ಆಸ್ಕರ್‌ ಭೇಟಿಗೆಂದೇ ಉಡುಪಿಗೆ ಆಗಾಗ ಬರುತ್ತಿದ್ದೆ: ಆ ದಿನಗಳನ್ನು ನೆನಪಿಸಿಕೊಂಡ ಡಿಕೆಶಿ


Team Udayavani, Sep 14, 2021, 5:11 PM IST

ಆಸ್ಕರ್‌ ಭೇಟಿಗೆಂದೇ ಉಡುಪಿಗೆ ಆಗಾಗ ಬರುತ್ತಿದ್ದೆ: ಆ ದಿನಗಳನ್ನು ನೆನಪಿಸಿಕೊಂಡ ಡಿಕೆಶಿ

ಉಡುಪಿ : ರಾಜಕೀಯ ಜೀವನದಲ್ಲಿ ನನಗೂ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೂ ಸುಮಾರು 42 ವರ್ಷಗಳ ನಂಟಿದೆ. ಅವರು ವಿದ್ಯಾರ್ಥಿ ಘಟಕದ ನ್ಯಾಷನಲ್‌ ಕೌನ್ಸಿಲ್‌ ಸದಸ್ಯರಾಗಿದ್ದ ಕಾಲದಿಂದಲೂ ನಾನು ಅವರ ಜತೆಗೆ ಒಡನಾಟ ಹೊಂದಿದ್ದೆ. ಅವರ ಭೇಟಿಗಾಗಿ ಆಗಾಗ ಉಡುಪಿಗೆ ಬರುತ್ತಿದ್ದೆ. ಇಡೀ ದೇಶದ ಉದ್ದಗಲಕ್ಕೂ ಅಜಾತಶತ್ರುವಾಗಿ, ಓರ್ವ ಸರಳ-ಸಜ್ಜನಿಕೆಯ ನಾಯಕನಾಗಿ, ಯಾರ ಮನಸ್ಸು ನೋಯಿಸದೆ ಪಕ್ಷದಲ್ಲಿ ಪ್ರಾಮಾಣಿಕ ನಾಯಕನಾಗಿ ಅವರು ಗುರುತಿಸಿಕೊಂಡಿದ್ದರು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದರು.

ಮಂಗಳವಾರ ಉಡುಪಿ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಪಕ್ಷದಲ್ಲಿನ ಪ್ರಾಮಾಣಿಕತೆ, ನಾಯಕತ್ವದಲ್ಲಿದ್ದಂತಹ ನಿಷ್ಠೆಯಿಂದಾಗಿಯೇ ಆಸ್ಕರ್‌ ಕೇಂದ್ರಮಟ್ಟದಲ್ಲಿ ನಾಯಕನಾಗಿ ಗುರುತಿಸಿಕೊಂಡವರು. ಯುವಕರಿಗೆ, ಕಿರಿಯರಿಗೆ ಗೌರವ ಕೊಡುವಂತಹ ಏಕೈಕ ರಾಜಕಾರಣಿಯಾಗಿ ಬೆಳೆದು ಬಂದವರು.

ಉಡುಪಿ ಪುರಸಭೆಯ ಕೌನ್ಸಿಲರ್‌ ಆಗಿ, ಉಡುಪಿ ಡ್ರೈವರ್ ಅಸೋಸಿಯೇಶನ್‌ ಅಧ್ಯಕ್ಷರಾಗಿ, ಹಂತ-ಹಂತವಾಗಿ ನಾಯಕನಾಗಿ ಬೆಳೆದು ಬಂದು ರಾಷ್ಟ್ರ ರಾಜಕಾರಣದಲ್ಲೂ ಸೈ ಎನಿಸಿಕೊಂಡವರು. ಬೆಂಗಳೂರು-ಮೈಸೂರು ದಶ ಪಥ ರಸ್ತೆಗೆ ಅಂಕಿತ ಹಾಕಿದ್ದೆ ಅವರು. ಕಾರ್ಮಿಕ ಸಚಿವರಾಗಿದ್ದ ಕಾಲದಲ್ಲಿ ತಂದಂತಹ ಕ್ರಾಂತಿಕಾರಿ ಬದಲಾವಣೆಗಳು ಕಳೆದ ಅರವತ್ತು ವರ್ಷಗಳಲ್ಲಿ ಯಾರೂ ಕೂಡ ಯೋಚನೆ ಮಾಡಿರಲಿಕ್ಕಿಲ್ಲ. ಕಾರ್ಮಿಕರ ಮಕ್ಕಳಿಗೆ ಎಂಬಿಬಿಎಸ್‌ ಸೀಟು, ಎಲ್ಲ ಇಎಸ್‌ಐ ಆಸ್ಪತ್ರೆಗಳನ್ನು ಮೆಡಿಕಲ್‌ ಕಾಲೇಜಾಗಿ ಪರಿವರ್ತನೆ ಮಾಡಿ ಕಾರ್ಮಿಕರ ಮಕ್ಕಳನ್ನು ಮೆಡಿಕಲ್‌ ಕಾಲೇಜಿಗೆ ಉಚಿತ ಸೇರ್ಪಡೆ ಮಾಡುವ ಅವಕಾಶ ಕಲ್ಪಿಸಿದ್ದರು.

ಇದನ್ನೂ ಓದಿ :ಪುಟ್ಟ ಅಂಗಡಿಯಲ್ಲಿ ತಿಂಡಿ ಸೇವಿಸಿದ ಸೂಪರ್ ಸ್ಟಾರ್ : ವಿಡಿಯೋ

ಇದು ದೇಶದ ಸಾಮಾಜಿಕ ಬದಲಾವಣೆಗೆ ಬಹುದೊಡ್ಡ ಸಾಕ್ಷಿಯಾಗಿ ಉಳಿದುಕೊಂಡಿದೆ. ಇದಲ್ಲದೇ ಕಾರ್ಮಿಕ ಇಲಾಖೆಯಲ್ಲಿದ್ದಾಗ ಅವರು ಕಾರ್ಮಿಕರಿಗೆ ಕೊಟ್ಟಂತಹ ಶಕ್ತಿ, ಮೂಲ ಸೌಲಭ್ಯ, ಕಾರ್ಮಿಕರ ನಿಧಿ ವಿಚಾರದಲ್ಲಿ ತಂದಂತಹ ಬದಲಾವಣೆ ಬಹುಶಃ ಯಾರಿಂದಲೂ ತರಲು ಸಾಧ್ಯವಿಲ್ಲ ಎಂದರು.

ಮಹಾನ್‌ ನಾಯಕ
ತಮ್ಮ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೇ ಅಧಿಕಾರ ನಿಭಾಯಿಸಿದ ಆಸ್ಕರ್‌ ಅವರ ಮೇಲೆ ಯಾರಿಗೂ ಆರೋಪ ಹೊರಿಸಲು ಸಾಧ್ಯವಾಗಿಲ್ಲ. ಅಷ್ಟರಮಟ್ಟಿಗೆ ಪಾರದರ್ಶಕವಾಗಿ ತಮಗೆ ಸಿಕ್ಕ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಕೇಂದ್ರ ಹಾಗೂ ರಾಜ್ಯಕ್ಕೆ ರಾಜಕೀಯ ಕೊಂಡಿಯಂತಿದ್ದ ಆಸ್ಕರ್‌ ನಿಧನ ಇಡೀ ರಾಷ್ಟ್ರ ರಾಜಕಾರಣಕ್ಕೆ ಬಹುದೊಡ್ಡ ನಷ್ಟ. ಅವರು ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಸ್ವೀಕರಿಸಿ ದೇಶದ ಉದ್ದಗಲಕ್ಕೂ ಪ್ರವಾಸ ಮಾಡಿ ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ಹೊಸ ರೂಪವನ್ನು ಕೊಟ್ಟಂತಹ ಮಹಾನ್‌ ನಾಯಕ ಎಂದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.