ಅಭಿವೃದ್ಧಿಗೆ ಡಿಜಿಟಲ್ ಸ್ಪರ್ಶ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3ಎಐ ಕೇಂದ್ರ ಸ್ಥಾಪನೆ
ವಿವಿಧ ಕ್ಷೇತ್ರಗಳ ಸಮಸ್ಯೆ ಪರಿಹಾರಕ್ಕೆ ಪೂರಕ; ಬೆಳೆ ಅಂದಾಜು ಪ್ರಕ್ರಿಯೆಗೆ ಕೃತಕ ಬುದ್ಧಿಮತ್ತೆ
Team Udayavani, Feb 2, 2023, 6:30 AM IST
ಕೃತಕ ಬುದ್ಧಿಮತ್ತೆ (ಎಐ)ಯಿಂದ ಹಿಡಿದು, ರಾಷ್ಟ್ರೀಯ ದತ್ತಾಂಶ ನೀತಿ ಆಡಳಿತದವರೆಗೆ ವಿವಿಧ ಪ್ರಸ್ತಾವಿತ ಕ್ರಮಗಳ ಮೂಲಕ ಸರ್ಕಾರ ಡಿಜಿಟಲ್ ಇಂಡಿಯಾ ಸಾಧನೆಗೆ ಒತ್ತು ನೀಡಿದೆ.”ಕೃತಕ ಬುದ್ಧಿಮತ್ತೆ (ಎಐ)ಭಾರತದಲ್ಲೇ ಅಭಿವೃದ್ಧಿಯಾಗಲಿ, ಭಾರತಕ್ಕಾಗಿಯೇ ಕಾರ್ಯನಿರ್ವಹಿಸಲಿ’ ಎನ್ನುವ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3 ಕೃತಕ ಬುದ್ಧಿಮತ್ತ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ.
ಕೃಷಿ, ಆರೋಗ್ಯ ಕ್ಷೇತ್ರ ಹಾಗೂ ನಗರದ ಪ್ರದೇಶಗಳಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಅನ್ವೇಷಿಸಲು ಕೃತಕ ಬುದ್ಧಿಮತ್ತೆಯನ್ನು ಬಳಕೆಮಾಡಲು ಉದ್ದೇಶಿಸಲಾಗಿದೆ.ಜತೆಗೆ ಕೇಂದ್ರದ ಸ್ಥಾಪನೆಯಿಂದ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಎಐ ಅಭಿವೃದ್ಧಿಗೆ ಉತ್ತೇಜನ ನೀಡುವುದಲ್ಲದೇ, ಸಂಶೋಧನಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಉದ್ಯಮ ಸಂಸ್ಥೆಗಳು ಕೈ ಜೋಡಿಸಲಿವೆ. ಈ ಮೂಲಕ ಉದ್ಯೋಗ ಸೃಷ್ಟಿಗೂ ಈ ಕ್ರಮ ಸಹಕಾರಿಯಾಗಲಿದೆ.
ಇದಲ್ಲದೇ, ನವೋದ್ಯಮ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಸಂಶೋಧನೆಗಳನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ದತ್ತಾಂಶ ಆಡಳಿತ ನೀತಿಯನ್ನು ಜಾರಿಗೊಳಿಸುವುದಾಗಿ ತಿಳಿಸಲಾಗಿದೆ.
ಈ ಕ್ರಮದಿಂದ ಸಂಶೋಧನೆಗೆ ಪೂರಕವಾಗಲಿರುವ ಅನಾಮದೇಶ ದತ್ತಾಂಶಗಳು ಕೂಡ ಲಭ್ಯವಾಗಲಿವೆ. ಇದರ ಜತೆಗೆ ಕೆವೈಸಿ ಪ್ರಕ್ರಿಯೆ ಸರಳೀಕರಣವನ್ನೂ ಪ್ರಸ್ತಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?