Politics: ಜಾರಕಿಹೊಳಿಗೆ ಕೈ ನಾಯಕರ ತಿರುಗೇಟು- ರಮೇಶ್ ಮಾತಿಗೆ ಉತ್ತರ ಕೊಡಲ್ಲ: ಸಿಎಂ
Team Udayavani, Oct 31, 2023, 11:45 PM IST
ಬೆಂಗಳೂರು: ರಮೇಶ್ ಜಾರಕಿಹೊಳಿ ಮಾತಿಗೆಲ್ಲ ಉತ್ತರ ಕೊಡುತ್ತಾ ಕುಳಿತುಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳಿದ ತತ್ಕ್ಷಣ ಸರಕಾರ ಬಿದ್ದು ಹೋಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮಾತಿಗೆ ನೀವು ಉಪ್ಪು-ಖಾರ ಹಾಕಬೇಡಿ. ಸರಕಾರ ಸ್ಥಿರವಾಗಿದೆ. ಬಿಜೆಪಿಯವರು ಹೇಳಿದ ತಕ್ಷಣ ಸರಕಾರ ಬಿದ್ದು ಹೋಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಸರಕಾರ ಪತನ ಅಸಾಧ್ಯ: ರಾಮಲಿಂಗಾ ರೆಡ್ಡಿ
ವಿಜಯಪುರ: ಕಾಂಗ್ರೆಸ್ ಸರಕಾರದಲ್ಲಿ ಸಿಎಂ ವರ್ಸಸ್ ಡಿಸಿಎಂ ಮಧ್ಯೆಯಾಗಲಿ, ಕಾಂಗ್ರೆಸ್ ಸರಕಾರದಲ್ಲಾಗಲಿ ಯಾವ ಆಂತರಿಕ ಸಂಘರ್ಷವೂ ಇಲ್ಲ. ಬಿಜೆಪಿ ನಾಯಕರು ಕಾಂಗ್ರೆಸ್ ಸರಕಾರ ಪತನದ ಕನಸು ಕಾಣುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಇದೆಲ್ಲ ಮಾಧ್ಯಮ ಸೃಷ್ಟಿ. ಮಾಧ್ಯಮದವರು ಕೇಳುತ್ತಾರೆ ಎಂದು ಕೆಲವರು ಹೇಳುತ್ತಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಸರಕಾರ ಬದಲಾವಣೆ ಎಂದು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಸೋತು ಸುಣ್ಣವಾಗಿರುವ ಬಿಜೆಪಿ ಮೊದಲು ವಿಪಕ್ಷ ನಾಯಕ ಮಾಡಿಕೊಳ್ಳಲಿ. ಸಚಿವ ಸತೀಶ ಜಾರಕಿಹೊಳಿ ದುಬಾೖ ಪ್ರವಾಸ ಸಮಸ್ಯೆಯಲ್ಲ, ಸರಕಾರಕ್ಕೆ ಏನೂ ಆಗುವುದಿಲ್ಲ. ನಮ್ಮ ಸರಕಾರ 10 ವರ್ಷ ಅಧಿಕಾರದಲ್ಲಿರಲಿದೆ ಎಂದರು.
ಜಾರಕಿಹೊಳಿಗೆ ಭ್ರಮನಿರಸನ ಗ್ಯಾರಂಟಿ
ಅರಸೀಕೆರೆ(ಹಾಸನ): ರಾಜ್ಯ ಸರಕಾರ ಮಹಾರಾಷ್ಟ್ರ ರೀತಿಯಲ್ಲಿ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಕಿಡಿ ಕಾರಿದರು. ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ರಮೇಶ್ ಜಾರಕಿಹೋಳಿ ಅಂತಹದ್ದೇ ಪಾತ್ರವನ್ನು ಅವರ ರಾಜಕೀಯ ಜೀವನದಲ್ಲಿ ಮಾಡಿಕೊಂಡು ಬಂದಿದ್ದಾರೆ. ಅವತ್ತಿನ ಸಮ್ಮಿಶ್ರ ಸರಕಾರದಲ್ಲಿ ಸಕ್ಸಸ್ ಆಗಿದೆ ಅಂಥ ಈ ಸರಕಾರಕ್ಕೆ ಕೈ ಹಾಕಿದರೆ ಭ್ರಮನಿರಸನ ಗ್ಯಾರಂಟಿ ಎಂದು ಎಚ್ಚರಿಸಿದರು. ರಮೇಶ್ ಜಾರಕಿಹೋಳಿ, ಬಿಜೆಪಿಯವರು ಸೇರಿ ಯಾರ್ಯಾರು ಈ ರೀತಿ ಹೇಳ್ತಾರೋ ಅವರೆಲ್ಲ ಹುಚ್ಚರು. ಇವರೆಲ್ಲರಿಗೂ ಭ್ರಮ ನಿರಸನ ಕಾದಿದೆ, ಯಶಸ್ಸು ಸಿಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್