ಗೊಂದಲಕ್ಕೆ ಆಸ್ಪದ ಬೇಡ, ನಿರ್ಧಾರ ಬೇಗ ತೆಗೆದುಕೊಳ್ಳಿ


Team Udayavani, Jun 1, 2021, 3:19 AM IST

ಗೊಂದಲಕ್ಕೆ ಆಸ್ಪದ ಬೇಡ, ನಿರ್ಧಾರ ಬೇಗ ತೆಗೆದುಕೊಳ್ಳಿ

ರಾಜ್ಯಾದ್ಯಂತ ಕಾಡುತ್ತಿರುವ ಕೊರೊನಾದಿಂದಾಗಿ ಎಲ್ಲ ಚಟುವಟಿಕೆಗಳು ಬಂದ್‌ ಆಗಿರುವುದಷ್ಟೇ. ವಾಣಿಜ್ಯ ಚಟುವಟಿಕೆಗಳಾದರೂ ಕೊಂಚ ಸಮಯವಾದ ಒಪನ್‌ ಆಗಿದ್ದವು. ಆದರೆ ಕೊರೊನಾ ಆರಂಭವಾದಾಗಿನಿಂದಲೂ ಹೆಚ್ಚು ಹೊಡೆತ ತಿಂದಿರುವುದು ಶೈಕ್ಷಣಿಕ ಕ್ಷೇತ್ರ. ಕಳೆದ ವರ್ಷದ ಮಾರ್ಚ್‌ ಅಂತ್ಯದಿಂದ ಹಿಡಿದು, ಇಲ್ಲಿವರೆಗೂ ಬರೀ ಗೊಂದಲದಲ್ಲೇ ಈ ವಲಯ ಮುಳುಗಿದೆ.

ಶೈಕ್ಷಣಿಕ ಆರಂಭದ ದಿನಗಳಲ್ಲಿ ಶಾಲಾರಂಭದ ಬಗ್ಗೆ ಗೊಂದಲಗಳಿದ್ದರೆ, ಪರೀಕ್ಷಾ ಋತು ಬಂದರೆ ಸಾಕು ಬೇಕೋ ಅಥವಾ ಬೇಡವೋ ಎಂಬ ಚರ್ಚೆಗಳು ಶುರುವಾಗುತ್ತವೆ. ಈ ಬಾರಿಯಂತೂ ಎರಡನೇ ಅಲೆ ಕಳೆದ ಬಾರಿಗಿಂತಲೂ ಹೆಚ್ಚು ಕಾಡಿದ್ದು, ಸಾವು ನೋವೂ ಹೆಚ್ಚಾಗಿದೆ. ಇದನ್ನು ಮನಗಂಡೇ ಈಗಾಗಲೇ ಕೆಲವು ರಾಜ್ಯಗಳು ಮತ್ತು ಸಿಬಿಎಸ್‌ಇ ಮತ್ತು ಐಸಿಎಸ್‌ಇಗಳು 10ನೇ ತರಗತಿ ಪರೀಕ್ಷೆಯನ್ನೇ ರದ್ದು ಮಾಡಿವೆ. ಈಗ 12ನೇ ತರಗತಿ ಪರೀಕ್ಷೆ ರದ್ದು ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಚರ್ಚೆಯಲ್ಲಿ ತೊಡಗಿವೆ. ಈ ಬಗ್ಗೆ ಸುಪ್ರೀಂಕೋರ್ಟ್‌ ಕೂಡ ವಿಚಾರಣೆ ನಡೆಸುತ್ತಿದೆ.

ಇವೆಲ್ಲದರ ಮಧ್ಯೆ, ಉದಯವಾಣಿ ನಡೆಸಿದ ಮೆಗಾ ಸರ್ವೆಯಲ್ಲಿ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಲು ಸಿದ್ಧವಾಗಿರುವುದು ಬಹಿರಂಗಗೊಂಡಿದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ಮತ್ತು ಹೆತ್ತವರು ಪ್ರಶ್ನೆ ಇರುವುದು ಗೊಂದಲಗಳ ಬಗ್ಗೆ. ದಯಮಾಡಿ ಯಾವುದೇ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿ ಅವರಲ್ಲಿ ಒತ್ತಡ ಹೆಚ್ಚಿಸಬೇಡಿ. ಒಂದು ಪರೀಕ್ಷೆ ಮಾಡುವುದಾದರೆ ಮಾಡಿ, ಇಲ್ಲವೇ ರದ್ದು ಮಾಡಿ ಬಿಡಿ ಎಂದು ಹೇಳಿದ್ದಾರೆ. ಹೆತ್ತವರುೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ನಮ್ಮ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಲು ಸಿದ್ಧ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

ಹೀಗಾಗಿ ರಾಜ್ಯ ಸರಕಾರ ಕೊರೊನಾ ಕಡಿಮೆಯಾದ ಮೇಲೆ ಪರೀಕ್ಷೆ ನಡೆಸುವುದಾದರೆ ನಡೆಸಲಿ. ಆದರೆ ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಿ. ಕಳೆದ ಬಾರಿಯೂ ದೇಶದ ಹಲವಾರು ರಾಜ್ಯಗಳು 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ದವು. ಆದರೆ ರಾಜ್ಯ ಸರಕಾರ ಮಾತ್ರ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡದೇ ಯಶಸ್ವಿಯಾಗಿ ನಡೆಸಿತ್ತು. ಈ ಮೂಲಕ ದೇಶದಲ್ಲೇ ಪ್ರಶಂಸೆಗೂ ಪಾತ್ರವಾಗಿತ್ತು.

ಅದೇ ರೀತಿಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಸಲಿ. ಆದರೆ ಇಲ್ಲಿ ಕೆಲವೊಂದು ಅಂಶಗಳಿವೆ. ಉದಯವಾಣಿ ಸಮೀಕ್ಷೆಯಲ್ಲಿ ಕಂಡುಕೊಂಡ ಹಾಗೆ, ವರ್ಷವಿಡೀ ನಡೆದ ಆನ್‌ ಲೈನ್‌ ತರಗತಿಗಳು ಮಕ್ಕಳಿಗೆ ಅರ್ಥವಾಗಿಲ್ಲ. ಶಿಕ್ಷಕರೂ ಸಿಲಬಸ್‌ ಮುಗಿಸಿದ್ದೇವೆ ಎಂದು ಹೇಳಿದ್ದಾರೆಯೇ ಹೊರತು, ಭೌತಿಕ ತರಗತಿಯಷ್ಟು ಆನ್‌ ಲೈನ್‌ ತರಗತಿ ಪರಿಣಾಮಕಾರಿಯಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಕಡಿಮೆ ಅಂಕದ, ಸುಲಭವಾಗಿರುವಂಥ ಪ್ರಶ್ನೆಗಳುಳ್ಳ, ಕಡಿಮೆ ಅವಧಿಯ, ಪ್ರಮುಖ ವಿಷಯಗಳ ಮೇಲೆ ಪರೀಕ್ಷೆ ನಡೆಸುವುದು ಒಳಿತು. ಇದರಿಂದ ಮಕ್ಕಳ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ, ಹಾಗೆಯೇ ಪರೀಕ್ಷೆ ಮೇಲಿನ ಮಕ್ಕಳ ಭಯವೂ ಹೋಗುತ್ತದೆ.

ಏನೇ ಆಗಲಿ ಸರಕಾರ ಈ ಬಗ್ಗೆ ಬೇಗನೇ ನಿರ್ಧಾರ ತೆಗೆದುಕೊಳ್ಳಲಿ ಎಂಬುದು ರಾಜ್ಯದ ಜನರ ಆಗ್ರಹ. ಇತ್ತ ಸರಕಾರ ಗಮನ ಹರಿಸುವುದು ಒಳಿತು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.