ಐಐಟಿ-ಐಐಐಟಿಗೆ ಡಿಸಿ ಭೇಟಿ : ಸಮಯಮಿತಿಯಲ್ಲಿ ನಿರ್ಮಾಣ ಕೆಲಸ ಮುಗಿಸಲು ನಿತೇಶ ಸೂಚನೆ
Team Udayavani, Sep 27, 2020, 2:25 PM IST
ಧಾರವಾಡ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ರಸ್ತೆ, ಕಟ್ಟಡ ಸೇರಿದಂತೆ ಮೂಲ ಸೌಕರ್ಯ ಕಾಮಗಾರಿಗಳ ನಿರ್ಮಾಣ ಪ್ರಗತಿ ಪರಿಶೀಲನೆ ನಡೆಸಿದರು.
ಐಐಟಿಯ ನೂತನ ಕ್ಯಾಂಪಸ್ ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಹಾಗೂ ಡಾಂಬರೀಕರಣ, ನೂತನ ಕಟ್ಟಡ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲು ಮತ್ತು ಅರಣ್ಯ ಇಲಾಖೆಗೆ ಸಂಬಂ ಧಿಸಿದ ಜಾಗವನ್ನು ಸರ್ವೇ ಮಾಡಿ ಐಐಟಿ ನೂತನ ಕ್ಯಾಂಪಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಧಾರವಾಡ ತಾಲೂಕಿನಲ್ಲಿ ಐಐಐಟಿಯ ಶಾಶ್ವತ ಶಿಬಿರಕ್ಕೆ ರಸ್ತೆ ಕಾಮಗಾರಿಯು 720 ಲಕ್ಷ ರೂ.ಗೆ ಸರ್ಕಾರದಿಂದ ಅನುಮೋದನೆಯಾಗಿದ್ದು, ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ.
ರಸ್ತೆ ಕಾಮಗಾರಿಯನ್ನು ಪರೀಕ್ಷಿಸಲಾಗಿ ಇಟಿಗಟ್ಟಿ ಗ್ರಾಮದಲ್ಲಿ ಕಾಂಕ್ರೀಟ್ ಗಟಾರ ಕಾಮಗಾರಿ ಹಾಗೂ ಸಿಡಿಗಳ ಕಾಮಗಾರಿ ಪೂರ್ಣಗೊಂಡಿದ್ದು, ಫಾರ್ಮೇಶನ್ ಕಾಮಗಾರಿಯು ಪ್ರಗತಿಯಲ್ಲಿದೆ. ಗುಣ್ಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾಮಗಾರಿಗಳ ವೀಕ್ಷಣೆಯ ನಂತರ ಜಿಲ್ಲಾಧಿಕಾರಿಗಳು ಪ್ರಸ್ತುತ ಕಾರ್ಯನಿರ್ವಹಿಸುವ ವಾಲ್ಮೀ ಕಟ್ಟಡದ ಐಐಟಿ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮತ್ತು ಆಡಳಿತ ಮಂಡಳಿ ಸದಸ್ಯರೊಂದಿಗೆ ಕಾಮಗಾರಿಗಳ ಪ್ರಗತಿ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಐಐಟಿ ಧಾರವಾಡದ ನಿರ್ದೇಶಕ ಪ್ರೊ| ಪಿ. ಶೇಷು, ಡೀನ್ರಾದ ಪ್ರೊ| ನಾಗೇಶ್ ಆರ್.ಐಯ್ಯರ್, ಪ್ರೊ|ಎಸ್. ಆರ್.ಎಮ್. ಪ್ರಸನ್ನ, ಪ್ರೊ|ಎಸ್.ವಿ. ಪ್ರಭು, ಪ್ರೊ| ಬಿ.ಎಲ್. ತೆಂಬೆ ಮತ್ತು ರಘು ಬಾಬು, ಐಐಐಟಿ ಕುಲಸಚಿವ ಬಸವರಾಜಪ್ಪ ಎಸ್., ಉಪವಿಭಾಗಾಧಿಕಾರಿ ಡಾ| ಗೋಪಾಲಕೃಷ್ಣ ಜಿ., ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಕ ಅಭಿಯಂತ ಎಸ್.ಬಿ.ಚೌಡನ್ನವರ, ತಹಶೀಲ್ದಾರ್ ಸಂತೋಷ ಬಿರಾದಾರ, ತಾಲೂಕಾ ಎಡಿಎಲ್ಆರ್ ಕೆ.ಜಿ.ಲಟ್ಟಿ, ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil