Ration: ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ: ಮುನಿಯಪ್ಪ
Team Udayavani, Nov 6, 2023, 8:35 PM IST
ಮೈಸೂರು: ಅನ್ನ ಸುವಿಧಾ ಕಾರ್ಯಕ್ರಮದ ಮೂಲಕ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತದೆ. ನ್ಯಾಯಬೆಲೆ ಅಂಗಡಿಗೆ ಬರಲಾಗದವರಿಗೆ ಪಡಿತರ ತಲುಪಿಸುವ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಜಾಗೃತಿ ಕಾರ್ಯಕ್ರಮದ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ 2.95 ಲಕ್ಷ ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ. ಈ ಪೈಕಿ 90 ವರ್ಷ ಮೇಲ್ಪಟ್ಟ ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದೆ. ವಿಶೇಷಚೇತನರು, ಅಸಹಾಯಕರಿಗೂ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ಚಿಂತನೆ ನಡೆಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹಣ ಬದಲು 10 ಕೆ.ಜಿ. ಅಕ್ಕಿ ಕೊಡುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ. ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳನ್ನು ವಾರದೊಳಗೆ ಸಭೆ ಮಾಡಿ ಇತ್ಯರ್ಥ ಪಡಿಸುವುದಾಗಿ ಹೇಳಿದರು.
18 ಲಕ್ಷ ಜನರಿಗಿಲ್ಲ ಹಣ: 1.28 ಲಕ್ಷ ಬಿಪಿಎಲ್ ಕಾರ್ಡ್ದಾರರಿದ್ದಾರೆ. 1.10 ಕೋಟಿ ಕಾರ್ಡ್ಗಳಿಗೆ 5 ಕೆ.ಜಿ. ಹಣವನ್ನು ಜಮೆ ಮಾಡಲಾಗುತ್ತಿದೆ. 5 ಲಕ್ಷ ಕಾರ್ಡ್ದಾರರು ಕಾಲವಾಗಿದ್ದಾರೆ. 5 ಲಕ್ಷ ಕಾರ್ಡ್ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸಿ ಕಾರ್ಡ್ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ