Dr GG Lakshmana Prabhu: ಕವಿ ಮನಸ್ಸಿನ ಸಾಧಕ ವೈದ್ಯ ಡಾ| ಪ್ರಭು: ಡಾ| ಜೋಷಿ

ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆ

Team Udayavani, Dec 1, 2023, 12:16 AM IST

gg

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಖ್ಯಾತ ವೈದ್ಯ, ನಗರದ ಕೆಎಂಸಿ ಆಸ್ಪತ್ರೆಯ ಮೂತ್ರಾಂಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಮತ್ತು ಸರ್ಜನ್‌ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆ ಗುರುವಾರ ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯಿತು.

ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿ ನುಡಿ ನಮನ ಸಲ್ಲಿಸುತ್ತ, “ಉತ್ಕೃಷ್ಟ ವೈದ್ಯರಾಗಿ ಸಮಾಜ ಸ್ಪಂದನೆಯ ಹಾಗೂ ಕವಿ ಮನಸ್ಸಿನ ಅಪರೂಪದ ಸಾಧಕ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರು ಮಾನವೀಯತೆಯ ಬಹುಮುಖ ಹೊಂದಿದವರು. ವೈದ್ಯಕೀಯ ಕ್ಷೇತ್ರದಲ್ಲಿದ್ದು ಸಾಹಿತ್ಯವನ್ನು ಅರಗಿಸಿಕೊಂಡ ಅವರು ಅಪರೂಪದ ಮಹಾ ಪುರುಷ. ಸದಾ ನಗು ಮುಖ ಹಾಗೂ ಹಾಸ್ಯದಲ್ಲಿ ಸಿದ್ಧಾಂತ ಹೊಂದಿದ್ದ ಅವರಿಂದು ನಮ್ಮೊಡನೆ ಇಲ್ಲವಾದರೂ ಅವರ ಜಾಗೃತ ಪ್ರಜ್ಞೆ ಎಂದೆಂದಿಗೂ ಜಾಗೃತವಾಗಿರುತ್ತದೆ ಎಂದರು.

ಯುರೋಲಜಿಸ್ಟ್‌ ಡಾ| ಅಶೋಕ್‌ ಪಂಡಿತ್‌ ಮಾತನಾಡಿ, ಪ್ರಖ್ಯಾತ ವೈದ್ಯರಾಗಿದ್ದ ಲಕ್ಷ್ಮಣ ಪ್ರಭು ಅವರು ಪ್ರವಾಸದ ಬಗ್ಗೆ ಹೆಚ್ಚು ಆಸ್ಥೆ ವಹಿಸಿಕೊಂಡಿದ್ದರು. ವಿದೇಶಕ್ಕೆ ಭೇಟಿ ನೀಡಿದ ಸಮಯದಲ್ಲಿ ಅಲ್ಲಿನ ಅಂಚೆಚೀಟಿ ಸಂಗ್ರಹ ಸಹಿತ ವಿವಿಧ ಕುತೂಹಲವನ್ನು ತನ್ನಲ್ಲಿ ಬೆಳೆಸಿಕೊಂಡಿದ್ದರು. ದೈಹಿಕವಾಗಿ ಇಂದು ಅವರು ನಮ್ಮೊಂದಿಗಿಲ್ಲವಾದರೂ ನಮ್ಮ ಮನಸ್ಸಿನಲ್ಲಿ ಅಜರಾಮರ ಎಂದರು.
ಯುರೋಲಜಿಸ್ಟ್‌ ಚೆನ್ನೈಯ ಡಾ| ಗಣೇಶ್‌ ಕಾಮತ್‌ ಮಾತನಾಡಿ, ಯುರಾಲಜಿಕಲ್‌ ಸೊಸೈಟಿ ಆಫ್‌ ಇಂಡಿಯಾದಲ್ಲಿ ಲಕ್ಷ್ಮಣ ಪ್ರಭು ಅವರು ಪದಾಧಿಕಾರಿಯಾಗಿ ಮಹೋನ್ನತ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ವೈದ್ಯಕೀಯ ಲೋಕದಲ್ಲಿ ಅವರ ಹೆಸರು ಶಾಶ್ವತ ಎಂದು ಹೇಳಿದರು.

ಲೆಕ್ಕಪರಿಶೋಧಕ ವಾಮನ ಕಾಮತ್‌ ಮಾತನಾಡಿ, ಲಕ್ಷ್ಮಣ ಪ್ರಭು ಅವರು ವೈದ್ಯರಾಗಿ, ಸಾಹಿತ್ಯ,ಸಾಂಸ್ಕೃತಿಕ, ಸಂಘಟನೆ, ಸಮಾಜ ಮುಖೀ, ಪ್ರವಾಸಿ ನೆಲೆಯಲ್ಲಿಯೂ ತನ್ನನ್ನು ತಾನು ಅರ್ಪಿಸಿಕೊಂಡ ಬಗೆ ಅವಿಸ್ಮರಣೀಯ. ಉತ್ತಮ ಮನೆತನದೊಂದಿಗೆ ಸಮಾಜದ ಹತ್ತಾರು ವಿಚಾರಗಳ ಬಗ್ಗೆ ಕುತೂಹಲ ಉಳಿಸಿಕೊಂಡಿದ್ದ ಅವರು ಅಪರೂಪದ ಸಾಧಕ. ಹಲವಾರು ಸಂಕೀರ್ಣ ವೈದ್ಯ ಕೀಯ ಪ್ರಕರಣಗಳನ್ನು ನಿರ್ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಮಣಿಪಾಲ ಪೈ ಕುಟುಂಬದ ಟಿ. ಸತೀಶ್‌ ಯು. ಪೈ, ಡಾ| ಸಂಧ್ಯಾ ಎಸ್‌. ಪೈ, ಟಿ. ಗೌತಮ್‌ ಪೈ, ವನಿತಾ ಪೈ, ಟಿ. ಹರೀಶ್‌ ಪೈ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಹಾಗೂ ಸಿಇಒ ವಿನೋದ್‌ ಕುಮಾರ್‌, ಶಾಸಕ ಡಿ. ವೇದವ್ಯಾಸ ಕಾಮತ್‌, ಮಾಹೆ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕೆಎಂಸಿ ಮಂಗಳೂರು ಕ್ಯಾಂಪಸ್‌ ಪ್ರೊ ವೈಸ್‌ ಚಾನ್ಸಲರ್‌ ಡಾ| ದಿಲೀಪ್‌ ನಾಯಕ್‌, ಕೆಸಿಸಿಐ ಅಧ್ಯಕ್ಷ ಅನಂತೇಶ್‌ ಪ್ರಭು ಮುಂತಾದವರು ಶ್ರದ್ಧಾಂಜಲಿ ಸಮರ್ಪಿಸಿದರು.

ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಎಲ್‌. ಪ್ರಭು, ಪುತ್ರ ಡಾ| ಜಿ.ಜಿ. ಅಕ್ಷಯ್‌ ಪ್ರಭು, ಪುತ್ರಿ ಜಿ.ಜಿ. ಕೃತಿಕಾ ಪ್ರಭು, ಸಹೋದರ ಜಿ.ಜಿ. ಮೋಹನ್‌ದಾಸ್‌ ಪ್ರಭು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.