ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲು ಅಕ್ಕಿ, ತೊಗರಿ ವಿತರಣೆ
Team Udayavani, Mar 21, 2020, 3:08 AM IST
ಬೆಂಗಳೂರು: ಕೊರೊನಾ ಭೀತಿಯಿಂದ ಶಾಲಾ ಮಕ್ಕಳಿಗೆ ರಜಾ ನೀಡಿರುವುದರಿಂದ ಈ ಅವಧಿಯಲ್ಲಿ ಬಿಸಿಯೂಟದ ಬದಲು ಅಕ್ಕಿ ಮತ್ತು ತೊಗರಿ ಬೇಳೆಯನ್ನು ಮಕ್ಕಳ ಪಾಲಕ, ಪೋಷಕರಿಗೆ ನಿಯಮಾನುಸಾರ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾ.14ರಿಂದ ಏ.14ರವರೆಗಿನ 21ದಿನ (ಸರ್ಕಾರಿ ರಜಾ ದಿನ ಹೊರತುಪಡಿಸಿ)ದ ಅಕ್ಕಿ, ತೊಗರಿ ಬೇಳೆಯನ್ನು ಮಕ್ಕಳ ಪಾಲಕ, ಪೋಷಕರಿಗೆ ವಿತರಿಸಲು ತಿಳಿಸಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ ಪ್ರತಿ ದಿನಕ್ಕೆ 100 ಗ್ರಾಂ ಅಕ್ಕಿ, 50 ಗ್ರಾಂ ತೊಗರಿಬೇಳೆ, 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ದಿನಕ್ಕೆ 150ಗ್ರಾಂ ಅಕ್ಕಿ, 75 ಗ್ರಾಂ ತೊಗರಿ ಬೇಳೆಯಂತೆ 21 ದಿನ ಅಕ್ಕಿ, ತೊಗರಿ ಸೇರಿಸಿ ಒಂದೇ ದಿನ ವಿತರಿಸುವಂತೆ ನಿರ್ದೇಶನ ನೀಡಿದೆ.
ಶಾಲೆಗಳಲ್ಲಿ ವಿತರಣೆಗೆ ಅಕ್ಕಿ, ತೊಗರಿ ಬೇಳೆ ಇದೆಯೇ ಎಂಬುದನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಸ್ಪಷ್ಟಪಡಿಸಿಕೊಂಡು, ಒಂದೊಮ್ಮೆ ಉಗ್ರಾಣದಲ್ಲಿ ಅಕ್ಕಿ, ತೊಗರಿ ಬೇಳೆ ಇಲ್ಲದೇ ಇದ್ದರೆ ತಾಲೂಕು ಅಕ್ಷರ ದಾಸೋಹದ ಮೂಲಕ ಪಡೆದುಕೊಳ್ಳುವ ಕೆಲಸ ಮಾಡಬೇಕು.
ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ಅಡುಗೆ ಸಿಬ್ಬಂದಿಯನ್ನು ತೊಡಗಿಸಿಕೊಂಡು ಅವರಿಗೂ ಏ.10ವರೆಗಿನ ವೇತನ ನೀಡಬೇಕು. ಎನ್ಜಿಒಗಳು ಬಿಸಿಯೂಟ ಒದಗಿಸುತ್ತಿದ್ದಲ್ಲಿ, ಆ ಎನ್ಜಿಒಗಳು ಅಕ್ಕಿ, ತೊಗರಿಬೇಳೆಯನ್ನು ಶಾಲೆಗಳಿಗೆ ನೀಡಿ, ವಿದ್ಯಾರ್ಥಿಗಳ ಪಾಲಕ, ಪೋಷಕರಿಗೆ ವಿತರಿಸುವ ಅವಕಾಶ ಮಾಡಿಕೊಡಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು