ಉಪ ಚುನಾವಣೆಯಲ್ಲಿ ಡಿಕೆಶಿ ಚಾಣಾಕ್ಷ ನಡೆ


Team Udayavani, Nov 27, 2019, 3:10 AM IST

upachunavanee

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರ ನಡುವಿನ ಮುನಿಸಿನಿಂದ ಪ್ರಚಾರದಲ್ಲಿ ಗೊಂದಲ ಮುಂದುವರಿದಿದ್ದು, ಈ ನಡುವೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಕೂಡ ಪ್ರಚಾರ ಕೈಗೊಳ್ಳುವಲ್ಲಿ ಚಾಣಾಕ್ಷ ನಡೆ ಇಡುತ್ತಿದ್ದಾರೆ.

ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮದೇ ಪ್ರತ್ಯೇಕ ಕಾರ್ಯತಂತ್ರ ರೂಪಿಸುತ್ತಿದ್ದಾರೆ. 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದರೂ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಾತ್ರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಡಿಕೆಶಿ ನಿರ್ಧರಿಸಿ ದ್ದಾರೆ. ಹುಣಸೂರು, ಕೆ.ಆರ್‌.ಪೇಟೆ, ಕೆ.ಆರ್‌.ಪುರ, ಚಿಕ್ಕಬಳ್ಳಾಪುರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್‌ ಹಾಗೂ ರಾಣಿಬೆನ್ನೂರು ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆ.

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಕಾಂಗ್ರೆಸ್‌ನ ಒಂದು ವರ್ಗದಲ್ಲಿ ಉತ್ಸಾಹ ಹೆಚ್ಚಾಗಿತ್ತು. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ಅವರಿಗೆ ಪರ್ಯಾಯ ನಾಯಕರಾಗಿ ಅವರನ್ನು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಅದಕ್ಕೆ ಪೂರಕ ಎನ್ನುವಂತೆ ಡಿ.ಕೆ.ಶಿವಕುಮಾರ್‌ ಜೈಲಿನಿಂದ ಜಾಮೀನಿನ ಮೇಲೆ ವಾಪಸ್‌ ಬಂದ ಮೇಲೆ ಪಕ್ಷದ ವತಿಯಿಂದ ಅದ್ಧೂರಿ ಸ್ವಾಗತ ನೀಡಿ, ಜಿಲ್ಲೆಗಳಿಗೆ ಭೇಟಿ ನೀಡಿದಾಗ ಅದ್ಧೂರಿ ಕಾರ್ಯ ಕ್ರಮಗಳನ್ನು ಆಯೋಜಿಸುವ ಮೂಲಕ ಉಪ ಚುನಾ ವಣೆ ಯಲ್ಲಿ ಡಿ.ಕೆ.ಶಿವಕುಮಾರ್‌ ಪ್ರಭಾವ ಬಳಸಿ ಕೊಳ್ಳಲು ಅನೇಕ ನಾಯಕರು ಕಸರತ್ತು ನಡೆಸಿದ್ದರು.

ಪ್ರತ್ಯೇಕ ಅಸ್ತಿತ್ವದ ಲೆಕ್ಕಾಚಾರ: ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು 15 ಕ್ಷೇತ್ರಗಳಲ್ಲಿ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಡಾ.ಎಚ್‌.ಸಿ. ಮಹದೇವಪ್ಪ, ಎಸ್‌.ಆರ್‌. ಪಾಟೀಲ್‌, ಆರ್‌.ವಿ. ದೇಶಪಾಂಡೆ ಸೇರಿ ಪಕ್ಷದ ಹಿರಿಯ ನಾಯಕರಿಗೆ ಕ್ಷೇತ್ರಗಳ ಉಸ್ತುವಾರಿ ವಹಿಸಲಾಗಿದೆ.

ಆದರೆ, ಡಿ.ಕೆ.ಶಿವಕುಮಾರ್‌ ಕೋರ್ಟ್‌ ಪ್ರಕರಣದ ಹಿನ್ನೆಲೆಯಲ್ಲಿ ಯಾವುದೇ ಕ್ಷೇತ್ರದ ಅಧಿಕೃತ ಜವಾಬ್ದಾರಿ ವಹಿಸಿಕೊಳ್ಳದೇ ತಟಸ್ಥರಾಗಿ ಉಳಿಯುವ ಪ್ರಯತ್ನ ನಡೆಸಿದ್ದಾರೆ. ಅಲ್ಲದೇ ಚುನಾವಣಾ ಪ್ರಚಾರ ಕಾರ್ಯಗಳಲ್ಲಿಯೂ ಪ್ರತ್ಯೇಕವಾಗಿ ಪ್ರವಾಸ ಮಾಡುವ ಮೂಲಕ ಚುನಾವಣೆಯಲ್ಲಿ ತಮ್ಮದೇ ಆದ ಅಸ್ತಿತ್ವ ಪ್ರದರ್ಶನ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ತೀರ್ಮಾನಕ್ಕೆ ಹೆಚ್ಚಿನ ಮಾನ್ಯತೆ ದೊರೆತಿರುವುದರಿಂದ ಅವರೇ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲಿ ಎಂದು ಬಹುತೇಕ ಹಿರಿಯ ನಾಯಕರು ತಟಸ್ಥ ನಿಲುವು ತಾಳಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್‌ ಎರಡೂ ಬಣಗಳ ನಡುವೆ ಸಮಾನಾಂತರ ಅಂತರ ಕಾಯ್ದು ಕೊಳ್ಳುತ್ತ ತಮ್ಮದೇ ಆದ ಪ್ರತ್ಯೇಕ ಅಸ್ತಿತ್ವ ತೋರಿಸಲು ಲೆಕ್ಕಾಚಾರದ ಮೇಲೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಕೋರ್ಟ್‌ ಪ್ರಕರಣ ಕಾರಣ: ಡಿ.ಕೆ.ಶಿವಕುಮಾರ್‌ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಇನ್ನೂ ಜಾರಿ ನಿರ್ದೇಶನಾಲಯದ ತನಿಖೆ ನಡೆಯುತ್ತಿದ್ದು, ಆಗಾಗ ಕೋರ್ಟ್‌ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆಯಿದೆ. ಈ ಕಾರಣಕ್ಕಾಗಿ ಅವರು ಉಪ ಚುನಾವಣೆಯಲ್ಲಿ ಹೆಚ್ಚು ಸಕ್ರಿಯರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಅವರ ಆಪ್ತ ಮೂಲಗಳ ಮಾಹಿತಿ. ಕೋರ್ಟ್‌ ಪ್ರಕರಣ ನಡೆಯುತ್ತಿದ್ದು ಜಾಮೀನಿನ ಮೇಲೆ ಹೊರಗಡೆ ಇರುವುದರಿಂದ ಈ ಸಂದರ್ಭದಲ್ಲಿ ತೀವ್ರತರನಾದ ಪ್ರಚಾರ ಹಾಗೂ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ಧಾಳಿ ಮಾಡುವುದರಿಂದ ಮತ್ತೆ ಇಡಿ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಆತಂಕವೂ ಅವರಿಗೆ ಕಾಡುತ್ತಿದೆ ಎನ್ನಲಾಗಿದೆ.

ಆರೋಗ್ಯ ಸಮಸ್ಯೆ: ಡಿ.ಕೆ.ಶಿವಕುಮಾರ್‌ ಅವರಿಗೆ ಜೈಲಿನಿಂದ ಹೊರ ಬಂದ ನಂತರ ಎದೆ ನೋವು ಹಾಗೂ ಬೆನ್ನು ನೋವಿನ ಸಮಸ್ಯೆಯೂ ಕಾಡುತ್ತಿದ್ದು, ಹೆಚ್ಚು ಪ್ರವಾಸ ಮಾಡಲು ಆಗುತ್ತಿಲ್ಲ ಎನ್ನಲಾಗಿದೆ. ಅದೇ ಕಾರಣಕ್ಕೆ ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್‌ ಅವರ ಅಧಿಕೃತ ಪ್ರಚಾರ ವೇಳಾ ಪಟ್ಟಿ ಪ್ರಕಾರ ಡಿಸೆಂಬರ್‌ 1ರಂದು ರಾಣೆಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದು ಕೂಡ ಅನುಮಾನ ಎಂದು ಹೇಳಲಾಗುತ್ತಿದೆ. ಕೆಪಿಸಿಸಿಯಿಂದ ಯಾವುದೇ ಕ್ಷೇತ್ರದಲ್ಲಿ ಪ್ರಚಾರ ನಡೆಸುವಂತೆ ಅಧಿಕೃತ ಸೂಚನೆ ಇಲ್ಲದಿರುವುದರಿಂದ ಡಿ.ಕೆ.ಶಿವಕುಮಾರ್‌ ಉಪ ಚುನಾವಣೆಯಲ್ಲಿ ತಮ್ಮ ಪ್ರತ್ಯೇಕ ಅಸ್ತಿತ್ವ ಮತ್ತು ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮದೇ ಆದ ಚಾಣಾಕ್ಷ ಹೆಜ್ಜೆ ಮುಂದಿಡುತ್ತಿದ್ದಾರೆ ಎನ್ನಲಾಗುತ್ತಿದೆ.

ಬದಲಾದ ಲೆಕ್ಕಾಚಾರ-ಗೋಕಾಕ್‌ನಿಂದ ದೂರ: ಡಿ.ಕೆ.ಶಿವಕುಮಾರ್‌ ಮೈತ್ರಿ ಸರ್ಕಾರದ ಪತನಕ್ಕೆ ಪ್ರಮುಖ ಕಾರಣವಾಗಿರುವ ರಮೇಶ್‌ ಜಾರಕಿಹೊಳಿಯನ್ನು ಸೋಲಿಸುವ ಪಣ ತೊಟ್ಟಿದ್ದರು. ಅಷ್ಟೇ ಅಲ್ಲದೇ ಗೋಕಾಕ್‌ನಲ್ಲಿ ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಿಕೆಟ್‌ ವಂಚಿತ ಅಶೋಕ್‌ ಪೂಜಾರಿಯನ್ನು ಪಕ್ಷಕ್ಕೆ ಕರೆತಂದು ಜಾರಕಿಹೊಳಿ ಕುಟುಂಬಕ್ಕೆ ಠಕ್ಕರ್‌ ನೀಡಲು ಯೋಜನೆ ರೂಪಿಸಿದ್ದರು. ಆದರೆ, ಸತೀಶ್‌ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್‌ ಕಾರ್ಯತಂತ್ರಕ್ಕೆ ಅಡ್ಡಿಪಡಿಸಿ, ಲಖನ್‌ ಜಾರಕಿಹೊಳಿಗೆ ಟಿಕೆಟ್‌ ಸಿಗುವಂತೆ ಮಾಡಿದ್ದರಿಂದ ಡಿ.ಕೆ.ಶಿವಕುಮಾರ್‌ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಅದೇ ಕಾರಣಕ್ಕೆ ಗೋಕಾಕ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅದೇ ರೀತಿ ಹೊಸಕೋಟೆಯಲ್ಲಿ ಎಂ.ಟಿ.ಬಿ.ನಾಗರಾಜ್‌ ಅವರನ್ನು ರಣರಂಗದಲ್ಲಿಯೇ ನೋಡಿಕೊಳ್ಳುತ್ತೇನೆಂದು ಹೇಳಿದ್ದ ಡಿ.ಕೆ.ಶಿವಕುಮಾರ್‌, ಶರತ್‌ ಬಚ್ಚೇಗೌಡ ಅವರನ್ನು ಪಕ್ಷಕ್ಕೆ ಕರೆತಂದು ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಂಡು ಬರುವ ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅಲ್ಲಿಯೂ ಅವರ ಲೆಕ್ಕಾಚಾರ ಬದಲಾಗಿರುವುದರಿಂದ ಹೊಸಕೋಟೆಯಿಂದಲೂ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.