ಲಾಕ್ಡೌನ್ ತೆರವಿನ ವರೆಗೆ ಆಹಾರ ವಿತರಣೆ: ಭರತ್ ಶೆಟ್ಟಿ
Team Udayavani, Apr 10, 2020, 5:40 AM IST
ಕಾವೂರು: ದೇಶ ಕೋವಿಡ್ 19 ಸೋಂಕಿನಿಂದ ಪಾರಾಗುವವರೆಗೆ ಲಾಕ್ಡೌನ್ ಇರುವ ಸಾಧ್ಯತೆಯಿದ್ದು ಕ್ಷೇತ್ರದಲ್ಲಿ ನಿರಂತರವಾಗಿ ಅರ್ಹರಿಗೆ, ಕಷ್ಟದಲ್ಲಿರುವವರಿಗೆ ಆಹಾರ ಸಾಮಗ್ರಿ ಕಿಟ್ ವಿತರಣೆ ನಡೆಯಲಿದೆ ಎಂದು ಶಾಸಕ ಡಾ| ಭರತ್ ಶೆಟ್ಟಿ ವೈ. ಹೇಳಿದರು.
ಗುರುವಾರ ಕಾವೂರು ಬಿಜೆಪಿ ಕಚೇರಿಯಲ್ಲಿ ಕಾರ್ಮಿಕರು ಹಾಗೂ ಫಲಾನುಭವಿಗಳಿಗೆ ಪಕ್ಷ, ದಾನಿಗಳು ಹಾಗೂ ವೈಯುಕ್ತಿಕ ನೆಲೆಯಲ್ಲಿ ಆಹಾರ ದಿನಸಿ ವಿತರಿಸಿ ಅವರು ಮಾತನಾಡಿದರು.
ಪ್ರಥಮ ಹಂತದಲ್ಲಿ 12,500 ಕಿಟ್ ವಿತರಣೆ ನಡೆದಿದೆ. 10,000 ಕಿಟ್ ವಿತರಣೆಗೆ ಸಿದ್ಧಗೊಳ್ಳುತ್ತಿದೆ. ಅಕ್ಕಿ, ಗೋಧಿ , ಸಕ್ಕರೆ, ಬೇಳೆ, ಎಣ್ಣೆ, ಕಡಲೆ, ಸೋಪು ಸಹಿತ ವಸ್ತುಗಳನ್ನು ಒದಗಿಸಲಾಗುತ್ತಿದೆ. ಸೋಂಕು ಹರಡದಂತೆ 15,000 ಮಾಸ್ಕ್ ವಿತರಣೆ ಮಾಡಲಾಗಿದೆ.
ಪ್ರಥಮ ಹಂತದಲ್ಲಿ 245 ಬೂತ್ ಮಟ್ಟದಲ್ಲಿ 50 ಲಕ್ಷ ರೂ.ವೆಚ್ಚದ ಆಹಾರ ಸಾಮಗ್ರಿ ಅರ್ಹರಿಗೆ ತಲುಪಿಸುವ ಕೆಲಸ ನಡೆದಿದೆ. ಅಂಟು ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಹಿತಿ ಪತ್ರ ನೀಡಲಾಗುತ್ತಿದೆ. ಒಟ್ಟು 45-50 ಲಕ್ಷ ರೂ. ವೆಚ್ಚದ ಆಹಾರ ಸಾಮಗ್ರಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭ ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪಾಲಿಕೆ ಸದಸ್ಯರಾದ ಜಯಾನಂದ ಅಂಚನ್, ಲೋಹಿತ್ ಅಮೀನ್, ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ವಿಠಲ ಸಾಲಿಯಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ