬೆಳೆದಿದ್ದು, ಹಾವು ಮೊದಲಾದ ಜೀವಿಗಳಿಗೆ ಆಶ್ರಯತಾಣ. ಶಾಲಾ ಕೊಠಡಿಗಳು ಕಸ ತುಂಬಿ ತ್ಯಾಜ್ಯ ಕೇಂದ್ರಗಳಾಗಿವೆ. ಶೌಚಾಲಯ ಸಾಂಕ್ರಾಮಿಕ ರೋಗಗಳನ್ನು ಹರಡುವ ತಾಣದಂತಾಗಿದೆ.
ಗ್ರಾಮಸ್ಥರ ಆಕ್ರೋಶ
ನೆರಿಯ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಹಲವು ಆಂಗ್ಲ ಮಾಧ್ಯಮ ಶಾಲೆಗಳು ತಲೆ ಎತ್ತಿರುವುದು ಈ ಶಾಲೆಯ ದಾಖಲಾತಿ ಕ್ಷೀಣಿಸಲು ಕಾರಣ. ಶಾಲೆಯನ್ನು ಉಳಿಸಿಕೊಳ್ಳಲು ಅಥವಾ ದುರಸ್ತಿ ಬಗ್ಗೆ ಸಂಬಂಧ ಪಟ್ಟವರಿಗೆ ಮನವರಿಕೆ ಮಾಡಿದ್ದರೂ ಪ್ರಯೋಜನ ವಾಗಿಲ್ಲ, ಇಲ್ಲಿ ಅನೈತಿಕ ಚಟುವಟಿಕೆಗಳು ನಡೆ ದರೂ ಯಾರ ಗಮನಕ್ಕೂ ಬರುವುದಿಲ್ಲ, ಶಾಲೆ ಈ ಸ್ಥಿತಿ ತಲುಪಿದ್ದರೂ ಯಾವುದೇ ಇಲಾಖೆ ಗಮನ ಹರಿಸಿಲ್ಲ ಎಂದು ಊರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಲೋಚಿಸಿ ನಿರ್ಧಾರ
ಕೂಡಲೇ ಶಾಲಾ ಪರಿಸರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಮೇಲಧಿಕಾರಿಗಳ ಗಮನಕ್ಕೆ ತಂದು ಶಾಲೆಯನ್ನು ಪುನರಾರಂಭಿಸುವ ಕುರಿತು ಸಮಾಲೋಚಿಸಲಾಗುವುದು.
-ತಾರಾಕೇಸರಿ
ಕ್ಷೇತ್ರ ಶಿಕ್ಷಣಾಧಿಕಾರಿ, ಬೆಳ್ತಂಗಡಿ
ದುರಸ್ತಿಗೊಳಿಸಿ
ಮುಚ್ಚಿರುವ ನಮ್ಮೂರ ಶಾಲೆಯನ್ನು ದುರಸ್ತಿಗೊಳಿಸಿ, ಅಭಿವೃದ್ಧಿ ಪಡಿಸಿದರೆ ಮಕ್ಕಳ ದಾಖಲಾತಿಗೆ ಕೊರತೆಯಾಗದು.
– ಹರಿಪ್ರಸಾದ್, ನೆರಿಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್