ಜಯರಾಜ್‌ ಬಯೋಪಿಕ್‌ಗೆ ಧನಂಜಯ್‌ ರೆಡಿ


Team Udayavani, May 20, 2020, 4:22 AM IST

jayaraj-biopic

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಬಯೋಪಿಕ್‌ ಬಂದಿವೆ. ಆ ಸಾಲಿಗೆ ಈಗ “ಜಯರಾಜ್‌’ಬಯೋಪಿಕ್‌ ಕೂಡ ಸೇರಿದೆ. ಹೌದು, ಧನಂಜಯ್‌ ಈ ಚಿತ್ರದ ಪ್ರಮುಖ ಆಕರ್ಷಣೆ. ಈಗಾಗಲೇ ಈ ಚಿತ್ರದ ಕೆಲಸಗಳು ಬಹುತೇಕ ಮುಗಿದಿದ್ದು,  ಲಾಕ್‌ಡೌನ್‌ ಬಳಿಕ ಶೂಟಿಂಗ್‌ಗೆ ಅನುಮತಿ ಸಿಕ್ಕರೆ, ಧನಂಜಯ್‌ ಚಿತ್ರದ ಕ್ಯಾಮೆರಾ ಮುಂದೆ ನಿಲ್ಲಲಿದ್ದಾರೆ. ಅಂದಹಾಗೆ, ಧನಂಜಯ್‌, “ಜಯರಾಜ್‌’ ಬಯೋಪಿಕ್‌ಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಇದೊಂದು ರೌಡಿಸಂ ಹಿನ್ನೆಲೆಯ ಕಥೆ ಆಗಿರುವುದರಿಂದ ಧನಂಜಯ್‌  ಬಾಡಿಬಿಲ್ಡ್‌ ಕೂಡ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಸಾಕಷ್ಟು ಸಮಯ ಸಿಕ್ಕಿದ್ದರಿಂದ ಧನಂಜಯ್‌, ತಮ್ಮ ದೇಹವನ್ನು ಮತ್ತಷ್ಟು ಸದೃಢಗೊಳಿಸಿಕೊಂಡಿದ್ದಾರೆ.  “ಟಗರು’ ಮತ್ತು “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರಗಳ ಮೂಲಕ ಧನಂಜಯ್‌ ಸಾಕಷ್ಟು ಸುದ್ದಿಯಾಗಿದ್ದು ಗೊತ್ತೇ ಇದೆ.

ಪಕ್ಕಾ ಮಾಸ್‌ ಪಾತ್ರಕ್ಕೆ ಸೈ ಎನಿಸಿಕೊಂಡಿರುವ ಧನಂಜಯ್‌, ಇದೀಗ ಜಯರಾಜ್‌ ಬಯೋಪಿಕ್‌ನಲ್ಲೂ ರಗಡ್‌ ಆಗಿ  ಕಾಣಿಸಿಕೊಳ್ಳಲು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶೂನ್ಯ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಜಯರಾಜ್‌ ಪುತ್ರ ಅಜಿತ್‌ ಕೂಡ ಒಂದು ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಇನ್ನು, ಈ ಚಿತ್ರದ  ಹಿಂದೆ ಅಗ್ನಿಶ್ರೀಧರ್‌ ಇದ್ದಾರೆ.

ಅಗ್ನಿಶ್ರೀಧರ್‌ ಅವರು ಚಿತ್ರದ ಕಥೆ, ಚಿತ್ರಕಥೆ ಮಾಡಿದ್ದಾರೆ. ಹಿಂದೆ ಕೂಡ ಅಗ್ನಿಶ್ರೀಧರ್‌ “ಆ ದಿನಗಳು’ ಮತ್ತು “ಎದೆಗಾರಿಕೆ’ ಚಿತ್ರಗಳ ಹಿಂದೆ  ನಿಂತಿದ್ದರು. ಆ ಎರಡು ಸಿನಿಮಾಗಳು ಭರ್ಜರಿ ಯಶಸ್ಸು ಪಡೆದಿದ್ದು  ಗೊತ್ತೇ ಇದೆ. ಈಗ ಜಯರಾಜ್‌ ಬಯೋಪಿಕ್‌ ಹಿಂದೆ ಇದ್ದಾರೆ. ಇಲ್ಲಿ ಧನಂಜಯ್‌ ಅವರು ಅಂಡರ್‌ವರ್ಲ್ಡ್ ಕಥೆ ಸಿನಿಮಾದಲ್ಲಿ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿತ್ರದ ಮೇಲೆ ಮತ್ತಷ್ಟು ನಿರೀಕ್ಷೆಯೂ ಹೆಚ್ಚಿದೆ.

ಸದ್ಯಕ್ಕೆ  ಧನಂಜಯ್‌ ಈ ಚಿತ್ರದ ಮೇಲೆ ಗಮನಹರಿಸಿದ್ದು, ಪಾತ್ರಕ್ಕಾಗಿಯೇ ಅವರು ಪಕ್ವಗೊಳ್ಳುತ್ತಿದ್ದಾರೆ. ಎಲ್ಲವೂ ನೈಜತೆಯಿಂದ ಕೂಡಿರಬೇಕು ಎಂಬ ಉದ್ದೇಶದಿಂದ ಸ್ಕ್ರಿಪ್ಟ್ಗೆ ಏನೆಲ್ಲಾ ಬೇಕೋ ಹಾಗೆ ಕಾಣಿಸಿಕೊಳ್ಳುವ ಸಲುವಾಗಿ  ರೆಡಿಯಾಗುತ್ತಿರುವುದು ಅವರ ಫ್ಯಾನ್ಸ್‌ಗೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.