Passport ಪ್ರಕ್ರಿಯೆಗೆ ಡಿಜಿಲಾಕರ್‌ : ಸರಕಾರದಿಂದ ಮಹತ್ವದ ಬದಲಾವಣೆ ಜಾರಿ


Team Udayavani, Aug 21, 2023, 7:35 AM IST

1-qwewqe

ಭಾರತ ಡಿಜಿಟಲ್‌ ಇಂಡಿಯಾ ಪರಿಕಲ್ಪನೆಯಡಿಯಲ್ಲಿ ಪ್ರತೀ ಸೇವೆಯಲ್ಲೂ ಡಿಜಿಟಲ್‌
ಸ್ಪರ್ಶವನ್ನು ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಹೊಸಹೊಸ ನಿಯಮಗಳನ್ನು, ಯೋಜನೆಗಳನ್ನು ಜಾರಿಗೆ ತಂದಿದೆ. ಡಿಜಿಟಲ್‌ ಕರೆನ್ಸಿಯಿಂದ ಹಿಡಿದು, ಯುಪಿಐ ಪೇಮೆಂಟ್‌ವರೆಗೂ ಬಂದಿದ್ದೇವೆ. ಇದೀಗ ಪಾಸ್‌ಪೋರ್ಟ್‌ ವ್ಯವಸ್ಥೆಯಲ್ಲಿ ಭಾರತ ಸರಕಾರ ಹೊಸ ಬದಲಾವಣೆಯನ್ನು ತಂದಿದೆ. ಏನಿದು ಹೊಸ ನಿಯಮ ? ಇದು ಹೇಗೆ ಕಾರ್ಯ ನಿರ್ವಹಿಸಲಿದೆ ? ಎಂಬುದರ ಮಾಹಿತಿ ಇಲ್ಲಿದೆ.

ಏನು ಬದಲಾವಣೆ ?
ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭ ಹೊಸ ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸುವವರು ಇನ್ನು ಮುಂದೆ ತಮ್ಮ ಮಾಹಿತಿಗಳನ್ನು ಸರಕಾರದ ಡಿಜಿಲಾಕರ್‌ ವ್ಯವಸ್ಥೆಯ ಅಡಿಯಲ್ಲಿ ಸಲ್ಲಿಸಬಹುದಾಗಿದೆ. ಆ.5ರಿಂದ ಈ ವ್ಯವಸ್ಥೆ ಜಾರಿಯಲ್ಲಿದೆ. ಡಿಜಿಲಾಕರ್‌ನಲ್ಲಿ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಿದ ಅನಂತರ ಪಾಸ್‌ಪೋರ್ಟ್‌ಗೆ ಅರ್ಜಿ ಯನ್ನು ಸಹ ಆನ್‌ಲೈನ್‌ ಮೂಲಕವೇ ಸಲ್ಲಿಸಬಹುದಾಗಿದೆ. ಡಿಜಿಲಾಕರ್‌ ಖಾತೆಯಲ್ಲಿ ಪಾಸ್‌ ಪೋರ್ಟ್‌ಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು scan ಮಾಡಿ ಸಂಗ್ರಹಿಸಿ ಇಡಬೇಕು. ಅನಂತರ ಆನ್‌ಲೈನ್‌ ಮೂಲಕ www.passportindia.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

ಯಾಕಾಗಿ ನಿಯಮ ?
ಪಾಸ್‌ಪೋರ್ಟ್‌ ಕೇಂದ್ರಗಳು ಹಾಗೂ ಪೋಸ್ಟ್‌ ಆಫೀಸ್‌ ಪಾಸ್‌ಪೋರ್ಟ್‌ ಸೇವಾ ಕೇಂದ್ರದಲ್ಲಿ ಅರ್ಜಿ ದಾಖಲಾತಿಯ ಭೌತಿಕ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿತ್ತು. ಆದರೆ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದ್ದರಿಂದ, ವ್ಯವಸ್ಥೆಯನ್ನು ಸರಳೀಕರಣಗೊಳಿಸುವಂತೆ ಜನಸಾಮಾನ್ಯರು ವಿದೇಶಾಂಗ ಸಚಿವಾಲಯಕ್ಕೆ ಮನವಿ ನೀಡಿದ್ದರು. ಹಾಗಾಗಿ ಈ ಹೊಸ ವಿಧಾನವನ್ನು ಜಾರಿಗೊಳಿಸಲಾಗಿದೆ.

ಸಮಯ ಉಳಿಕೆ, ಗುಣಮಟ್ಟ ಏರಿಕೆ
ಒಮ್ಮೆ ಡಿಜಿಲಾಕರ್‌ನಲ್ಲಿ ಮಾಹಿತಿಗಳನ್ನು ಸಲ್ಲಿಸಿದ ಅನಂತರ ಅರ್ಜಿದಾರರು ಮಾಹಿತಿಯ ಮುದ್ರಿತ ಪ್ರತಿಗಳನ್ನು ಸಲ್ಲಿಸಬೇಕಾದ ಅಗತ್ಯವಿರುವುದಿಲ್ಲ. ಹಾಗಾಗಿ ಅರ್ಜಿದಾರರಿಗೆ ಮಾಹಿತಿಯ ಪ್ರತಿಗಳನ್ನು ಹಿಡಿದು ಅಲೆಯುವ ಹೊರೆ ತಗ್ಗಲಿದೆ. ಜತೆಗೆ ಎಲ್ಲವೂ ಆನ್‌ಲೈನ್‌ ಮೂಲಕವೇ ಆಗುವುದರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಒಟ್ಟಾರೆ ಸಮಯವನ್ನು ಇದು ಕಡಿತಗೊಳಿಸಲಿದ್ದು, ಗುಣಮಟ್ಟವೂ ಏರಿಕೆಯಾಗಲಿದೆ.

ಏನಿದು ಡಿಜಿಲಾಕರ್‌ ?
ಭಾರತ ಸರಕಾರದ ಎಲೆಕ್ಟ್ರಾನಿಕ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಜಾರಿಗೆ ತಂದಿರುವ ಡಿಜಿಟಲ್‌ ಸೇವೆ. ಈ ಡಿಜಿಲಾಕರ್‌ನಲ್ಲಿ ಸರಕಾರದಿಂದ ನೀಡುವ ಅಗತ್ಯ ದಾಖಲೆಗಳನ್ನು ಸುರಕ್ಷಿತವಾಗಿ ಶೇಖರಿಸಬಹುದಾಗಿದೆ. ಅಲ್ಲದೇ ಯಾವ ಸಮಯದಲ್ಲಿ ಬೇಕಾದರೂ ದಾಖಲೆಗಳನ್ನು ಸುಲಭವಾಗಿ ಪಡೆಯಬಹುದು.

ಡಿಜಿಲಾಕರ್‌ ಬಳಕೆ ಹೇಗೆ ?
ಡಿಜಿಲಾಕರ್‌ ಖಾತೆಯನ್ನು ತೆರೆಯಲು https://digitallocker.gov.in/ ಭೇಟಿ ನೀಡಿ ನಮ್ಮ ಆಧಾರ ಸಂಖ್ಯೆಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ಮೂಲಕ ರಿಜಿಸ್ಟ್‌ರ್‌ ಮಾಡಿಕೊಳ್ಳಬೇಕು. ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ಗೆ ಬರುವ ಒಟಿಪಿ (ಒನ್‌ ಟೈಮ್‌ ಪಾಸ್‌ವರ್ಡ್‌) ಅನ್ನು ಡಿಜಿಲಾಕರ್‌ ಖಾತೆಯನ್ನು ತೆರೆಯುವಾಗ ನಮೂದಿಸಿ ಲಾಗ್‌ಇನ್‌ ಆಗಬೇಕು.

ಏನೆಲ್ಲ ಸಂಗ್ರಹಿಸಬಹುದು ?
ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ವೋಟರ್‌ ಐಡಿ, ರೇಶನ್‌ ಕಾರ್ಡ್‌, ಆರ್‌ಸಿ, ಡಿಎಲ್‌, ಜನನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್‌ ಪಾಸ್‌ಬುಕ್‌, ಆದಾಯ ತೆರಿಗೆ ಮೌಲ್ಯಮಾಪನ ಆದೇಶ, ಬಾಡಿಗೆ ಒಪ್ಪಂದ, ಅಂಕಪಟ್ಟಿ, ಇತರ ದಾಖಲಾತಿಯನ್ನು ಮೊದಲು ಸ್ಕ್ಯಾನ್‌ ಮಾಡಿ ಡಿಜಿಲಾಕರ್‌ ಖಾತೆಯಲ್ಲಿ ಸಂಗ್ರಹ ಮಾಡಬಹುದು.

 ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.