ಕದ್ರಿ: ಚರಂಡಿಯಲ್ಲಿ ಗಲೀಜು ನೀರು; ಸ್ಥಳೀಯರಿಗೆ ಸಮಸ್ಯೆ
Team Udayavani, Oct 13, 2022, 9:55 AM IST
ಮಹಾನಗರ: ಶ್ರೀ ಕ್ಷೇತ್ರ ಕದ್ರಿಯ ಸಮೀಪದ ಕದ್ರಿಪಾದೆ ಮತ್ತು ಮಂಜುಶ್ರೀ ಬಡಾವಣೆಗಳ ವ್ಯಾಪ್ತಿಯಲ್ಲಿರುವ ಬೃಹತ್ ಚರಂಡಿಯಲ್ಲಿ ಒಳಚರಂಡಿ ನೀರು ಹರಿಯುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ನಿತ್ಯ ಸಮಸ್ಯೆಯಾಗಿ ಕಾಡುತ್ತಿದೆ.
ಕೆಲವು ಫ್ಲ್ಯಾಟ್ನವರು ಡ್ರೈನೇಜ್ ನೀರನ್ನು ಚರಂಡಿಗೆ ಬಿಡುತ್ತಿದ್ದಾರೆ. ಮಳೆಗಾಲದಲ್ಲಿ ತೋಡು ತುಂಬಾ ನೀರು ಹರಿಯುವುದರಿಂದ ಅಷ್ಟು ಸಮಸ್ಯೆ ಆಗುವುದಿಲ್ಲ.ಆದರೆ ಮಳೆ ನಿಂತ ಅನಂತರ ತೋಡಿನಲ್ಲಿ ನೀರಿನ ಹರಿಯುವಿಕೆ ಕಡಿಮೆಯಾಗಿ ಡ್ರೈನೇಜ್ನ ಕೊಳಕು ವಾಸನೆ ನೀರು ಹರಿಯುತ್ತದೆ. ಅಲ್ಲದೆ ಸೊಳ್ಳೆಗಳ ಉತ್ಪತ್ತಿಯಾಗಿ ತೋಡಿನ ಹತ್ತಿರದ ಮನೆಗಳಲ್ಲಿ ವಾಸಿಸಲು ಅಸಾಧ್ಯವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಬಗ್ಗೆ ಸ್ಥಳೀಯ ಕಾರ್ಪೋರೆಟರ್, ಮೇಯರ್ ಅವರ ಗಮನಕ್ಕೂ ತರಲಾಗಿತ್ತು. ಪರಿಣಾಮವಾಗಿ ಕದ್ರಿ ದೇಗುಲದ ಮುಂಭಾಗ ಒಂದು ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ಸಮಸ್ಯೆ ಹಾಗೆಯೇ ಉಳಿದಿದೆ. ಈಗ ಮಳೆ ಕಡಿಮೆಯಾಗಿ ತೋಡಲ್ಲಿ ಡ್ರೈನೇಜ್ ನೀರು ಮಾತ್ರ ಹರಿಯುತ್ತಿದೆ ಎಂದು ಕದ್ರಿಪಾದೆ ಮತ್ತು ಮಂಜುಶ್ರೀ ಬಡಾವಣೆಗಳ ನಿವಾಸಿಗಳು ದೂರಿದ್ದಾರೆ.
ಇನ್ನಾದರೂ ಮೇಯರ್, ಆರೋಗ್ಯಾಧಿಕಾರಿ, ಸ್ಥಳೀಯ ಕಾರ್ಪೋರೆಟರ್ಗಳು ಈ ಬಗ್ಗೆ ಸ್ಥಳ ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ತುರ್ತು ಮಾರ್ಗೋಪಾಯಗಳನ್ನು ಕಂಡು ಕೊಳ್ಳುವಂತೆ ಅವರು ಮನವಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ