ಕನಸು ಈಡೇರಲು ಸುಮ್ಮನೆ ಕೂರಬೇಡಿ

ಕನಸುಗಾರ ಪುತ್ರನ ವಿಶ್ವಾಸದ ಮಾತು...

Team Udayavani, May 26, 2020, 4:09 AM IST

kanasu-manu

ಸಾಮಾನ್ಯವಾಗಿ ಸ್ಟಾರ್‌ನಟರು ತಮ್ಮ ಟ್ವೀಟ್‌ ಮೂಲಕ ಏನಾದರೊಂದು ಸಂದೇಶ ಕೊಟ್ಟರೆ, ಅವರ ಅಭಿಮಾನಿಗಳು ಅದನ್ನು ಚಾಚು ತಪ್ಪದೆ ಮಾಡುತ್ತಾರೆ. ಒಂದಷ್ಟು ಮಂದಿ ಕಾಮೆಂಟ್‌ ಮೂಲಕ ಮೆಚ್ಚುಗೆ ಸೂಚಿಸುತ್ತಾರೆ. ಈಗ ರವಿಚಂದ್ರನ್‌ ಪುತ್ರ ಮನುರಂಜನ್‌ ಅವರೂ ಸಹ ತಮ್ಮ ಟ್ವಿಟ್ಟರ್‌ಖಾತೆಯಲ್ಲೊಂದು ಸಂದೇಶ ಹಾಕಿದ್ದಾರೆ. ಅವರ ಸಂದೇಶಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಅಂದಹಾಗೆ, ಮನುರಂಜನ್‌ ಅವರು ಮಾಡಿರುವ ಟ್ವೀಟ್‌ನಲ್ಲಿ, “ನಿಮ್ಮ ಕನಸುಗಳು ನನಸಾಗುವವರೆಗೆ ಸುಮ್ಮನೆ ಕೂರಬೇಡಿ. ಎಂದಿಗೂ ನೀವು ವಿಶ್ವಾಸ ಕಳೆದುಕೊಳ್ಳಬೇಡಿ. ಏನೂ ಇಲ್ಲವಾಗ ಯಾರಾದರೂ ಇದ್ದೇ ಇರುತ್ತಾರೆ. ಯಾವ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ’ ಎಂದು ಪಾಸಿಟಿವ್‌ ಅಂಶಗಳ ಕುರಿತು ಟ್ವೀಟ್‌ ಮಾಡಿದ್ದಾರೆ. ಅವರ ಈ ಟ್ವೀಟ್‌ ನೋಡಿ ಅನೇಕ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯಕ್ಕೆ ಮನುರಂಜನ್‌ ಅಭಿನಯದ “ಪ್ರಾರಂಭ ‘ ಚಿತ್ರ ಇನ್ನೇನು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈ ಕೊರೊನಾ ಸಮಸ್ಯೆ ಎದುರಾಗದಿದ್ದರೆ, ಇಷ್ಟೊತ್ತಿಗಾಗಲೇ “ಪ್ರಾರಂಭ ‘ ಚಿತ್ರ ತನ್ನ ಕಾರ್ಯಾರಂಭ ಶುರು ಮಾಡಬೇಕಿತ್ತು. ಲಾಕ್‌ಡೌನ್‌ ಕಾರಣ, ಸಿನಿಮಾ ಬಿಡುಗಡೆಗೊಂಡಿಲ್ಲ. ಇತ್ತೀಚೆಗೆ ಚಿತ್ರತಂಡ ಚಿತ್ರದ ಲಿರಿಕಲ್‌ ವಿಡಿಯೊ ಬಿಡುಗಡೆ ಮಾಡಿದೆ. ಆನಂದ್‌ ಆಡಿಯೋದ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದು, ಹಾಡು ಕೇಳಿದವರಿಂದ ಮೆಚ್ಚುಗೆ ಸಿಕ್ಕಿದೆ. ಇದೊಂದು ಲವ್‌ಸ್ಟೋರಿಯಾಗಿದ್ದರೂ, ಈ ಚಿತ್ರದಲ್ಲಿ ಮನುರಂಜನ್‌ ವಿಭಿನ್ನ ಪಾತ್ರ ಮಾಡಿದ್ದಾರೆ. ಅವರಿಗಿಲ್ಲಿ ಎರಡು ಶೇಡ್‌ ಇರುವಂತಹ ಪಾತ್ರ ಸಿಕ್ಕಿದೆ.

ಈ ಚಿತ್ರವನ್ನು ಮನುಕಲ್ಯಾಡಿ ನಿರ್ದೇಶನ ಮಾಡಿದ್ದಾರೆ. ಅವರ ಸಹೋದರ ಜಗದೀಶ್‌ ಕಲ್ಯಾಡಿ ಸಿನಮಾವನ್ನು ನಿರ್ಮಾಣ ಮಾಡಿದ್ದಾರೆ. ರವಿ ವಡೇರಹಳ್ಳಿ ಚಿತ್ರದ ಸಹ ನಿರ್ಮಾಪಕರು. ಚಿತ್ರಕ್ಕೆ ಸುರೇಶ್‌ ಬಾಬು ಛಾಯಾಗ್ರಹಣವಿದೆ. ಪ್ರಜ್ವಲ್‌ ಪೈ, ವಿಜಯಕುಮಾರ್‌, ಜೈ, ನವೀನ್‌ ಕುಮಾರ್‌,ಗುರುಪ್ರಸಾದ್‌, ರವಿ ಸಂತೆ ಹೈಕ್ಲು, ಸಂತೋಷ್‌ ನಾಯ್ಕ, ಥ್ರಿಲ್ಲರ್‌ ಮಂಜು, ವಿಕ್ರಮ್‌ ಮೋರ್‌, ಕಿಶೋರ್‌, ಮನೋಜ್‌, ಚೇತನ್‌ ಇತರರು ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಈ ಚಿತ್ರವನ್ನು ಮೈಸೂರು ಟಾಕೀಸ್‌ ರಿಲೀಸ್‌ ಮಾಡುತ್ತಿದೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.