ಬಳಕೆಯಾಗದ, ನಿರ್ವಹಣೆಯಿಲ್ಲದ ನಿವೇಶನದಿಂದ ಸಾರ್ವಜನಿಕರಿಗೆ ತೊಂದರೆ

ಕ್ರಮ ತೆಗೆದುಕೊಳ್ಳದ ನಗರಸಭೆ

Team Udayavani, Sep 30, 2021, 5:20 AM IST

ಬಳಕೆಯಾಗದ, ನಿರ್ವಹಣೆಯಿಲ್ಲದ ನಿವೇಶನದಿಂದ ಸಾರ್ವಜನಿಕರಿಗೆ ತೊಂದರೆ

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ದಶಕಗಳಿಂದ ಬಳಕೆಯಾಗದೆ ಹಾಗೂ ನಿರ್ವಹಣೆಯಿಲ್ಲದ ನಿವೇಶನದಲ್ಲಿ ಬೆಳೆದು ನಿಂತ ಬೃಹತ್‌ ಮರ ಹಾಗೂ ಪೊದೆಗಳಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ನಗರಸಭೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದಕ್ಕೆ ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ವಾಸ್ತವ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಲಿ ಹಾಗೂ ನಿರ್ವಹಣೆ ಇಲ್ಲದ ನೂರಾರು ಸೈಟ್‌ಗಳು ಜನರ ಜೀವಕ್ಕೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡುತ್ತಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳದ ನಗರಸಭೆ ವಿರುದ್ಧ ಸ್ಥಳೀಯರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ದಶಕದ ಹಿಂದೆ ಖರೀದಿಸಿ, ಮರಗಳನ್ನು ನೆಟ್ಟು ಬೇಲಿ ಹಾಕಿ, ಮತ್ತೆ ಹಿಂದಿರುಗದೇ ನಿವೇಶನದ ನಿರ್ವಹಣೆ ಮಾಡದ ನೂರಾರು ಸೈಟ್‌ಗಳು ನಗರಸಭೆ ವ್ಯಾಪ್ತಿಯಲ್ಲಿದೆ.

ವಿಷ ಜಂತು ನಿವಾಸ
ಮನೆಗಳ ಮಧ್ಯೆ ಖಾಲಿ ಉಳಿಸಿಕೊಂಡ ನಿರ್ವಹಣೆ ಕಾಣದ ಸೈಟ್‌ಗಳಲ್ಲಿ ಆಳೆತ್ತರದ ಪೊದೆಗಳು, ಹಾವು ಸೇರಿದಂತೆ ವಿಷ ಜಂತುಗಳ ವಾಸಸ್ಥಾನವಾಗಿ ಮಾರ್ಪಟ್ಟಿದೆ. ಇದರಿಂದಾಗಿ ಮನೆಯಂಗಳದಲ್ಲಿ ಆಟವಾಡುವ ಮಕ್ಕಳ ಹಾಗೂ ಹಿರಿಯ ನಾಗರಿಕರ ಜೀವಕ್ಕೆ ಕಂಟಕವಾಗಿ ಪರಿಣಿಮಿಸುತ್ತಿದೆ. ಕೆಲವಡೆ ಖಾಲಿ ಸೈಟ್‌ಗಳು ಕಸದಿಂದ ತುಂಬಿ ಹೋಗಿದ್ದು, ಸಾಂಕ್ರಾಮಿಕ ರೋಗಗಳ ತಾಣವಾಗಿ ಪರಿಣಮಿಸಿದೆ.

ಸಾರ್ವಜನಿಕ ಆಸ್ತಿಗೆ ಹಾನಿ!
ಸೈಟ್‌ಗಳಲ್ಲಿ ಬೆಳೆದು ನಿಂತಿರುವ ಬೃಹತ್‌ ಆಕಾರದ ಮರಗಳಿಂದ ಸರಕಾರಿ ಆಸ್ತಿಗೆ ಹಾನಿಯಾಗುತ್ತಿದೆ. ಖಾಲಿ ನಿವೇಶನದ ಮಾಲಕರು 10ವರ್ಷಗಳ ಹಿಂದೆ ನೆಟ್ಟ ಗಿಡಗಳು ಬೆಳೆದು ನಿಂತು ಸಮೀಪದ ವಿದ್ಯುತ್‌ ಕಂಬಗಳಿಗೆ ಹಾನಿಯುಂಟು ಮಾಡುತ್ತಿದೆ. ಮಳೆಗಾಲ, ಗಾಳಿ, ಮಳೆಗೆ ಭಾರಿ ಗಾತ್ರದ ಮರಗಳು ಬೇರು ಸಹಿತ ಬಿದ್ದು ಮನೆಗಳು ಹಾನಿಯಾಗಿವೆ. ಇಂತಹ ಘಟನೆ ಪರ್ಕಳ ಮಾರುತಿ ನಗರದ ಮೂರನೇ ಕ್ರಾಸ್‌ ತಿರುವಿನಲ್ಲಿ ಸಂಭವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 539 ಪಾಸಿಟಿವ್ ಪ್ರಕರಣ | 591 ಸೋಂಕಿತರು ಗುಣಮುಖ

ಕೈಚೆಲ್ಲಿದ ಸ್ಥಳೀಯಾಡಳಿತ
ನಿರ್ವಹಣೆಯಿಲ್ಲದ ಖಾಲಿ ನಿವೇಶನದಲ್ಲಿ ಬೆಳೆದು ನಿಂತ ಮರಗಳ ತೆರವಿನ ಬಗ್ಗೆ ನಗರಸಭೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಏಕೆಂದರೆ ಅವರಲ್ಲಿ ಆ ನಿವೇಶನದ ಮಾಲಕರ ಪಹಣಿ, ವಿಳಾಸ, ದೂರವಾಣಿ ಸಂಖ್ಯೆ ಲಭ್ಯವಿಲ್ಲ ಎನ್ನುವ ಉತ್ತರ ಕೇಳಿ ಬರುತ್ತಿವೆ ಎನ್ನುತ್ತಾರೆ ಸ್ಥಳೀಯರು. ಜತೆಗೆ 2020ರಲ್ಲಿ ನಗರದ ಹಳೆಯ ಹಾಗೂ ಸ್ವಾತಂತ್ರ್ಯ ಪೂರ್ವದ ರಾಯಲ್‌ ಮಹಲ್‌ ಮುರಿದು ಬಿದ್ದ ಸಂದರ್ಭದಲ್ಲಿ ಅಧಿಕಾರಿಗಳು 35 ವಾರ್ಡ್‌ಗಳಲ್ಲಿ ವಾಸವಿಲ್ಲದ, ಹಳೆಯದಾದ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದರು. ಆದರೆ ಇದುವರೆಗೆ ಈ ನಿಟ್ಟಿನಲ್ಲಿ ಯಾವುದೇ ಕೆಲಸಗಳು ನಡೆದಿಲ್ಲ.

ತೆರವು ಅಗತ್ಯ
ಖಾಲಿ ನಿವೇಶನಗಳಲ್ಲಿ ಸಾರ್ವಜನಿಕರ ಜೀವ ಹಾಗೂ ಸರಕಾರಿ ಆಸ್ತಿಗೆ ಹಾನಿಯಾಗುವ ಮರ, ಪೊದೆಗಳು ಇದ್ದಲ್ಲಿ ಅದನ್ನು ನಗರಸಭೆ ಸಾರ್ವಜನಿಕ ಹಿತಾಸಕ್ತಿಯಿಂದ ತೆರವುಗೊಳಿಸಲು ಮುಂದಾಗಬೇಕು. ಬೃಹತ್‌ ಗಾತ್ರದ ಮರಗಳನ್ನು ತೆರವುಗೊಳಿಸಿ ಅದರ ವೆಚ್ಚವನ್ನು ಸ್ಥಳದ ಮಾಲಕರಿಂದ ಸಂಗ್ರಹಿಸಬೇಕಾಗಿದೆ. ಮಾಲಕರು ಒಂದಲ್ಲ ಒಂದು ದಿನ ಮನೆ ನಿರ್ಮಾಣಕ್ಕೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ನಗರಸಭೆಗೆ ಭೇಟಿ ಮಾಡಬೇಕಾಗುತ್ತದೆ. ಈ ವೇಳೆ ಅವರಿಂದ ಬಡ್ಡಿ ಸಮೇತ ಶುಲ್ಕ ಸಂಗ್ರಹಿಸುವ ಅವಕಾಶ ನಗರಸಭೆಗಿದೆ.

ಆರ್ಥಿಕ ವಿಚಾರ ನಿರ್ಣಯ ಅಗತ್ಯ
ಖಾಲಿ ಸೈಟ್‌ನಲ್ಲಿ ಬೆಳೆದಿರುವ ಮರ, ಪೊದೆ ಹಾಗೂ ಹಳೆ ಕಾಲದ ಕಟ್ಟಡಗಳನ್ನು ತೆರವುಗೊಳಿಸುವುದಕ್ಕೆ ನಗರಸಭೆ ನಿಧಿ ಬಳಕೆ ಮಾಡಬೇಕು. ಇದಕ್ಕೆ ಜನಪ್ರತಿನಿಧಿಗಳು ನಿಗದಿ ಸ್ಥಳ ಹಾಗೂ ಕಟ್ಟಡವನ್ನು ಗುರುತಿಸಿ, ತೆರವುಗೊಳಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿದಾಗ ಮಾತ್ರ ನಗರಸಭೆ ನಿಧಿ ಬಳಸಿಕೊಂಡ ಕೆಲಸ ಮಾಡಲು ಸಾಧ್ಯ.
– ಮೋಹನ್‌ ರಾಜ್‌
ಎಎಇ, ನಗರಸಭೆ, ಉಡುಪಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.