Education: ವರ್ಷಕ್ಕೆ ಮೂರು ಪರೀಕ್ಷೆ ಮಕ್ಕಳಿಗೆ ಬೇಕೇ? ಬೇಡವೇ?


Team Udayavani, Sep 10, 2023, 11:39 PM IST

exam

ರಾಜ್ಯ ಸರಕಾರ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಇದರ ಸರಿ-ತಪ್ಪುಗಳ ಬಗ್ಗೆ ವಿಶ್ಲೇಷಣೆ ನಡೆಯುತ್ತಿದೆ. ಈ ಬಗ್ಗೆ ಚರ್ಚಾ ಚಾವಡಿಯಲ್ಲಿ ಚರ್ಚೆ ಶುರುವಾಗಿದೆ.

ಎಲ್ಲ ಸುಧಾರಣೆಯಲ್ಲ

ಶಿಕ್ಷಣ ಕ್ಷೇತ್ರವು ವರ್ಷದಿಂದ ವರ್ಷಕ್ಕೆ ಹಲವು ಬದಲಾವಣೆಗಳನ್ನು ಕಾಣುತ್ತಿದೆ ಎಂಬುದೇನೋ ಸತ್ಯವೇ ಆದರೂ ಅವೆಲ್ಲವೂ ಸುಧಾರಣೆಗಳೇ ಹೌದೇ ಎಂದು ವಿಮರ್ಶಿಸಬೇಕಿದೆ. 10ನೇತರಗತಿಯವರೆಗೆ ಎಲ್ಲೂ ಮಕ್ಕಳನ್ನು ಅನು ತ್ತೀರ್ಣಗೊಳಿಸ ಬಾರದೆಂಬ ಭ್ರಮೆಯಲ್ಲಿ ಅಕ್ಷರ ಬಾರದ ಮಕ್ಕಳೂ ಪಿಯುಸಿ ಮೆಟ್ಟಿಲೇರುತ್ತಿದ್ದಾರೆ.  ಈಗ ಹತ್ತನೆಯ ಮತ್ತು ಪಿಯುಸಿಯ ಮಕ್ಕಳಿಗೆ 3 ಬಾರಿ ಪರೀಕ್ಷೆ ಯೆಂಬ ಹೊಸ ಯೋಜನೆಯು ಸುದ್ದಿ ಮಾಡುತ್ತಿದೆ. ಮೊದಲ ಪರೀಕ್ಷೆ ಕಡ್ಡಾಯ, ಉಳಿದೆರಡು ಐಚ್ಛಿಕವೇ ಆದರೂ ಮಕ್ಕಳಿಗಿದು ಒತ್ತಡವನ್ನು ತಂದಿಟ್ಟಿದೆ.  ಶೇ.95 ತೆಗೆದ ವಿದ್ಯಾರ್ಥಿಗೂ ಪದೇ ಪದೆ ಅದನ್ನೇ ಓದಿ ಬರೆ ಯುವುದೆಂದರೆ ಹಿಂಸೆಯಲ್ಲವೇ? ಶಾಲಾ ಕಾಲೇ ಜುಗಳಲ್ಲೂ ಪ್ರಸ್ತುತ ವಿದ್ಯಾರ್ಥಿಗಳು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬರೆದಿರುತ್ತಾರೆ. ಅತಿ ಯಾದರೆ ಅಮೃತವೂ ವಿಷವೇ ಅಲ್ಲವೇ? ಮೌಲ್ಯಮಾಪನ ಮಾಡುವ ಶಿಕ್ಷಕರ ಪಾಡೇನು? ಹೊಸ ಓದಿಗೆ ಅವಕಾಶವೇ ಇಲ್ಲದಂತೆ ಸಮಯ ವನ್ನು ಮೌಲ್ಯಮಾಪನದಕ್ಕೇ ಕಳೆದರೆ ಬೋಧನಾ ಗುಣಮಟ್ಟ ಕುಸಿಯುತ್ತದೆ ಎಂಬುದು ಸ್ಪಷ್ಟ.

ಆರತಿ ಪಟ್ರಮೆ, ತುಮಕೂರು

=========================================================================================================================

ನಿರಾಳ ತಂದೀತು…

ಮೊದಲಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಪರೀಕ್ಷಾ ಪದ್ಧತಿ ಉಪಯುಕ್ತವಾದೀತು. ಪರೀಕ್ಷೆ ಎಂಬ ಭೂತ ಅವರನ್ನು ಬಹಳವಾಗಿ ಕಾಡುತ್ತಿತ್ತು. ಈಗ ಕೊಂಚ ನಿರಾಳವಾದೀತು. ಪರೀಕ್ಷೆ ಬಗ್ಗೆ ಭಯಪಡದೆ ಧೈರ್ಯದಿಂದ ಎದುರಿಸುವ ಅವಕಾಶ ಬಂದೀತು. ಫೇಲ್‌ ಆದ ಕಾರಣಕ್ಕೆ ಶಾಲಾ ಕಾಲೇಜುಗಳನ್ನು ತೊರೆಯುತ್ತಿದ್ದ ವಿದ್ಯಾರ್ಥಿಗಳು, ಈ ಹೊಸ ಪದ್ಧತಿಯ ಕಾರಣ ದಿಂದ ಪುನಃ ಶಾಲಾ ಕಾಲೇಜು ಗಳಿಗೆ ಮರಳುತ್ತಾರೆ. ಫಲಿತಾಂಶ ಬಂದ ಅನಂತರ ಆತ್ಮಹತ್ಯೆಗಳು ಈ ಮೂಲಕ ಕಮ್ಮಿ ಆಗಬಹು ದೇನೋ… “ಮರಳಿ ಯತ್ನವ ಮಾಡು’ ಎಂಬ ಮಾತಿನಂತೆ ವಿದ್ಯಾರ್ಥಿಗಳು ಹೊಸ ಹುರುಪಿನಿಂದ ಪ್ರಯತ್ನಿಸಬಹುದು. ಒಂದು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅದನ್ನು ತಿರಸ್ಕರಿಸಿ ಮತ್ತೂಮ್ಮೆ ಬರೆಯುವ ಅವಕಾಶವಿದೆ.

ಇನ್ನು ಬಾಧಕಗಳಿಲ್ಲದಿಲ್ಲ. ವರ್ಷಕ್ಕೆ 3 ಪರೀಕ್ಷೆ ಎಂದಾದರೆ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಕುರಿತು ಉಡಾಫೆ, ಉದಾಸೀನ, ಶೈಕ್ಷಣಿಕ ಪ್ರಗತಿ ಬಗ್ಗೆ ನಿರಾಸಕ್ತಿ ಉಂಟಾಗಬಹುದು. ಇಲಾಖೆ ದೃಷ್ಟಿ ಯಿಂದ ಖರ್ಚು ವೆಚ್ಚ ಹೆಚ್ಚಾಗುವವು. ಶಿಕ್ಷಕರ ಮೇಲೆ ಕಾರ್ಯದೊತ್ತಡವೂ ಉಂಟಾಗುತ್ತದೆ.

ಉಮೇಶ್‌ ಬಿ.ಆಚಾರ್‌, ಬೆಂಗಳೂರು

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Budget 2024; paperless tax system soon

Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.