Mangaluru ಬೆದರಿಕೆಗೆ ಜಗ್ಗದೆ ಕಾನೂನು ಪ್ರಕಾರ ಕಾರ್ಯ ನಿರ್ವಹಿಸಿ: ರಮಾನಾಥ ರೈ ಸೂಚನೆ
Team Udayavani, Aug 22, 2023, 11:44 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರು ಹಾಗೂ ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದ್ದಾರೆ. ಅಧಿಕಾರಿಗಳು ಮಾತ್ರ ಇದಕ್ಕೆ ಜಗ್ಗದೆ ಕಾನೂನು ಪ್ರಕಾರವೇ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಕಳೆದು ಕೊಂಡ ಬಳಿಕ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳು ನೀರಿನಿಂದ ತೆಗೆದ ಮೀನಿನಂತಾಗಿದ್ದಾರೆ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ಅಕ್ರಮ ಸಕ್ರಮ ಸಮಿತಿಯಡಿ 71 ಪ್ರಕರಣಗಳು ಕಾನೂನು ಬಾಹಿರವಾಗಿ ನಡೆಸಿರುವ ಬಗ್ಗೆ ಈಗಾಗಲೇ ದೂರು ನೀಡಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಧಿಕಾರಿಗಳನ್ನು ಹೆದರಿಸುವ ಕೆಲಸ ಕೆಲವು ಕಡೆ ನಡೆಯುತ್ತಿದೆ. ಬಿಜೆಪಿ ಆಡಳಿತ ಕಾಲದಲ್ಲಿ ಅವರು ಇದನ್ನೇ ಮಾಡುತ್ತಾ ಬಂದಿದ್ದಾರೆ. ಈಗ ಅದನ್ನೇ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳು ಜಗ್ಗಬಾರದು ಎಂದು ಹೇಳಿದ ಅವರು, ಶಿಷ್ಟಾಚಾರ ನೆಪದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಪ್ರತಿಭಟನೆಯನ್ನು ಕಾಂಗ್ರೆಸ್ ಖಂಡಿಸುವುದಾಗಿ ಹೇಳಿದರು.
ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಎಂ. ಶಶಿಧರ ಹೆಗ್ಡೆ, ಲ್ಯಾನ್ಸಿ ಲಾಟ್ಪಿಂಟೋ, ಶುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ಶಾಹುಲ್ ಹಮೀದ್, ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು