ಜಿಲ್ಲಾ ಬಿಲ್ಲವ ಯುವ ವೇದಿಕೆ; ಸೆ. 11: ಗುರು ಸಂದೇಶ ವಾಹನ ಜಾಥಾ
ಗುರು ಸಂದೇಶದ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಾಹನ ಜಾಥಾ ಹಮ್ಮಿಕೊಳ್ಳಲಾಗಿದೆ
Team Udayavani, Sep 10, 2022, 4:45 PM IST
ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾಜದ ವಿವಿಧ ಬಿಲ್ಲವ ಸಂಘಟನೆಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮದಿನಾಚರಣೆ ಪ್ರಯುಕ್ತ ಸೆ.11ರ ಮಧ್ಯಾಹ್ನ 2 ಗಂಟೆಗೆ ಗುರು ಸಂದೇಶದ ವಾಹನ ಜಾಥಾ ನಡೆಯಲಿದೆ.
ಇದನ್ನೂ ಓದಿ:ಸಾಮಾಜಿಕ,ಧಾರ್ಮಿಕ ಬದಲಾವಣೆಗೆ ಕ್ರಾಂತಿಗಿಳಿದವರು ಶ್ರೀ ನಾರಾಯಣಗುರುಗಳು
ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ವಿವಿಧ ಸಂಘ-ಸಂಸ್ಥೆಗಳು, ನಾರಾಯಣಗುರುಗಳ ಅನುಯಾಯಿಗಳು, ಗರೋಡಿ ಪ್ರಮುಖರ ಉಪಸ್ಥಿತಿಯಲ್ಲಿ ನಾರಾಯಣಗುರುಗಳಿಗೆ ಗುರು ಮಂದಿರದಲ್ಲಿ ಪ್ರಾರ್ಥನೆ ಮಾಡಿ, ಉದ್ಯಮಿ, ಸಮಾಜದ ಹಿರಿಯರಾದ ವಿಶ್ವನಾಥ ಸನಿಲ್ ಅವರು ರಥಕ್ಕೆ ಚಾಲನೆ ನೀಡುವರು.
ಜಾಥಾದ ರಥವು ಬನ್ನಂಜೆಯಿಂದ ಹೊರಟು ಸಿಟಿ ಬಸ್ನಿಲ್ದಾಣ, ಜೋಡುಕಟ್ಟೆ ಮಾರ್ಗವಾಗಿ ಅಂಬಲಪಾಡಿ, ಕಿದಿಯೂರು, ಕಲ್ಮಾಡಿ, ಮಲ್ಪೆ ವೃತ್ತಕ್ಕೆ ಸುತ್ತು ಹಾಕಿ ವಡಬಾಂಡೇಶ್ವರ ವೃತ್ತ, ಸಿಟಿಜನ್ ಸರ್ಕಲ್ನಿಂದ ಕೊಡವೂರು, ಗರಡಿಮಜಲು ಮಾರ್ಗವಾಗಿ ಸಂತೆಕಟ್ಟೆ ಜಂಕ್ಷನ್ನಿಂದ ರಾ.ಹೆ. ಮೂಲಕ ಸಾಗಿ ಬನ್ನಂಜೆಯಲ್ಲಿ ಸಂಜೆ 5.30ಕ್ಕೆ ಗುರುಪೂಜೆಯೊಂದಿಗೆ ಸಮಾಪನಗೊಳ್ಳಲಿದೆ. ಗುರು ಸಂದೇಶದ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಾಹನ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಎಂ.ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…