Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ
Team Udayavani, May 25, 2024, 11:54 PM IST
ಬೆಳ್ತಂಗಡಿ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಮಂಟಪದಲ್ಲಿ ಕಟ್ಟೆಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜ ಮರ ಇಳಿಸುವ ಕಾರ್ಯಕ್ರಮದೊಂದಿಗೆ ವಿಶೇಷ ಉತ್ಸವ, ಸೇವೆಗಳು ಸಮಾಪನಗೊಂಡವು. ಮುಂದಿನ ದೀಪಾವಳಿ ವೇಳೆಗೆ ಮತ್ತೆ ಎಂದಿನಂತೆ ಉತ್ಸವ, ವಿಶೇಷ ಸೇವೆಗಳು ಪ್ರಾರಂಭಗೊಳ್ಳುತ್ತವೆ.
ಕ್ಷೇತ್ರದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ವಾರ್ಷಿಕ ತಿರುಗಾಟ ಸಮಾಪ್ತಿಗೊಳಿಸಿ ಬೆಳಗ್ಗೆ ಮೇಳದ ಶ್ರೀ ಮಹಾಗಣಪತಿ ದೇವರನ್ನು ಹಿಂದಿನ ದಿನ ಮುಂಡಾಜೆ ಶಿಬಿರದಿಂದ ಧರ್ಮಸ್ಥಳದ ಮಂಜು ಕೃಪಾಕ್ಕೆ ಬರಮಾಡಿಕೊಂಡು ಅಲ್ಲಿ ಮಧ್ಯಾಹ್ನ ಗಣಪತಿಹೋಮ, ಮಹಾ ಪೂಜೆ ನಡೆಯಿತು.
ಮೇಳದ ಯಜಮಾನ ಡಿ. ಹಷೇìಂದ್ರ ಕುಮಾರ್ ನೇತೃತ್ವದಲ್ಲಿ ಸಂಜೆ ವೈಭವದ ಮೆರವಣಿಗೆಯಲ್ಲಿ ಶ್ರೀಮಹಾಗಣಪತಿ ದೇವರನ್ನು ಬರಮಾಡಿ ಕೊಳ್ಳಲಾಯಿತು. ದೇಗುಲದ ಎದುರು ಮತ್ತು ಬೀಡಿನ ಮುಂಭಾಗದಲ್ಲಿ ನರ್ತನ ಸೇವೆ ನಡೆಸಿ ಶ್ರೀ ದೇವರನ್ನು ಛತ್ರ ಗಣಪತಿ ಗುಡಿಯಲ್ಲಿರಿಸಿ ಪೂಜಿಸಲಾಯಿತು.
ಹೇಮಾವತಿ ವೀ. ಹೆಗ್ಗಡೆ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಹೆಗ್ಗಡೆ ಕುಟುಂಬಸ್ಥರು, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಸೀತಾರಾಮ ತೋಳ್ಪಡಿತ್ತಾಯ, ಮಣೆಗಾರ್ ವಸಂತ ಮಂಜಿತ್ತಾಯ, ಪಾರುಪತ್ಯದಾರ ಲಕ್ಷ್ಮೀನಾರಾಯಣ ರಾವ್, ಬಿ.ಭುಜಬಲಿ, ಉಜಿರೆ ಅಶೋಕ ಭಟ್, ಕ್ಷೇತ್ರದ ಸಿಬಂದಿ, ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ
Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ
Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
MUST WATCH
ಹೊಸ ಸೇರ್ಪಡೆ
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.