ದೊರೆಸ್ವಾಮಿ ಸ್ವಾವಲಂಬಿ ಹಾಗೂ ತ್ಯಾಗದ ಜೀವನ ನಡೆಸಿದವರು: ಸಿದ್ದರಾಮಯ್ಯ


Team Udayavani, Aug 8, 2021, 10:00 PM IST

ದೊರೆಸ್ವಾಮಿ ಸ್ವಾವಲಂಬಿ ಹಾಗೂ ತ್ಯಾಗದ ಜೀವನ ನಡೆಸಿದವರು: ಸಿದ್ದರಾಮಯ್ಯ

ಬೆಂಗಳೂರು: “ನಾವೆಲ್ಲ ಅಧಿಕಾರದಲ್ಲಿ ಇದ್ದವರು, ಮುಂದೆಯೂ ಮತ್ತೆ ಅಧಿಕಾರ ಬೇಕು ಎನ್ನುವವರು. ಆದರೆ, ದೊರೆಸ್ವಾಮಿ ಸ್ವಾವಲಂಬಿ ಹಾಗೂ ತ್ಯಾಗದ ಜೀವನ ನಡೆಸಿದವರು’ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ದಿವಂಗತ ಎಚ್‌.ಎಸ್‌. ದೊರೆಸ್ವಾಮಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೊರೆಸ್ವಾಮಿ ಚುನಾವಣೆಗೆ ನಿಂತು ರಾಜಕಾರಣ ಮಾಡಬಹುದಿತ್ತು. ಅಧಿಕಾರದ ಗದ್ದುಗೆಯನ್ನೂ ಏರಬಹುದಿತ್ತು. ಆದರೆ, ಯಾವತ್ತೂ ಅದರಿಂದ ಅಂತರ ಕಾಯ್ದುಕೊಂಡು ಬಂದರು. ಎಂದಿಗೂ ಸ್ವಾರ್ಥಕ್ಕಾಗಿ, ಅಧಿಕಾರಕ್ಕಾಗಿ ಹೋರಾಟ ಮಾಡಿದವರಲ್ಲ. ಜನರಿಗೆ ಅನ್ಯಾಯವಾದಾಗಲೆಲ್ಲಾ ದನಿ ಎತ್ತುತ್ತಿದ್ದರು. ಸಾಮಾನ್ಯವಾಗಿ ಗಾಂಧಿವಾದದ ಬಗ್ಗೆ ಮಾತನಾಡುವುದು ಸುಲಭ. ಆದರೆ, ಅನುಸರಣೆ ಕಷ್ಟ. ಇವೆರಡನ್ನೂ ನಿರ್ವಹಿಸಿದವರು ದೊರೆಸ್ವಾಮಿ ಎಂದು ಹೇಳಿದರು.

“ನಾವು ಅಧಿಕಾರದಲ್ಲಿದ್ದಾಗ ಅನೇಕ ಬಾರಿ ಬಂದು ಅವರು ಭೇಟಿ ಮಾಡಿದ್ದರು. ಸ್ವಾರ್ಥಕ್ಕಾಗಿ ಎಂದೂ ಬಂದವರಲ್ಲ. ಜನರ ಸಮಸ್ಯೆಗಳು ಇದ್ದಾಗ ಮಾತ್ರ ಬಂದು ಮಾತನಾಡುತ್ತಿದ್ದರು. ತಪ್ಪು ಮಾಡಿದಾಗ ಕಿವಿಹಿಂಡಿದ್ದೂ ಉಂಟು’ ಎಂದು ಮೆಲುಕು ಹಾಕಿದರು.

ಇದನ್ನೂ ಓದಿ:ಪ್ರಧಾನಿಗೆ ಪ್ರತಿಪಕ್ಷಗಳ ವಿಡಿಯೋ ಸಂದೇಶ

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ದೊರೆಸ್ವಾಮಿ, ಸ್ವಾತಂತ್ರ್ಯ ನಂತರ  ಅಧಿಕಾರಕ್ಕೆ ಬಂದ ನಮ್ಮವರದ್ದೇ ಸರ್ಕಾರಗಳು ತಪ್ಪು ಮಾಡಿದಾಗ‌, ಭ್ರಷ್ಟಾಚಾರ ನಡೆಸಿದಾಗ ಹೋರಾಟ ಮಾಡಿದರು. ಅಷ್ಟೇ ಅಲ್ಲ ಅವರು ಸಾಕಷ್ಟು ನಕ್ಸಲ್‌ ಹೋರಾಟಗಾರರ ಮನಸ್ಸು ಬದಲಾಯಿಸಿದವರು. ದೊರೆಸ್ವಾಮಿ ಮತ್ತು ಗೌರಿ ಲಂಕೇಶ್‌ ಮುಂತಾದವರು ಸಾಕಷ್ಟು ಜನರನ್ನು ಕರೆತಂದು ಉತ್ತಮ ಜೀವನ ರೂಪಿಸಿಕೊಳ್ಳಲು ಕಾರಣಕರ್ತರಾಗಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೈಎಸ್‌ವಿ ದತ್ತ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್‌, ಲೇಖಕಿ ಡಾ.ವಸುಂಧರಾ ಭೂಪತಿ, ಎಂ.ಪಿ. ನಾಡಗೌಡ, ದೊರೆಸ್ವಾಮಿ ಅವರ ಮಗ ರಾಜು ದೊರೆಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.