ಬರ ನಿರ್ವಹಣೆಯಲ್ಲಿ ಹಿಂದೆ ಬೀಳಬೇಡಿ :ಡಿಸಿ,ಸಿಇಓಗಳಿಗೆ ಸಿಎಂ ಎಚ್ಡಿಕೆ
ಸರ್ಕಾರದ ಬಳಿ ಹಣಕಾಸಿನ ಕೊರತೆ ಇಲ್ಲ
Team Udayavani, May 15, 2019, 3:22 PM IST
ಬೆಂಗಳೂರು: ರಾಜ್ಯದಲ್ಲಿ ಬರಗಾಲ ಕಾಣಿಸಿಕೊಂಡಿದ್ದು ಅಧಿಕಾರಿಗಳು ಪರಿಸ್ಥಿತಿ ನಿರ್ವಹಣೆ ಯಲ್ಲಿ ಹಿಂದೆ ಬೀಳಬಾರದು. ಸರ್ಕಾರದ ಬಳಿ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್ ಸಿಇಓಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬರ ಪರಿಸ್ಥಿತಿಯ ಅವಲೋಕನ ನಡೆಸಿದರು.
ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ. ಈಗಾಗಲೆ ಡಿಸಿಗಳ ಖಾತೆಗಳಿಗೆ 10 ಕೋಟಿ ರೂಪಾಯಿ ಹಣವನ್ನುನೀಡಲಾಗಿದೆ. ಸಂಪೂರ್ಣ ಹಣವನ್ನು ಖರ್ಚು ಮಾಡಿ . ಹೆಚ್ಚುವರಿ ಅಗತ್ಯ ಬೇಕಾದಲ್ಲಿ ತಿಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಹೇಳಿದರು.
ಜಾನುವಾರುಗಳಿಗೆ ಕುಡಿವ ನೀರಿಗೆ ಮೊದಲ ಆಧ್ಯತೆ ನೀಡಿ. ಪರಿಸ್ಥಿತಿಯನ್ನು ನಿರ್ವಹಿಸದೆ ಇದ್ದಲ್ಲಿ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಇದೇ ವೇಳೆ ಸಿಎಂ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ
ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ
ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ
ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ
ಗುಂಡ್ಲುಪೇಟೆ: ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ