ಮುಂಗಾರು ಎದುರಿಸಲು ದ.ಕ. ಗೃಹರಕ್ಷಕ ದಳ ಸಜ್ಜು


Team Udayavani, May 31, 2020, 5:45 AM IST

ಮುಂಗಾರು ಎದುರಿಸಲು ದ.ಕ. ಗೃಹರಕ್ಷಕ ದಳ ಸಜ್ಜು

ಮಂಗಳೂರು: ಕೆಲವೇ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮಳೆ ಆರಂಭವಾಗಲಿದ್ದು, ಈ ವೇಳೆ ಸಂಭವಿಸಬಹುದಾದ ಅನಾಹುತಗಳಿಂದ ಸಾರ್ವಜನಿಕ ರನ್ನು ರಕ್ಷಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಗೃಹರಕ್ಷಕ ದಳ ಸನ್ನದ್ಧಗೊಂಡಿದೆ.

ಜಿಲ್ಲೆಯಲ್ಲಿ ಈಗಾಗಲೇ 14 ಗೃಹರಕ್ಷಕ ಘಟಕಗಳಿವೆ. ಮಂಗಳೂರು, ಸುಳ್ಯ, ಬೆಳ್ಳಾರೆ,ಕಡಬ, ಪುತ್ತೂರು, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಮೂಲ್ಕಿ, ಬೆಳ್ತಂಗಡಿ, ಪಣಂಬೂರು, ಸುರತ್ಕಲ್‌, ಬಂಟ್ವಾಳ, ವಿಟ್ಲ, ಮೂಡುಬಿದಿರೆ ಘಟಕಗಳಲ್ಲಿ ಒಟ್ಟು 950 ಮಂದಿ ಗೃಹರಕ್ಷಕರು ಸೇವೆಯಲ್ಲಿ ದ್ದಾರೆ. ಪೊಲೀಸ್‌ ಇಲಾಖೆ ಸಹಿತ ಹಲವು ಇಲಾಖೆಗಳಲ್ಲಿ ಗೃಹರಕ್ಷಕರು ಕಾರ್ಯ ವೆಸಗುತ್ತಿದ್ದಾರೆ. ಪೊಲೀಸ್‌ ಠಾಣೆಗಳಲ್ಲಿ ಸುಮಾರು 400 ಮಂದಿ ಹಾಗೂ ಇತರ ಇಲಾಖೆಗಳಲ್ಲಿ 150 ಮಂದಿ ಗೃಹರಕ್ಷಕರು ಕರ್ತವ್ಯದಲ್ಲಿದ್ದಾರೆ. ಇತರರು ಗೃಹರಕ್ಷಕ ಇಲಾಖೆಯಲ್ಲಿರುತ್ತಾರೆ.

ಇವರೆಲ್ಲರೂ ಮಳೆಗಾಲಕ್ಕೆ ಸಂಬಂಧಿಸಿ ಸ್ಥಳೀಯ ಇಲಾಖೆಗಳ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸಲು ಸನ್ನದ್ಧರಾಗಿದ್ದಾರೆ. ಜೂನ್‌ 1ರಿಂದ ಈ ಪಡೆ ಎಲ್ಲ ಘಟಕಗಳಲ್ಲಿಯೂ ಸನ್ನದ್ಧ ಸ್ಥಿತಿಯಲ್ಲಿರಲಿದೆ.

ಬೀಚ್‌ಗಳಲ್ಲೂ ನಿಯೋಜನೆ
ಬೀಚ್‌ಗಳಲ್ಲೂ ಮುನ್ನೆಚ್ಚರಿಕೆ ದೃಷ್ಟಿ ಯಿಂದ ಗೃಹರಕ್ಷಕರನ್ನು ನೇಮಿಸಲಾಗಿದೆ. ನಗರದ ಪಣಂಬೂರು, ಸೋಮೇಶ್ವರ, ಸಸಿಹಿತ್ಲು, ತಣ್ಣೀರುಬಾವಿ-1 ಬೀಚ್‌, ಮೊಗವೀರಪಟ್ಣ, ಉಳ್ಳಾಲ ಸೋಮೇಶ್ವರ ಬೀಚ್‌ಗಳಲ್ಲಿ ಇಬ್ಬರು ಗೃಹರಕ್ಷಕರು ಕರ್ತವ್ಯ ನಿರ್ವಹಿಸಲಿದ್ದಾರೆ. ಜತೆಗೆ ಬೀಚ್‌ ಬದಿಯಲ್ಲಿ ಅಪಾಯ ಮುನ್ಸೂಚನೆಯ ಫಲಕ ಅಳವಡಿಸಲು ನಿರ್ಧರಿಸಲಾಗಿದೆ. ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರಾ ನದಿ ಪ್ರದೇಶದಲ್ಲಿ ಮುಂಜಾಗೃತ ಕ್ರಮವಾಗಿ ಗಾಳಿ ತುಂಬಬಹುದಾದ ಬೋಟ್‌ (ಇನ್‌ಫ್ಲಾಟೇಬಲ್‌ ಬೋಟ್‌) ಅನ್ನು ಜೂನ್‌ 1ರಿಂದಲೇ ನಿಯೋಜಿಸ ಲಾಗುತ್ತದೆ.

ಘಟಕಾಧಿಕಾರಿಗಳ ಸಭೆ
ಮುಂಜಾಗೃತ ಕ್ರಮದ ಕುರಿತು ದ.ಕ. ಜಿಲ್ಲಾ ಗೃಹರಕ್ಷಕ ದಳ ಘಟಕಾಧಿ ಕಾರಿಗಳ ಸಭೆಯು ಶನಿವಾರ ಮೇರಿಹಿಲ್‌ ನಲ್ಲಿರುವ ಗೃಹರಕ್ಷಕ ದಳ ಕಚೇರಿಯಲ್ಲಿ ಜರಗಿತು. ಪ್ರವಾಹ ಪೀಡಿತ ಪ್ರದೇಶ ಘಟಕದಲ್ಲಿ ಕೈಗೊಳ್ಳಬೇಕಾದ ಕಾರ್ಯ, ಗೃಹರಕ್ಷಕರ ನವೀಕರಣದ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಠ ಡಾ| ಮುರಲೀಮೋಹನ್‌ ಚೂಂತಾರು, ಉಪ ಸಮಾದೇಷ್ಠ ರಮೇಶ್‌ ಪೂಜಾರಿ, ಸುಳ್ಯ ಘಟಕಾಧಿಕಾರಿ ಜಯಂತ್‌ ಶೆಟ್ಟಿ, ಬೆಳ್ಳಾರೆ – ವಸಂತ ಕುಮಾರ್‌, ಸುಬ್ರಹ್ಮಣ್ಯ-ನಾರಾಯಣ್‌, ಕಡಬ-ತೀರ್ಥೇಶ್‌, ಉಪ್ಪಿನಂಗಡಿ- ದಿನೇಶ್‌, ಬಂಟ್ವಾಳ-ಐತ್ತಪ್ಪ, ಪುತ್ತೂರು- ಅಭಿಮನ್ಯು, ಮಂಗಳೂರು- ಮಾರ್ಕ್‌ ಶೇರ್‌, ಸುರತ್ಕಲ್‌- ರಮೇಶ್‌, ಪಣಂಬೂರು- ಶಿವಪ್ಪ ನಾಯಕ್‌, ಮೂಲ್ಕಿ- ಲೋಕೇಶ್‌, ಮೂಡುಬಿದಿರೆ- ಪಾಂಡಿರಾಜ್‌, ಬೆಳ್ತಂಗಡಿ-ಜಯಾನಂದ್‌ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಳೆಗಾಲ ಮುಂಜಾಗ್ರತೆಯ ದೃಷ್ಟಿಯಿಂದ ಬಳಸಬಹುದಾದ ಪರಿಕರಗಳಾದ ಲೈಫ್‌ ಜಾಕೆಟ್‌, ಲೈಫ್‌ಬಾಯ್‌, ಲೈಟ್‌, ವುಡ್‌ ಕಟ್ಟರ್‌, ರೋಪ್‌, ಟಾರ್ಚ್‌ಗಳನ್ನು ಪ್ರದರ್ಶನಕ್ಕಿಡಲಾಗಿತ್ತು.

 ಸಿದ್ಧತೆ ನಡೆಸಲಾಗಿದೆ
ಮುಂಗಾರು ಮಳೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾ ಗೃಹರಕ್ಷಕ ದಳ ಸನ್ನದ್ಧಗೊಂಡಿದೆ. ಈಗಾಗಲೇ ಸಿದ್ಧತೆ ನಡೆಸಲಾಗಿದ್ದು, ಜಿಲ್ಲೆಯ ಎಲ್ಲ ಘಟಕಾಧಿಕಾರಿಗಳ ಸಭೆ ನಡೆಸಲಾಗಿದೆ. ಮುಂಜಾಗೃತಾ ದೃಷ್ಟಿಯಿಂದ ಬಳಸಬಹುದಾದ ಪರಿಕರಗಳನ್ನು ಪ್ರದರ್ಶಿಸಲಾಗಿದೆ.
-ಡಾ| ಮುರಲೀ ಮೋಹನ್‌ ಚೂಂತಾರು
ದ.ಕ. ಜಿಲ್ಲಾ ಸಮಾದೇಷ್ಠರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.