ಧರ್ಮಸ್ಥಳ: ಅಂಚೆ-ಕುಂಚ ಸ್ಪರ್ಧೆ ಪುರಸ್ಕಾರ : ಗಮನ ಸೆಳೆದ ಕುಂಚ-ಗಾನ ನೃತ್ಯ ವೈಭವ


Team Udayavani, Feb 14, 2021, 4:10 AM IST

ಧರ್ಮಸ್ಥಳ: ಅಂಚೆ-ಕುಂಚ ಸ್ಪರ್ಧೆ ಪುರಸ್ಕಾರ : ಗಮನ ಸೆಳೆದ ಕುಂಚ-ಗಾನ ನೃತ್ಯ ವೈಭವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್‌ ಆಶ್ರಯದಲ್ಲಿ ಆಯೋಜಿಸಿದ್ದ 18ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಜರಗಿದ ಪುರಸ್ಕಾರ ಸಮಾರಂಭದಲ್ಲಿ ಕುಂಚ-ಗಾನ-ನೃತ್ಯ ವೈಭವ ಕಣ್ಮನ ಸೆಳೆಯಿತು.

ಬೆಂಗಳೂರಿನ ಚಿತ್ರಕಲಾವಿದ ಬಾಗೂರು ಮಾರ್ಕಾಂಡೇಯ ಹಾಗೂ ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಏಕಕಾಲದಲ್ಲಿ ಕುಂಚ-ಗಾನ-ನೃತ್ಯ ವೈಭವ ಸಾದರಪಡಿಸಿದ್ದು, ಮೆಚ್ಚುಗೆಗೆ ಪಾತ್ರವಾಯಿತು.

“ಇರುವಂತೆ ಇರಬೇಕು ತೊರೆದು ಚಿಂತೆಯನು’ ಹಾಡಿಗೆ ವಿದುಷಿ ಶೀಲಾ ದಿವಾಕರ್‌ ರಾಗ ಸಂಯೋಜಿಸಿ ಹಾಡಿದ್ದು, ವಿದುಷಿ ಶಾರದಾಮಣಿ ಶೇಖರ್‌, ಶ್ರೀಲತಾ ನಾಗರಾಜ್‌ ನೃತ್ಯ ಸಂಯೋಜನೆ ಮಾಡಿದ್ದರು. ವಿದುಷಿಗಳಾದ ದಿವ್ಯಶ್ರೀ, ವಾಣಿಶ್ರೀ, ದೀಪ್ತಿ, ದೀಕ್ಷಾ ಶೆಟ್ಟಿ, ದೀಪಾ ಲಕ್ಷ್ಮೀ ನೃತ್ಯ ಪ್ರಸ್ತುತ ಪಡಿಸಿದರು.

ಸ್ಪರ್ಧೆಗೆ ಈ ಬಾರಿ ಕಿನಾರೆ ಎಂಬ ವಿಷಯ ನೀಡಲಾಗಿತ್ತು. ರಾಜ್ಯಮಟ್ಟದ ಅಂಚ-ಕುಂಚ ಸ್ಪರ್ಧೆಯಲ್ಲಿ ಮಕ್ಕಳು ಅಂಚೆ ಕಾರ್ಡಿನಲ್ಲಿ ಸಮುದ್ರ ಕಿನಾರೆಯ ಆಕರ್ಷಕ ಚಿತ್ರಗಳನ್ನು ಬಿಡಿಸಿದ್ದರು. ಬಹುಮಾನ ಗಳಿಸಿದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಯಿತು. ಹೆಚ್ಚಿನ ಸ್ಪರ್ಧಾ ವಿಜೇತರು ಡಾ| ಹೆಗ್ಗಡೆ ಅವರ ಚಿತ್ರವನ್ನು ಬಿಡಿಸಿ ಉಡುಗೊರೆಯಾಗಿ ನೀಡಿದರು.

ಕರ್ನಾಟಕ ಕಲಾಶ್ರೀ, ನಟ ಡಾ| ಶ್ರೀಧರ್‌ ಪುರಸ್ಕಾರ ನೀಡಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದರು. ಶಾಂತಿವನ ಟ್ರಸ್ಟಿಗಳಾದ ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್‌, ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ, ಡಾ| ಐ.ಶಶಿಕಾಂತ್‌ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

ನಾಲ್ಕು ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ
ಕಿನಾರೆ ಎಂಬ ವಿಷಯದಲ್ಲಿ ಒಟ್ಟು ನಾಲ್ಕು ಪ್ರತ್ಯೇಕ ವಿಭಾಗಗಳಾದ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ, ಸಾರ್ವಜನಿಕ ವಿಭಾಗದಲ್ಲಿ ಅಂಚೆ-ಕುಂಚ ಸ್ಪರ್ಧೆ ಆಯೋಜಿಸಲಾಗಿತ್ತು. ನಾಲ್ಕು ವಿಭಾಗಗಳಿಂದ 16,230 ಸ್ಪರ್ಧಾಳುಗಳು ಭಾಗವಹಿಸಿದರು. ನಾಡಿನಾದ್ಯಂತ ವ್ಯಾಪಕ ಪ್ರಕ್ರಿಯೆ ದೊರೆ ಯುತ್ತಿದ್ದು, ಸುಪ್ತ ಕಲಾ ಪ್ರತಿಭೆಗಳನ್ನು ಬೆಳಕಿಗೆ ತರುವ ಉದ್ದೇಶದಿಂದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಕಳೆದ 18 ವರ್ಷಗಳಿಂದ ಈ ವಿಶಿಷ್ಟ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಈವರೆಗೆ ನಡೆದ ಅಂಚೆಕುಂಚ ಸ್ಪರ್ಧೆಗಳಲ್ಲಿ 2,22,950 ಮಂದಿ ಭಾಗವಹಿಸಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.