Health: ಡಯಾಲಿಸಿಸ್‌ ಕೇಂದ್ರಕ್ಕೆ ಬೇಕಿದೆ ಚಿಕಿತ್ಸೆ- ಕಿಡ್ನಿ ವೈಫ‌ಲ್ಯಕ್ಕೊಳಗಾದವರ ಫ‌‌ಜೀತಿ

-ವಾರ್ಷಿಕವಾಗಿ 50 ಸಾವಿರ ಮಂದಿ ಬಲಿ

Team Udayavani, Oct 1, 2023, 8:06 PM IST

dialisis

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿರುವ 169 ಡಯಾಲಿಸಿಸ್‌ ಯೂನಿಟ್‌ಗಳಲ್ಲಿ ನಿರ್ವಹಣೆ ಕೊರತೆಯಿಂದ ಸೂಕ್ತ ಸೇವೆ ಸಿಗದೇ ಕಿಡ್ನಿ ವೈಫ‌ಲ್ಯಕ್ಕೊಳಗಾದ ಸಾವಿರಾರು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್‌ನ ಪ್ರತಿ ಯೂನಿಟ್‌ಗಳಲ್ಲಿ ಓರ್ವ ನೆಫ್ರೋಲಾಜಿಸ್ಟ್‌ , 1 ಎಂಬಿಬಿಎಸ್‌ ವೈದ್ಯರು, 3 ಬೆಡ್‌ಗೆ ಒಬ್ಬ ಡಯಾಲಿಸಿಸ್‌ ಟೆಕ್ನಿಷಿಯನ್‌ ಇರಬೇಕೆಂಬ ನಿಯಮವಿದೆ. ಆದರೆ, ಸದ್ಯ 120 ಡಯಾಲಿಸಿಸ್‌ ಯೂನಿಟ್‌ಗಳಲ್ಲಿ ನೆಪ್ರೋಲಾಜಿಸ್ಟ್‌ ವೈದ್ಯರೇ ಇಲ್ಲ. ತಜ್ಞ ವೈದ್ಯರು ಮಾಡಬೇಕಿರುವ ಡಯಾಲಿಸಿಸ್‌ ಪ್ರಕ್ರಿಯೆಗಳನ್ನು ಟೆಕ್ನಿಷಿಯನ್‌ಗಳ ಕೈಯಲ್ಲೇ ಮಾಡಿಸಲಾಗುತ್ತಿದೆ. ಇತ್ತ ಡಯಾಲಿಸಿಸ್‌ ಯೂನಿಟ್‌ಗಳ ನಿರ್ವಹಣೆ ಕೊರತೆಯಿಂದ ಕಿಡ್ನಿ ವೈಫ‌ಲ್ಯಕ್ಕೊಳಗಾದ 10 ಸಾವಿರಕ್ಕೂ ಅಧಿಕ ಮಂದಿ ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ.

ಡಯಾಲಿಸಿಸ್‌ ಯೂನಿಟ್‌ನ ಕೊರತೆಗಳೇನು ?: ಬಹುತೇಕ ಯೂನಿಟ್‌ಗಳಲ್ಲಿ ಅರ್ಧದಷ್ಟು ಎಂಬಿಬಿಎಸ್‌ ವೈದ್ಯರಿಲ್ಲ. ಇತ್ತ ಟೆಕ್ನಿಷಿಯನ್‌ಗಳಿಗೆ 2 ವರ್ಷಗಳಿಂದ ಗುತ್ತಿಗೆ ಸಂಸ್ಥೆಗಳು ಸಮಯಕ್ಕೆ ಸರಿಯಾಗಿ ವೇತನ ಪಾವತಿಸದೇ ಕೆಲಸಕ್ಕೆ ಗೈರಾಗಿ ಪ್ರತಿಭಟನೆಗೆ ಮುಂದಾಗುತ್ತಲೇ ಇದ್ದಾರೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್‌ ವ್ಯವಸ್ಥೆ ಇದ್ದರೂ ನಿರ್ವಹಣಾ ವೈಫ‌ಲ್ಯದಿಂದ ನೊಂದು ಬಡ ರೋಗಿಗಳು ದುಡ್ಡು ತೆತ್ತು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ ರಾಜ್ಯದಲ್ಲಿ ಕಿಡ್ನಿ ವೈಫ‌ಲ್ಯಕ್ಕೆ ವಾರ್ಷಿಕವಾಗಿ 50 ಸಾವಿರ ಮಂದಿ ಬಲಿಯಾಗುತ್ತಿದ್ದಾರೆ ಎನ್ನಲಾಗಿದೆ.

ಸಿಂಗಲ್‌ ಯೂಸರ್‌ ಡಯಾಲಿಸಿಸ್‌ ಲಭ್ಯ
ಇದುವರೆಗೆ ಖಾಸಗಿಯಲ್ಲಿ ಮಾತ್ರ ದೊರಕುತ್ತಿದ್ದ ಸಿಂಗಲ್‌ ಯೂಸರ್‌ ಡಯಾಲಿಸಿಸ್‌ ವ್ಯವಸ್ಥೆಯು ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲೂ ಲಭ್ಯವಿರಲಿದೆ. ಇದುವರೆಗೆ ಒಬ್ಬ ವ್ಯಕ್ತಿಗೆ ಡಯಾಲಿಸಿಸ್‌ ಮಾಡಿ ಅದನ್ನು ಶುಚಿಗೊಳಿಸಿ ಬಾಕ್ಸ್‌ನಲ್ಲಿ ಇಟ್ಟು ಮತ್ತೂಮ್ಮೆ ಆತ ಬಂದಾಗ ಅದನ್ನೇ ಮರು ಬಳಕೆ ಮಾಡಲಾಗುತ್ತಿತ್ತು. ಇನ್ನು ಮುಂದೆ ಈ ಸಮಸ್ಯೆಗೆ ಮುಕ್ತಿ ಸಿಗಲಿದೆ. ಸಿಂಗಲ್‌ ಯೂಸರ್‌ ಡಯಾಲಿಸಿಸ್‌ ಅನ್ನು ಬಳಕೆ ಮಾಡಿ ಎಸೆಯಲಾಗುತ್ತದೆ. ಒಂದು ಡಯಾಲಿಸಿಸ್‌ಗೆ ಅಂದಾಜು 1,500 ರೂ. ತಗುಲಲಿದೆ.

ಸರ್ಕಾರ ನೀಡುತ್ತಿರುವ ಉಚಿತ ಡಯಾಲಿಸಿಸ್‌ನಿಂದ ಸಾವಿರಾರು ಬಡ ಜನರಿಗೆ ಅನುಕೂಲ ಆಗಿದೆ. ಸೂಕ್ತ ಅರ್ಹತೆ ಹೊಂದಿರುವ ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡುತ್ತೇವೆ.
| ಡಾ. ನವೀನ್‌ ಭಟ್‌, ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಇಲಾಖೆ.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.