ದ.ಕ. 293, ಉಡುಪಿ 231ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Oct 5, 2020, 9:28 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 293 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರು ಸಾವನ್ನಪ್ಪಿದ್ದಾರೆ. ಕೊರೊನಾಕ್ಕೆ ಸಂಬಂಧಿಸಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 434 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಕೊರೊನಾದಿಂದ ಒಟ್ಟು 568 ಸಾವು ಸಂಭವಿಸಿದ್ದು 5,601 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ ಪ್ರಕರಣವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಪಂಚಾಯತ್ ಸೋಮವಾರದಿಂದ ಪ್ರತಿ ಗ್ರಾ.ಪಂ. ಮಟ್ಟದಲ್ಲಿ ಕೊರೊನಾ ಪರೀಕ್ಷೆ ಹಮ್ಮಿಕೊಂಡಿದ್ದು, ರವಿವಾರ ದ.ಕ. ಜಿಲ್ಲೆಯಲ್ಲಿ 43 ಮಂದಿಗೆ ಕೊರೊನಾ ದೃಢಪಟ್ಟಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,784 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 5,75,159 ರೂ. ದಂಡ ವಸೂಲಿ ಮಾಡಲಾಗಿದೆ.
ಉಡುಪಿ: 231 ಪ್ರಕರಣ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ರವಿವಾರ 231 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. 59 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2,145 ಸಕ್ರಿಯ ಪ್ರಕರಣಗಳಿವೆ. ಇದು ವರೆಗೆ ಒಟ್ಟು 154 ಜನರು ನಿಧನ ಹೊಂದಿದ್ದಾರೆ.
ಕೊಡಗು: 115 ಪಾಸಿಟಿವ್
ಮಡಿಕೇರಿ : ಜಿಲ್ಲೆಯಲ್ಲಿ ರವಿವಾರ 115 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್ಪ್ರಕರಣಗಳ ಸಂಖ್ಯೆ 3,1 15 ಆಗಿದ್ದು, 2,446 ಮಂದಿ ಗುಣಮುಖರಾಗಿದ್ದಾರೆ. 621 ಸಕ್ರಿಯ ಪ್ರಕರಣಗಳಿವೆ. ಒಟ್ಟು 48 ಸಾವು ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕಾಸರಗೋಡು: 278 ಪಾಸಿಟಿವ್
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 278 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 193 ಮಂದಿ ಗುಣಮುಖರಾಗಿದ್ದಾರೆ. 271 ಮಂದಿಗೆ ಸಂಪರ್ಕದ ಮೂಲಕ ತಗಲಿದೆ. ಕೇರಳದಲ್ಲಿ 8,553 ಪ್ರಕರಣ ಕೇರಳದಲ್ಲಿ ರವಿವಾರ 8,553 ಮಂದಿಗೆ ಸೋಂಕು ದೃಢಪಟ್ಟಿದೆ. 23 ಮಂದಿ ಮೃತಪಟ್ಟಿದ್ದಾರೆ.
ಲಾಠೀಪ್ರಹಾರ
ಕೋವಿಡ್ ವ್ಯಾಪಕವಾಗುತ್ತಿರುವ ಕಾರಣ ಜನರು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿಗೊಳಿ
ಸಿದ್ದು, ಜಿಲ್ಲೆಯ ವಿವಿಧೆಡೆ ಗುಂಪು ಸೇರಿದ ಜನರನ್ನು ಪೊಲೀಸರು ಲಾಠೀಪ್ರಹಾರ ಮಾಡಿ ಚದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!