ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?


Team Udayavani, Apr 17, 2024, 1:30 AM IST

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಬೆಂಗಳೂರು: ಸೋಮವಾರ ರಾತ್ರಿಯ ರನ್‌ ಪ್ರವಾಹದಲ್ಲಿ ಸನ್‌ರೈಸರ್ ಹೈದರಾಬಾದ್‌ ಗೆದ್ದಿರಬಹುದು, ಆದರೆ ಎಲ್ಲರ ಹೃದಯ ಗೆದ್ದ ಆಟಗಾರನೆಂದರೆ ದಿನೇಶ್‌ ಕಾರ್ತಿಕ್‌. ಪಂದ್ಯ ಬಹುತೇಕ ಕೈ ಜಾರಿದರೂ ಪಟ್ಟು ಸಡಿಲಿಸದೆ ಬ್ಯಾಟಿಂಗ್‌ ಹೋರಾಟ ನಡೆಸಿದ ಡಿ.ಕೆ. ಆರ್‌ಸಿಬಿ ಅಭಿಮಾನಿಗಳಿಗೆ ಸೋಲಿನಲ್ಲೂ ಸಮಾಧಾನ ಮೂಡಿಸಿದರು. ಈ ಸಾಹಸದಿಂದಾಗಿ ಅವರಿಗೆ ಮುಂಬರುವ ವಿಶ್ವಕಪ್‌ನಲ್ಲಿ ಸ್ಥಾನ ಸಿಗಬಹುದೇ ಎಂಬ ಕುತೂಹಲವೀಗ ಗರಿಗೆದರಿದೆ.

ಮುಂಬೈ ವಿರುದ್ಧದ ಹಿಂದಿನ ಪಂದ್ಯದಲ್ಲೂ ಡಿ.ಕೆ. ದಿಟ್ಟ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಇದನ್ನು ಕಂಡ ರೋಹಿತ್‌ ಶರ್ಮ ಕೂಡ ಕಾಲೆಳೆದಿದ್ದರು. ಟಿ20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಬೇಕೆಂಬ ರೀತಿಯಲ್ಲಿ ಆಡುತ್ತಿದ್ದಿ ನೋಡು ಎಂದು ತಮಾಷೆ ಮಾಡಿದ್ದರು. ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ ಕೂಡ ದಿನೇಶ್‌ ಕಾರ್ತಿಕ್‌ ಅವರ ವಿಶ್ವಕಪ್‌ ಆಯ್ಕೆಯ ಸಾಧ್ಯತೆಯನ್ನು ತೆರೆದಿರಿಸಿದ್ದಾರೆ.

ಜೋಶ್‌ ತುಂಬಿದ ಬ್ಯಾಟಿಂಗ್‌
ಹೈದರಾಬಾದ್‌ ವಿರುದ್ಧ ದಿನೇಶ್‌ ಕಾರ್ತಿಕ್‌ ಬ್ಯಾಟ್‌ ಬೀಸಿದ್ದನ್ನು ಕಂಡಾಗ ಅವರ ವಿಶ್ವಕಪ್‌ ಆಯ್ಕೆ ನಿಜವಾಗಲೂ ಬಹುದು ಎಂದೆನಿಸದೇ ಇರದು. 288 ರನ್‌ ಬೆನ್ನಟ್ಟಿ ಹೋಗಿದ್ದ ಆರ್‌ಸಿಬಿ 10 ಓವರ್‌ ಅಂತ್ಯಕ್ಕೆ 122ಕ್ಕೆ 5 ವಿಕೆಟ್‌ ಕಳೆದುಕೊಂಡಿತ್ತು. ದೊಡ್ಡ ಸೋಲು ಕಾದು ನಿಂತಿತ್ತು. ಆದರೆ ಇದನ್ನು ಮರೆಸಿ, ಹೈದರಾಬಾದ್‌ ಆಟಗಾರರೂ ಬೆದರುವ ರೀತಿಯಲ್ಲಿ ಬ್ಯಾಟ್‌ ಬೀಸಿದ ಕಾರ್ತಿಕ್‌, ಪಂದ್ಯಕ್ಕೊಂದು ಜೋಶ್‌ ತುಂಬಿದರು. ಇವರ ಬ್ಯಾಟಿಂಗ್‌ ಅಬ್ಬರ ಕಂಡಾಗ ಆರ್‌ಸಿಬಿ ಈ ದಾಖಲೆ ಮೊತ್ತವನ್ನೂ ಚೇಸ್‌ ಮಾಡಬಹುದೆಂಬ ನಿರೀಕ್ಷೆ ಮೂಡಿದ್ದು ಸುಳ್ಳಲ್ಲ!

6ನೇ ಕ್ರಮಾಂಕದಲ್ಲಿ ಬಂದ ಕಾರ್ತಿಕ್‌ ಸುಂಟರಗಾಳಿಯಂಥ ಬೀಸುಗೆಯಲ್ಲಿ 35 ಎಸೆತಗಳಿಂದ 83 ರನ್‌ ಬಾರಿಸಿದರು. 7 ಸಿಕ್ಸರ್‌, 5 ಬೌಂಡರಿ ಬಾರಿಸಿ ಅಬ್ಬರಿಸಿದರು.

ಫಿನಿಶರ್‌ ಪಾತ್ರ?
ಕಳೆದ ಟಿ20 ವಿಶ್ವಕಪ್‌ ಬಳಿಕ ದಿನೇಶ್‌ ಕಾರ್ತಿಕ್‌ ಟೀಮ್‌ ಇಂಡಿಯಾ ಪರ ಯಾವುದೇ ಟಿ20 ಪಂದ್ಯ ಆಡಿಲ್ಲ. ಈ ಐಪಿಎಲ್‌ನಲ್ಲಿ ಆಡುತ್ತಿರುವ ರೀತಿ ಕಂಡಾಗ ಆಯ್ಕೆಗಾರರ ಕೆಲಸ ಜಟಿಲಗೊಳ್ಳುವುದರಲ್ಲಿ ಅನುಮಾನವಿಲ್ಲ. ಹೈದರಾ ಬಾದ್‌ ವಿರುದ್ಧ 237.14ರ ಸ್ಟ್ರೈಕ್‌ರೇಟ್‌ ದಾಖಲಿಸಿದ್ದಾರೆ. ಆದರೆ ವಿಕೆಟ್‌ ಕೀಪರ್‌ ರೇಸ್‌ನಲ್ಲಿ ಇನ್ನೂ ಅನೇಕರಿದ್ದಾರೆ. ರಿಷಭ್‌ ಪಂತ್‌, ಕೆ.ಎಲ್‌. ರಾಹುಲ್‌, ಸಂಜು ಸ್ಯಾಮ್ಸನ್‌ ಪ್ರಮುಖರು. ಕಾರ್ತಿಕ್‌ ಕೀಪರ್‌ ಅಲ್ಲದೇ ಹೋದರೂ “ಉತ್ತಮ ಫಿನಿಶರ್‌’ ಆಗಿ ತಂಡಕ್ಕೆ ಮರುಪ್ರವೇಶ ಮಾಡಲೂಬಹುದೆಂಬುದು ಅನೇಕರ ಅನಿಸಿಕೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.