ವಿನಾಶಕಾರಿ ಭೂಕಂಪಗಳು; ಇಲ್ಲಿದೆ ಜಗತ್ತಿನಲ್ಲಿ ಈವರೆಗೆ ದಾಖಲಾದ ಭೂಕಂಪಗಳ ವಿವರ


Team Udayavani, Feb 7, 2023, 7:30 AM IST

ವಿನಾಶಕಾರಿ ಭೂಕಂಪಗಳು; ಇಲ್ಲಿದೆ ಜಗತ್ತಿನಲ್ಲಿ ಈವರೆಗೆ ದಾಖಲಾದ ಭೂಕಂಪಗಳ ವಿವರ

ಪ್ರತಿ ವರ್ಷವೂ ಜಗತ್ತಿನಲ್ಲಿ ಸುಮಾರು 20 ಸಾವಿರ ಭೂಕಂಪಗಳು ಸಂಭವಿಸುತ್ತವೆ. ಅಂದರೆ, ದಿನಕ್ಕೆ ಸರಾಸರಿ 55 ಭೂಕಂಪಗಳು. ಈ ಪೈಕಿ ಕೆಲವು ದೊಡ್ಡಮಟ್ಟದ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿ ಉಂಟುಮಾಡುತ್ತವೆ. ಜಗತ್ತಿನಲ್ಲಿ ಈವರೆಗೆ ದಾಖಲಾದ ಭೂಕಂಪಗಳು ಇಂತಿವೆ.

ರಷ್ಯಾ, 1952
ಇಲ್ಲಿನ ಕಮ್‌ಚಟ್ಕಾ ಪರ್ಯಾಯ ದ್ವೀಪದಲ್ಲಿ 9.0 ತೀವ್ರತೆಯ ಭೂಕಂಪ ಸಂಭವಿಸಿ 2,000 ಮಂದಿ ಸಾವಿಗೀಡಾದರು. ಸಮುದ್ರದಡಿಯಲ್ಲಿ ಭೂಮಿ ಕಂಪಿಸಿದ ಕಾರಣ, ದೊಡ್ಡ ಮಟ್ಟದ ಸುನಾಮಿಯೂ ಎದ್ದಿತ್ತು. ರಕ್ಕಸ ಅಲೆಗಳು ಪೆರು, ಚಿಲಿ, ನ್ಯೂಜಿಲೆಂಡ್‌ವರೆಗೆ ತಲುಪಿ ಅಪಾರ ಹಾನಿ ಉಂಟುಮಾಡಿದವು.

ಚಿಲಿ, 1960
ಚಿಲಿಯ ಬಯೋ ಬಯೋ ಎಂಬಲ್ಲಿ 1960ರಲ್ಲಿ ಸುಮಾರು 10 ನಿಮಿಷಗಳ ಕಾಲ ಭೂಮಿಯು ಕಂಪಿಸಿತ್ತು. ಪರಿಣಾಮ, 6 ಸಾವಿರ ಮಂದಿ ಮೃತಪಟ್ಟಿದ್ದರು. ಈ ಭೂಕಂಪದ ತೀವ್ರತೆ ಸುಮಾರು 9.4 ಮತ್ತು 9.6 ತೀವ್ರತೆಯಲ್ಲಿತ್ತು.

ಅಲಾಸ್ಕಾ, 1964
ಗುಡ್‌ಫ್ರೈಡೆ ದಿನದಂದೇ ಈ ದುರಂತ ಸಂಭವಿಸಿತ್ತು. ರಿಕ್ಟರ್‌ ಮಾಪಕದಲ್ಲಿ 9.2 ತೀವ್ರತೆಯಲ್ಲಿ ಭೂಮಿ 5 ನಿಮಿಷಗಳ ಕಾಲ ಕಂಪಿಸಿತ್ತು. ಇದು ಉತ್ತರ ಅಮೆರಿಕದಲ್ಲಿ ಹಿಂದೆಂದೂ ದಾಖಲಾಗದ ಪ್ರಬಲ ಭೂಕಂಪವಾಗಿತ್ತು. ಕಂಪನಕ್ಕೆ 9 ಮಂದಿ ಬಲಿಯಾದರೆ, ನಂತರದಲ್ಲಿ ಎದ್ದ ಸುನಾಮಿಗೆ 100 ಮಂದಿ ಅಸುನೀಗಿದ್ದರು.

ಗುಜರಾತ್‌ನ ಭುಜ್‌, 2001
ಎರಡು ಶತಮಾನಗಳಲ್ಲಿ ಭಾರತ ಕಂಡ 3ನೇ ಅತಿ ಪ್ರಬಲ ಭೂಕಂಪವಿದು. ಈ ದುರಂತವು 20 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದಲ್ಲದೇ, ಸಾವಿರಾರು ಮನೆಗಳನ್ನು ನಾಶ ಮಾಡಿತು. ಲಕ್ಷಾಂತರ ಮಂದಿಯನ್ನು ನಿರ್ವಸಿತರನ್ನಾಗಿಸಿತು.

ಸುಮಾತ್ರ ಭೂಕಂಪ-ಸುನಾಮಿ, 2004
ಹಿಂದೆಂದೂ ಕಂಡಿರದಂಥ ವಿನಾಶಕಾರಿ ನೈಸರ್ಗಿಕ ಪ್ರಕೋಪವಿದು. ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 9.1 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದಲ್ಲದೆ, 100 ಅಡಿ ಎತ್ತರಕ್ಕೆ ಎದ್ದ ಸುನಾಮಿ ಅಲೆಗಳು ಥಾಯ್ಲೆಂಡ್‌, ಶ್ರೀಲಂಕಾ, ಭಾರತ ಮತ್ತು ಇಂಡೋನೇಷ್ಯಾ ಸೇರಿದಂತೆ 14 ದೇಶಗಳ 2.27 ಲಕ್ಷ ಮಂದಿಯನ್ನು ಬಲಿಪಡೆದುಕೊಂಡವು. ಭಾರತದಲ್ಲೇ 42 ಸಾವಿರ ಮಂದಿ ಸಾವನ್ನಪ್ಪಿದರು.

ನೇಪಾಳ, 2015
1934ರ ಬಳಿಕ ಮೊದಲ ಬಾರಿಗೆ ನೇಪಾಳವು 2015ರಲ್ಲಿ ದೊಡ್ಡ ಪ್ರಮಾಣದ ಭೂಕಂಪಕ್ಕೆ ಸಾಕ್ಷಿಯಾಯಿತು. ಇದರಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟರು.

 

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.