
ಜಿಲ್ಲಾ ಬಿಲ್ಲವ ಯುವ ವೇದಿಕೆ; ಸೆ. 11: ಗುರು ಸಂದೇಶ ವಾಹನ ಜಾಥಾ
ಗುರು ಸಂದೇಶದ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಾಹನ ಜಾಥಾ ಹಮ್ಮಿಕೊಳ್ಳಲಾಗಿದೆ
Team Udayavani, Sep 10, 2022, 4:45 PM IST

ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾಜದ ವಿವಿಧ ಬಿಲ್ಲವ ಸಂಘಟನೆಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮದಿನಾಚರಣೆ ಪ್ರಯುಕ್ತ ಸೆ.11ರ ಮಧ್ಯಾಹ್ನ 2 ಗಂಟೆಗೆ ಗುರು ಸಂದೇಶದ ವಾಹನ ಜಾಥಾ ನಡೆಯಲಿದೆ.
ಇದನ್ನೂ ಓದಿ:ಸಾಮಾಜಿಕ,ಧಾರ್ಮಿಕ ಬದಲಾವಣೆಗೆ ಕ್ರಾಂತಿಗಿಳಿದವರು ಶ್ರೀ ನಾರಾಯಣಗುರುಗಳು
ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ವಿವಿಧ ಸಂಘ-ಸಂಸ್ಥೆಗಳು, ನಾರಾಯಣಗುರುಗಳ ಅನುಯಾಯಿಗಳು, ಗರೋಡಿ ಪ್ರಮುಖರ ಉಪಸ್ಥಿತಿಯಲ್ಲಿ ನಾರಾಯಣಗುರುಗಳಿಗೆ ಗುರು ಮಂದಿರದಲ್ಲಿ ಪ್ರಾರ್ಥನೆ ಮಾಡಿ, ಉದ್ಯಮಿ, ಸಮಾಜದ ಹಿರಿಯರಾದ ವಿಶ್ವನಾಥ ಸನಿಲ್ ಅವರು ರಥಕ್ಕೆ ಚಾಲನೆ ನೀಡುವರು.
ಜಾಥಾದ ರಥವು ಬನ್ನಂಜೆಯಿಂದ ಹೊರಟು ಸಿಟಿ ಬಸ್ನಿಲ್ದಾಣ, ಜೋಡುಕಟ್ಟೆ ಮಾರ್ಗವಾಗಿ ಅಂಬಲಪಾಡಿ, ಕಿದಿಯೂರು, ಕಲ್ಮಾಡಿ, ಮಲ್ಪೆ ವೃತ್ತಕ್ಕೆ ಸುತ್ತು ಹಾಕಿ ವಡಬಾಂಡೇಶ್ವರ ವೃತ್ತ, ಸಿಟಿಜನ್ ಸರ್ಕಲ್ನಿಂದ ಕೊಡವೂರು, ಗರಡಿಮಜಲು ಮಾರ್ಗವಾಗಿ ಸಂತೆಕಟ್ಟೆ ಜಂಕ್ಷನ್ನಿಂದ ರಾ.ಹೆ. ಮೂಲಕ ಸಾಗಿ ಬನ್ನಂಜೆಯಲ್ಲಿ ಸಂಜೆ 5.30ಕ್ಕೆ ಗುರುಪೂಜೆಯೊಂದಿಗೆ ಸಮಾಪನಗೊಳ್ಳಲಿದೆ. ಗುರು ಸಂದೇಶದ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಾಹನ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಎಂ.ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ