ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯುವುದು ಅವಶ್ಯ
Team Udayavani, Sep 27, 2021, 5:55 AM IST
ಮಂಗಳೂರು ನಗರದಲ್ಲಿ ಸ್ಮಾರ್ಟ್ಸಿಟಿ ಸೇರಿದಂತೆ ವಿವಿಧ ಯೋಜನೆಗಳ ಹಲವಾರು ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಾಮಗಾರಿಗಳು ಆರಂಭವಾಗಿ ವರ್ಷ ಕಳೆದರೂ ಪೂರ್ತಿ ಯಾಗಿಲ್ಲ. ಕಾಮಗಾರಿಯ ಉದ್ದೇಶದಿಂದ ಮುಚ್ಚಿರುವ ಕೆಲವು ರಸ್ತೆಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ತೆರವುಗೊಂಡಿಲ್ಲ. ಇದರ ಜತೆಗೆ ಹೊಸದಾಗಿ ಕಾಮಗಾರಿಗೆ ಇನ್ನು ಕೆಲವು ರಸ್ತೆಗಳನ್ನು ಮುಚ್ಚಲಾಗುತ್ತಿದೆ. ಇದು ಒಟ್ಟಾರೆಯಾಗಿ ನಗರದ ಜನಜೀವನ, ಸಂಚಾರ, ವಾಣಿಜ್ಯ ವ್ಯವಹಾರಗಳ ಮೇಲೆ ಪರಿಣಾಮ ಬೀರಿದೆ.
ಪುರಭವನದ ಬಳಿ ಅಂಡರ್ಪಾಸ್ ಕಾಮಗಾರಿ ಆರಂಭವಾಗಿ ವರ್ಷ ಕಳೆದಿದೆ. ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಇದೇ ರೀತಿಯಾಗಿ ಕಾಮಗಾರಿ ಮುಂದುವರಿದರೆ ಅದು ಪೂರ್ಣಗೊಳ್ಳಲು ಇನ್ನೂ ಕೆಲವು ತಿಂಗಳು ಬೇಕಾಗಬಹುದು. ಕಾಮಗಾರಿಯಿಂದಾಗಿ ಪುರಭವನ ಮುಂಭಾಗದಲ್ಲಿ ನಳನಳಿಸುತ್ತಿದ್ದ ಉದ್ಯಾನವನ ಕೂಡ ತನ್ನ ಸ್ವರೂಪವನ್ನು ಕಳೆದುಕೊಂಡು ಹಾಳುಕೊಂಪೆಯಂತಾಗಿದೆ. ಇದೇ ಕಾಮಗಾರಿ ಯಿಂದಾಗಿ ಲೇಡಿಗೋಶನ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಕ್ಲಾಕ್ಟವರ್ನಿಂದ ಎ.ಬಿ. ಶೆಟ್ಟಿ ವೃತ್ತದವರೆಗಿನ ರಸ್ತೆಯನ್ನು ಏಕಮುಖ ಸಂಚಾರ ಮಾಡಿರುವುದರಿಂದ ಲೇಡಿಗೋಶನ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಆಗಾಗ ಟ್ರಾಫಿಕ್ ಜಾಮ್ ತಲೆದೋರುತ್ತಿದೆ. ಪಕ್ಕದಲ್ಲೇ ಮಾರುಕಟ್ಟೆ ರಸ್ತೆಯನ್ನು ಕಾಮಗಾರಿಗೆ ಅಗೆದು ಹಾಕಲಾಗಿದೆ. ರಾವ್ ಆ್ಯಂಡ್ ರಾವ್ ಸರ್ಕಲ್ನಿಂದ ಕ್ಲಾಕ್ಟವರ್ವರೆಗೆ ಫುಟ್ಪಾತ್ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದ್ದು, ಸಮಸ್ಯೆಯನ್ನು ಇನ್ನಷ್ಟು ಬಿಗಡಾಯಿಸಿದೆ. ಮಾರ್ಗನ್ಸ್ಗೆಟ್, ಮಂಗಳಾದೇವಿ ರಸ್ತೆಯನ್ನು ಸ್ಮಾರ್ಟ್ಸಿಟಿ ಕಾಮಗಾರಿಗೆಂದು ಅಗೆಯಲಾಗಿದೆ.
ಇದನ್ನೂ ಓದಿ:ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ಸಚಿವರ ಆಗ್ರಹ
ಕೊರೊನಾ ಸೋಂಕು ಪ್ರಮಾಣ ಇಳಿಕೆಯಾಗಿ ನಗರದಲ್ಲಿ ಜನಜೀವನ ಸಹಜಸ್ಥಿತಿಯತ್ತ ಮರಳುತ್ತಿದೆ. ವಾಣಿಜ್ಯ ಚಟುವಟಿಕೆಗಳು ಚೇತರಿಸುತ್ತಿದೆ. ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಶುಭ ಸಮಾರಂಭಗಳು ನಡೆಯುತ್ತಿವೆ. ಈ ಎಲ್ಲ ಅಂಶಗಳನ್ನು ಗಮನ ದಲ್ಲಿಟ್ಟುಕೊಂಡು ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿದೆ.
ಎಲ್ಲೆಡೆ ರಸ್ತೆ ಅಗೆತ, ಏಕಮುಖ ಸಂಚಾರ ಆದೇಶದಿಂದಾಗಿ ವಾಹನ ಸವಾರರೂ ಪರದಾಡುತ್ತಿದ್ದಾರೆ. ಇನ್ನು ಸ್ವಂತ ವಾಹನದೊಂದಿಗೆ ಮಂಗಳೂರು ನಗರ ಪ್ರವೇಶಿಸಿದರೆಂದರೆ ಅವರ ಸ್ಥಿತಿಯನ್ನು ಹೇಳುವುದಕ್ಕೆ ಸಾಧ್ಯವಿಲ್ಲದಂತಾಗುತ್ತದೆ. ಒಂದೆಡೆ ಪಾರ್ಕಿಂಗ್ ಸಮಸ್ಯೆ, ಇನ್ನೊಂದೆಡೆ ನಿಯಮ ಪಾಲನೆ, ಮತ್ತೂಂದೆಡೆ ರಸ್ತೆ ಸಮಸ್ಯೆ. ಕೊನೆಗೆ ಎಲ್ಲಿಗೆ ಹೋಗುವುದೆಂದು ತಿಳಿಯದೆ ನಗರ ಸುತ್ತುವುದೇ ಕಾಯಕ ವಾಗಿಬಿಡುತ್ತದೆ.
ಇನ್ನೊಂದು ಸಮಸ್ಯೆಯೆಂದರೆ ಕಾಮಗಾರಿ ಪೂರ್ಣಗೊಂಡ ಬೆನ್ನಲ್ಲೇ ಮತ್ತೆ ಆ ರಸ್ತೆಯನ್ನು ಅಗೆಯುವುದು ಬಹುತೇಕ ಕಡೆಗಳಲ್ಲಿ ಕಂಡುಬರುತ್ತಿದೆ. ಇದರಿಂದ ಮತ್ತೆ ಸಂಚಾರಕ್ಕೆ ಅಡಚಣೆಗಳಾಗುತ್ತದೆ. ಆದುದರಿಂದ ಕಾಮಗಾರಿ ನಡೆಯುವ ಸಂದರ್ಭದಲ್ಲೇ ಆ ರಸ್ತೆಗೆ ಸಂಬಂಧಪಟ್ಟಂತೆ ಎಲ್ಲ ಕೆಲಸಗಳನ್ನು ಪೂರ್ತಿಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್ಸಿಟಿ ಕಂಪೆನಿ ಹಾಗೂ ಪಾಲಿಕೆ ನಿಗಾ ವಹಿಸುವುದು ಅಗತ್ಯ.
-ಸಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ