ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ, ಶತದಿನೋತ್ಸವ ಸಂಭ್ರಮ


Team Udayavani, Feb 13, 2020, 3:06 AM IST

dharmastaladalli

ಬೆಳ್ತಂಗಡಿ: ಕುಟುಂಬ ಪ್ರಧಾನ ವ್ಯವಸ್ಥೆಯ ಭಾರತದ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮಂಜುನಾಥನ ಸನ್ನಿಧಿಯಲ್ಲಿ, ಸರ್ಕಾರದ ಯೋಜನೆಗಿಂತಲೂ ಮಿಗಿಲಾದ ಡಾ.ಹೆಗ್ಗಡೆ ಅವರ ಸಮಾಜಮುಖೀ ಚಿಂತನೆಯಿಂದ ಗ್ರಾಮ, ಗ್ರಾಮಗಳು ವ್ಯಸನಮುಕ್ತ ವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್‌ ಹೇಳಿದರು.

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ವ್ಯಸನಮುಕ್ತ ಸಾಧ ಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಡು ಮುಟ್ಟದ ಸೊಪ್ಪಿಲ್ಲ, ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ.ಹೆಗ್ಗಡೆ ತಲುಪದ ಸೇವಾ ಕ್ಷೇತ್ರವಿಲ್ಲ ಎಂದು ಹೇಳಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನವಜೀವನ ಸಮಿತಿ ಆಶ್ರಯದಲ್ಲಿ ವ್ಯಸನಮುಕ್ತ ಆರೋಗ್ಯ ಪೂರ್ಣ ಸಮಾಜ ರೂಪಿಸುವ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದರು.

ದುಶ್ಚಟಗಳ ದಮನ ಸಂಕಲ್ಪ ಶಕ್ತಿ ಹೊಂದಿ: ಹೇಮಾ ವತಿ ವೀ.ಹೆಗ್ಗಡೆ ಮಾತನಾಡಿ, ಮಹಿಳೆಯರು ದುಶ್ಚಟಗಳ ದಮನ ಮಾಡುವ ಸಂಕಲ್ಪ ಶಕ್ತಿ ಮತ್ತು ಆತ್ಮಬಲ ಹೊಂದಿರಬೇಕು. ಜನ ಜಾಗೃತಿ ವೇದಿಕೆಯ ನಿರಂತರ ಪರಿಶ್ರಮ- ಪ್ರಯತ್ನದಿಂದ ವ್ಯಸನ ಮುಕ್ತರಾಗಿ ಅನೇಕ ಕುಟುಂಬಗಳು ಇಂದು ಚೇತರಿಸಿ ನವಜೀವನ ನಡೆಸುತ್ತಿವೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ವ್ಯಸನಮುಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಪವಿತ್ರಾತ್ಮರಾಗಿ ದ್ದೀರಿ.

ಮುಂದೆ ದೃಢ ಸಂಕಲ್ಪದಿಂದ ಅಂತರಂಗ- ಬಹಿರಂಗ ಪರಿ ಶುದ್ಧರಾಗಿ ಆರೋಗ್ಯಪೂರ್ಣ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ. ರೋಹಿಣಿ, ಶ್ರೀ.ಕ್ಷೇ.ಧ.ಗ್ರಾ.ಯೋ.ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಎಲ್‌.ಎಚ್‌. ಮಂಜುನಾಥ್‌, ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಸತೀಶ್‌ ಹೊನ್ನವಳ್ಳಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ದೇವದಾಸ್‌ ಹೆಬ್ಟಾರ್‌, ಶಾಸಕ ಹರೀಶ್‌ ಪೂಂಜ, ಜನ ಜಾಗೃತಿ ವೇದಿಕೆ ನಿರ್ದೇಶಕ ವಿವೇಕ್‌ ವಿ.ಪಾಸ್‌, ವೇದಿಕೆ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ, ಭಾಸ್ಕರ್‌ ಎನ್‌.ಮತ್ತು ನಾಗೇಶ್‌ ಉಪಸ್ಥಿತರಿದ್ದರು.

ಸನ್ಮಾನ, ಜಾಗೃತಿ ಅಣ್ಣ-ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ
-ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲ್ಯಾನ್‌ಅವರನ್ನು ಸನ್ಮಾನಿಸಲಾಯಿತು.

-ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ.ರೋಹಿಣಿ ಜನಜಾಗೃತಿ ವೇದಿಕೆಗೆ ಮದ್ಯವರ್ಜನ ಶಿಬಿರ ಆಯೋಜಿಸಲು 10 ಲಕ್ಷ ರೂ.ನೆರವು ನೀಡಿದರು.

-ಮದ್ಯವರ್ಜನ ಶಿಬಿರದಲ್ಲಿ ವ್ಯಸನಮುಕ್ತರಾಗಿ ನವಜೀವನ ನಡೆಸುತ್ತಿರುವ ಹುಣಸೂರಿನ ಕೃಷ್ಣೇಗೌಡ ಮತ್ತು ಮಂಡ್ಯದ ಸವಿತಾ ರುದ್ರಾಚಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

-ಮದ್ಯ ವ್ಯಸನಿಗಳ ಮನ ಪರಿವರ್ತನೆ ಮಾಡಿ ವ್ಯಸನಮುಕ್ತರ ನ್ನಾಗಿ ಮಾಡಿದ 10 ಮಂದಿ ಸಾಧಕರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪುರಸ್ಕಾರ ನೀಡಿ ಗೌರವಿಸಲಾಯಿತು.

-ವೇದಿಕೆಯ ಅನಂತ್‌ ಅವರು ಶ್ರೀ ಮಂಜುನಾಥ ಸ್ವಾಮಿ ಕುರಿತು ರಚಿಸಿದ ಭಕ್ತಿಗೀತೆಯ ದ್ವನಿಸುರುಳಿಯನ್ನು ಡಾ|ಹೆಗ್ಗಡೆ ಬಿಡುಗಡೆಗೊಳಿಸಿದರು.

-ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್‌ ಅವರನ್ನು ಹೆಗ್ಗಡೆಯವರು ಗೌರವಿಸಿದರು.

ಶಾಲಾ-ಕಾಲೇಜುಗಳ ಬಳಿ ಡ್ರಗ್ಸ್‌ ಮಾರಾಟ ಜಾಲ ಹೆಚ್ಚಾಗುತ್ತಿದೆ. ಇದನ್ನು ಸರ್ಕಾರ ತಡೆಗಟ್ಟಬೇಕು. ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದಂತೆ ತಡೆಯಲು ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಲಾಗುತ್ತಿದೆ.
-ಡಾ.ಡಿ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ಧರ್ಮಾಧಿಕಾರಿ

ಕಿರು ಆರ್ಥಿಕ ಯೋಜನೆ ಮೂಲಕ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಶೇಕಡಾ ನೂರರಷ್ಟು ಸಾಲ ಮರು ಪಾವತಿಯಾಗುತ್ತಿದೆ. ಮಹಿಳೆಯರು ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಬೇಕು.
-ಶಶಿಕಲಾ ಜೊಲ್ಲೆ ಅನ್ನಾಸಾಹೇಬ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.