ದ.ಕ. ಜಿಲ್ಲೆಗೆ 25 ಸಾವಿರ ಕ್ವಿಂಟಲ್ ಕುಚ್ಚಲಕ್ಕಿ ಬಿಡುಗಡೆ
Team Udayavani, Apr 12, 2020, 11:55 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಜಿಲ್ಲೆಗೆ 25 ಸಾವಿರ ಕ್ವಿಂಟಲ್ ಕುಚ್ಚುಲಕ್ಕಿ ಬಿಡುಗಡೆಗೊಂಡಿದ್ದು, ಮುಂದಿನ ತಿಂಗಳಿನಿಂದ ವಿತರಣೆ ನಡೆಯಲಿದೆ.
ಕುಚ್ಚಲಕ್ಕಿ ಅಭಾವದಿಂದಾಗಿ ಕೆಲವು ತಿಂಗಳುಗಳಿಂದ ಪಡಿತರದಲ್ಲಿ ಇದು ಲಭ್ಯವಾಗುತ್ತಿರಲಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಚ್ಚಲಕ್ಕಿ ಅನ್ನ ಊಟ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಪಡಿತರದಲ್ಲಿ ಕುಚ್ಚಲಕ್ಕಿಯೇ ಬೇಕು ಎಂಬ ಬೇಡಿಕೆ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಸರಕಾರಿ ಮಟ್ಟದಲ್ಲಿ ಮಾತುಕತೆ ನಡೆದು ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಪಡಿತರ ಚೀಟಿದಾರರಿಗೆ ಶೀಘ್ರ 20 ಸಾವಿರ ಕ್ವಿಂಟಲ್ ಕುಚ್ಚಲಕ್ಕಿ ಬಿಡುಗಡೆ ಮಾಡುವುದಾಗಿ ಕಳೆದ ವಾರ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದರು. ಅದರಂತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಗುರುವಾರ 25 ಸಾವಿರ ಕ್ವಿಂಟಲ್ ಕುಚ್ಚಲಕ್ಕಿ ಬಿಡುಗಡೆಯಾಗಿದೆ.
ಮೇ ತಿಂಗಳಿಂದ ವಿತರಣೆ
ಎಪ್ರಿಲ್, ಮೇ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಎ. 1ರಿಂದಲೇ ಆರಂಭವಾಗಿದ್ದು, ಅವರೆಲ್ಲ ಬೆಳ್ತಿಗೆ ಅಕ್ಕಿಯನ್ನು ಪಡೆದುಕೊಂಡಿದ್ದಾರೆ. ಮುಂದಿನ ತಿಂಗಳು ಕುಚ್ಚಲಕ್ಕಿ ವಿತರಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 97,822 ಚೀಟಿದಾರರು ಬಾಕಿಜಿಲ್ಲೆಯಲ್ಲಿ ಒಟ್ಟು 2,73,902 ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳಿವೆ. ಈ ಪೈಕಿ 1,76,080 ಪಡಿತರ ಚೀಟಿದಾರರಿಗೆ ಬೆಳ್ತಿಗೆ ಅಕ್ಕಿ ಸಹಿತ ಪಡಿತರವನ್ನು ವಿತರಣೆ ಮಾಡಲಾಗಿದೆ. 97,822 ಚೀಟಿದಾರರು ಪಡಿತರ ಪಡೆಯಲು ಬಾಕಿ ಇದ್ದಾರೆ.
ವಿತರಣೆ ಮುಂದಿನ ಸಲ
ದ.ಕ. ಜಿಲ್ಲೆಗೆ 25 ಸಾವಿರ ಕ್ವಿಂಟಲ್ ಕುಚ್ಚಲಕ್ಕಿ ಗುರುವಾರ ಬಿಡುಗಡೆಯಾಗಿದೆ. ಈ ತಿಂಗಳಿನ ವಿತರಣೆ ಆರಂಭವಾಗಿ 11 ದಿನ ಕಳೆದಿರುವುದರಿಂದ ಈ ಬಾರಿ ಅದನ್ನು ವಿತರಿಸಲು ಆಗುವುದಿಲ್ಲ. ಮುಂದಿನ ಸಲ ವಿತರಣೆ ನಡೆಯಲಿದೆ.
-ಡಾ| ಮಂಜುನಾಥನ್,
ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ