16 ಶಾಲೆ ದುರಸ್ತಿಗೆ 74 ಲಕ್ಷ ರೂ. ಪ್ರಸ್ತಾವನೆ

ಮೇಲ್ಛಾವಣಿ, ಕಾಂಪೌಂಡ್‌-ಹಳೇ ಕಟ್ಟಡ ದುರಸ್ತಿ, ಸುಣ್ಣ ಬಣ್ಣ ಹಚ್ಚಲು ಅನುದಾನ ನಿರೀಕ್ಷೆ

Team Udayavani, Jun 14, 2022, 12:16 PM IST

6

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ವಿವಿಧ ಸರಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ, ಸೌಲಭ್ಯಗಳ ನೀಡುವುದು ಅಗತ್ಯವಿದ್ದು, ಇದರ ಭಾಗವಾಗಿ ಮೊದಲ ಹಂತದಲ್ಲಿ ಸುಮಾರು 16 ಸರಕಾರಿ ಶಾಲೆಗಳ ದುರಸ್ತಿ, ಅಭಿವೃದ್ಧಿಗೆ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಗೆ 74ಲಕ್ಷ ರೂ.ಗಳ ಅಂದಾಜು ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶಾಲೆಗಳು ಅನುದಾನದ ನಿರೀಕ್ಷೆಯಲ್ಲಿವೆ.

ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಯಲ್ಲಿ ಬರುವ ಅನೇಕ ಸರಕಾರಿ ಶಾಲೆಗಳ ಕಟ್ಟಡಗಳಲ್ಲಿ ವಿವಿಧ ದುರಸ್ತಿ, ಅಭಿವೃದ್ಧಿ ಕಾಮಗಾರಿ ಅಗತ್ಯವಿದೆ. ಬೇಸಿಗೆ ರಜೆಯಲ್ಲಿಯೇ ಇದನ್ನು ಕೈಗೊಳ್ಳಬೇಕಿತ್ತಾದರೂ ಇದೀಗ ಶಾಲೆ ಆರಂಭವಾದ ಮೇಲೆ ಪ್ರಸ್ತಾವನೆ ಸಲ್ಲಿಕೆ ಹಂತದಲ್ಲಿದೆ. ಹಳೇ ಕಟ್ಟಡ, ಮಳೆಯಿಂದಾಗಿ ಶಾಲಾ ಕಟ್ಟಡಗಳಲ್ಲಿ ಕೆಲವೊಂದು ಕೋಣೆಗಳ ಮೇಲ್ಛಾವಣಿ, ಹೊರಗೋಡೆ, ಬಣ್ಣ ಹಚ್ಚುವುದು ಇತ್ಯಾದಿ ಕಾಮಗಾರಿ ಕೈಗೊಳ್ಳಬೇಕಾಗಿದೆ.

ಶಾಲೆಗಳ ದುರಸ್ತಿ ಏನು?: ನಗರದ 16 ಶಾಲೆಗಳಲ್ಲಿ ಆನಂದ ನಗರ ಸರಕಾರಿ ಉರ್ದು ಪ್ರೌಢಶಾಲೆಯಲ್ಲಿ 3 ಕೊಠಡಿಗಳಲ್ಲಿ ಸಜ್ಜಾ ರಿಪೇರಿ, ಮೇಲ್ಛಾವಣಿ ಸೋರಿಕೆ, ಶೀಟ್‌ ಹೊದಿಸುವುದು, ಬಣ್ಣ ಹಚ್ಚುವುದು ಇದಕ್ಕಾಗಿ 3 ಲಕ್ಷ ರೂ.ಗಳು, ವಿಶ್ವೇಶ್ವರನಗರ ಸರಕಾರಿ ಪ್ರೌಢಶಾಲೆ 2 ಕೊಠಡಿಗಳಲ್ಲಿ ಮೇಲ್ಛಾವಣಿ ಸೋರಿಕೆ ಹಾಗೂ ಶಾಲಾ ಕಾಂಪೌಂಡ್‌ ಕುಸಿದಿರುವುದು ಕಾಮಗಾರಿಗೆ 10 ಲಕ್ಷ ರೂ.ಗಳು.

ನೇಕಾರ ಕಾಲೋನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗಳಲ್ಲಿ ಮೇಲ್ಛಾವಣಿ ಗೋಡೆ ರಿಪೇರಿ ಹಾಗೂ ಕಾಂಪೌಂಡ್‌ ದುರಸ್ತಿ ಕಾಮಗಾರಿಗೆ 6 ಲಕ್ಷ ರೂ.ಗಳು, ಗಾಂಧಿ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ಕೊಠಡಿಗಳ ಮೇಲ್ಛಾವಣಿ ಗೋಡೆ ರಿಪೇರಿ ಹಾಗೂ ಕಾಂಪೌಂಡ್‌ ದುರಸ್ತಿ ಕಾಮಗಾರಿಗೆ 5 ಲಕ್ಷ ರೂ.ಗಳು, ರಾಜಧಾನಿ ಕಾಲೋನಿ ಕೆಎಸ್‌ಆರ್‌ಟಿಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ಕೊಠಡಿಗಳ ಮೇಲ್ಛಾವಣಿ ಗೋಡೆ ರಿಪೇರಿ, ಗೋಡೆ ಒಳಾಂಗಣ ಹಾಗೂ ಹೊರಾಂಗಣದಲ್ಲಿ ನೀರು ಸೋರುವಿಕೆ ಆಗುತ್ತಿರುವುದು ಅದಕ್ಕಾಗಿ 8ಲಕ್ಷ ರೂ. ಗಳು.

ಹಳೇಹುಬ್ಬಳ್ಳಿ ಚೆನ್ನಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ನಂ.20ರಲ್ಲಿ 3 ಕೊಠಡಿಗಳಲ್ಲಿ ಮೇಲ್ಛಾವಣಿ ಗೋಡೆ ರಿಪೇರಿ ಹಾಗೂ ನೆಲಹಾಸು ದುರಸ್ತಿ ಕಾರ್ಯಕ್ಕೆ 4 ಲಕ್ಷ ರೂ.ಗಳು, ವೀರಾಪುರ ಓಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-4ರ 6 ಕೊಠಡಿಗಳಿಗೆ ಮೇಲ್ಛಾವಣಿ ಗೋಡೆ ರಿಪೇರಿ ಶೀಟ್‌ ಹೊದಿಸುವುದು ಕಾಮಗಾರಿಗೆ 4 ಲಕ್ಷ ರೂ.ಗಳು, ಅಕ್ಕಿಹೊಂಡ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ ನಂ-3ರ 2 ಕೊಠಡಿಗಳಲ್ಲಿ ಮೇಲ್ಛಾವಣಿ ರಿಪೇರಿ ಕಾಮಗಾರಿಗೆ 4 ಲಕ್ಷ ರೂ.ಗಳು, ಯಲ್ಲಾಪುರ ಓಣಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ-3ರ 4 ಕೊಠಡಿಗಳ ಮೇಲ್ಛಾವಣಿ ಗೋಡೆ ರಿಪೇರಿ, ಶೀಟ್‌ ಹೊದಿಸುವುದು, ಬಾಗಿಲು, ಕಿಟಕಿ ಕಾಮಗಾರಿಗೆ 6 ಲಕ್ಷ ರೂ.ಗಳು.

ಶಿವಶಂಕರ ಕಾಲೋನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ನೆಲಹಾಸು ಕುಸಿಯುತ್ತಿರುವುದರ ಕಾಮಗಾರಿಗೆ 2 ಲಕ್ಷ ರೂ.ಗಳು, ಶಿರಡಿ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿಗಳ ಮೇಲ್ಛಾವಣಿ ದುರಸ್ತಿ, ಶೌಚಾಲಯ ದುರಸ್ತಿ ಕಾಮಗಾರಿಗೆ 4ಲಕ್ಷ ರೂ.ಗಳು, ಛಬ್ಬಿ ಪ್ಲಾಟ್‌ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ 3 ಕೊಠಡಿಗಳ ವರಾಂಡ ಮತ್ತು ಕೊಠಡಿ ಮೇಲ್ಛಾವಣಿ, ಕಿಟಕಿ ಬಾಗಿಲು ಕಾಮಗಾರಿಗೆ 3ಲಕ್ಷ ರೂ. ಗಳು, ಆನಂದನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 2 ಕೊಠಡಿಗಳ ಮೇಲ್ಛಾವಣಿ ಗೋಡೆ ರಿಪೇರಿ ಶೌಚಾಲಯ ದುರಸ್ತಿ ಹಾಗೂ ಬಣ್ಣ ಹಚ್ಚುವುದು ಅದಕ್ಕಾಗಿ 5 ಲಕ್ಷ ರೂ.ಗಳು.

ಯಲ್ಲಾಪುರ ಓಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-18ರಲ್ಲಿ 3 ಕೊಠಡಿಗಳ ಮೇಲ್ಛಾವಣಿ ಗೋಡೆ ದುರಸ್ತಿ ಕಾಮಗಾರಿಗೆ 3 ಲಕ್ಷ ರೂ.ಗಳು, ಸದಾಶಿವ ನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 2 ಕೊಠಡಿಗಳ ಮೇಲ್ಛಾವಣಿ ಗೋಡೆ ರಿಪೇರಿಗೆ 2 ಲಕ್ಷ ರೂ., ಎಸ್‌ ಆರ್‌ಪಿ ಕೇಂದ್ರ 3 ಕೊಠಡಿಗಳ ಮೇಲ್ಛಾವಣಿ ಗೋಡೆ ರಿಪೇರಿ ಕಾಮಗಾರಿಗೆ 5 ಲಕ್ಷ ರೂ.ಗಳು ಹೀಗೆ ಒಟ್ಟು 74 ಲಕ್ಷ ರೂ. ಗಳ ಅನುದಾನ ಬಿಡುಗಡೆ ಮಾಡುವಂತೆ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಬೇಡಿಕೆ ಸಲ್ಲಿಸಲಾಗಿದ್ದು, ಅನುದಾನ ಬಿಡುಗಡೆ ನಂತರ ಕಾಮಗಾರಿ ಆರಂಭಿಸಲು ಇಲಾಖೆ ಸಿದ್ಧತೆ ನಡೆಸಿದೆ. ನಗರದಲ್ಲಿ ಹಲವು ಶಾಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಸಬೇಕಿದ್ದು, ಹಂತ ಹಂತವಾಗಿ ಕೈಗೆತ್ತಿಕೊಳ್ಳಬೇಕಿದೆ. ಅದಕ್ಕಾಗಿ ಮೊದಲನೇ ಹಂತದಲ್ಲಿ 16 ಶಾಲೆಗಳನ್ನು ಗುರುತಿಸಲಾಗಿದ್ದು, ಸರಕಾರದಿಂದ ಅನುದಾನ ಬಿಡುಗಡೆ ನಂತರ ಕಾಮಗಾರಿ ಆರಂಭಗೊಳ್ಳಬೇಕಿದ್ದು, ಅದಕ್ಕಾಗಿ ಕ್ಷೇತ್ರ ಶಿಕ್ಷಣ ಕಾರ್ಯಾಲಯ ಕಾಯುತ್ತಿದೆ.

ಮೊದಲ ಹಂತದಲ್ಲಿ ಸುಮಾರು 16 ಶಾಲೆಗಳನ್ನು ಗುರುತಿಸಲಾಗಿದ್ದು, ಆದ್ಯತೆ ಮೇರೆಗೆ 2ನೇ ಹಂತದಲ್ಲಿ ಇನ್ನುಳಿದ ಶಾಲೆಗಳ ಕಾಮಗಾರಿಗೆ ಬೇಡಿಕೆ ಸಲ್ಲಿಸಲಾಗುವುದು. ಸದ್ಯ 16 ಶಾಲೆಗಳಿಗಾಗಿ 74 ಲಕ್ಷ ರೂ. ಗಳ ಅನುದಾನ ಬಿಡುಗಡೆಗೆ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದು, ಇಲಾಖೆ ಅನುದಾನ ಬಿಡುಗಡೆ ಮಾಡಿದ ನಂತರ ಕಾಮಗಾರಿ ಆರಂಭಿಸಲಾಗುವುದು.  –ಎಂ.ಎಸ್‌.ಶಿವಳ್ಳಿಮಠ, ಪ್ರಭಾರ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ

„ಬಸವರಾಜ ಹೂಗಾರ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ನೇಹಾ ಹತ್ಯೆ ತನಿಖೆನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾಐಗೆ ವಹಿಸಿ: ಜೆ.ಪಿ.ನಡ್ಡಾ

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.