DK,Udupi, ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ| ದೇವಿಪ್ರಸಾದ್‌ ಶೆಟ್ಟಿ ಆಯ್ಕೆ


Team Udayavani, Sep 10, 2023, 11:12 PM IST

DK,Udupi, ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ| ದೇವಿಪ್ರಸಾದ್‌ ಶೆಟ್ಟಿ ಆಯ್ಕೆ

ಪಡುಬಿದ್ರಿ: ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಸಮಿತಿಯ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ ಅವರು ಅಧಿಕಾರ ಹಸ್ತಾಂತರಗೈದರು. ಕಂಬಳ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್‌ ಶೆಟ್ಟಿ ಮುಚ್ಚಾರು ಹಾಗೂ ಕೋಶಾಧಿಕಾರಿಯಾಗಿ ಚಂದ್ರಹಾಸ ಸಾಧು ಸನಿಲ್‌, ತೀರ್ಪುಗಾರರ ಸಂಚಾಲಕರಾಗಿ ವಿಜಯ ಕುಮಾರ್‌ ಕಂಗಿನಮನೆ ಆಯ್ಕೆಯಾಗಿದ್ದಾರೆ.

ನವೆಂಬರ್‌ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಪೂರ್ವ ತಯಾರಿಯ ಬಗೆಗೆ ಶಾಸಕ ಅಶೋಕ್‌ ರೈ ಮಾಹಿತಿಯಿತ್ತರು. ಕಂಬಳದ ಸೊಬಗನ್ನು ರಾಜ್ಯ ರಾಜಧಾನಿಯಲ್ಲಿ ಪಸರಿಸಲು ಎಲ್ಲರ ಬೆಂಬಲವನ್ನೂ ಶಾಸಕ ರೈ ಬಯಸಿದರು.

ನವೆಂಬರ್‌ನಲ್ಲಿ ಆರಂಭವಾಗಲಿರುವ ಕಂಬಳ ಋತುವನ್ನು ಶಿಸ್ತುಬದ್ಧವಾಗಿ ನಡೆಸಬೇಕು. 24ಗಂಟೆಯೊಳಗೆ ಕಂಬಳ ವನ್ನು ಮುಗಿಸಬೇಕು. ಈ ಕುರಿತಾಗಿ ಸರಕಾರದ ಆದೇಶವನ್ನು ಎಲ್ಲರೂ ಪಾಲಿಸುವಂತೆ ಶಿಸ್ತು ಸಮಿತಿಯ ಅಧ್ಯಕ್ಷ ಇರ್ವತ್ತೂರು ಭಾಸ್ಕರ ಕೋಟ್ಯಾನ್‌ ಸಭೆಯಲ್ಲಿ ತಿಳಿಸಿದರು.

ಸೆ. 18: ಕಂಬಳ ದಿನಾಂಕ ಘೋಷಣೆ
ಕಂಬಳದ ವ್ಯವಸ್ಥಾಪಕರಿಗೆ ಕಂಬಳ ನಡೆಸುವ ಮಾರ್ಗಸೂಚಿಯನ್ನು ನೀಡಲು ಸೆ. 18ರಂದು ಸಂಜೆ 3ಕ್ಕೆ ಮೂಡುಬಿದಿರೆಯಲ್ಲಿ ಕಂಬಳ ಸಮಿತಿಯ ಸಭೆ ಕರೆಯಲಾಗಿದೆ. ಆ ದಿನದಂದೇ ಮುಂದಿನ ಸಾಲಿನ ವಿವಿಧ ಕಂಬಳಗಳ ದಿನಾಂಕವನ್ನೂ ಘೋಷಿಸಲಾಗುವುದೆಂದು ಭಾಸ್ಕರ ಕೋಟ್ಯಾನ್‌ ಹೇಳಿದರು.

ಸಭೆಯಲ್ಲಿ ಮೂಲ್ಕಿ ಅರಸು ಕಂಬಳದ ದುಗ್ಗಣ್ಣ ಸಾವಂತರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಬಾರಕೂರು ಶಾಂತಾರಾಮ ಶೆಟ್ಟಿ, ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ನಂದಳಿಕೆ ಶ್ರೀಕಾಂತ ಭಟ್‌, ಪಿ. ಆರ್‌. ಶೆಟ್ಟಿ, ನವೀನ್‌ಚಂದ್ರ ಆಳ್ವ, ಅನಿಲ್‌ ಶೆಟ್ಟಿ, ಸತೀಶ್ಚಂದ್ರ ಸಾಲ್ಯಾನ್‌, ಚಂದ್ರಹಾಸ್‌ ಶೆಟ್ಟಿ ಪುತ್ತೂರು, ರಕ್ಷಿತ್‌ ಶೆಟ್ಟಿ, ಐಕಳಬಾವ ಚಿತ್ತರಂಜನ್‌ ಭಂಡಾರಿ, ರವೀಂದ್ರ ಕುಮಾರ್‌ ಮಾಳ, ದಿನೇಶ್‌ ಶೆಟ್ಟಿ ಮತ್ತು ರಾಜೇಶ್‌ ಶೆಟ್ಟಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಕಂಬಳ ಸಮಿತಿಯ ಸದಸ್ಯರು, ವ್ಯವಸ್ಥಾಪಕರು, ಕೋಣಗಳ ಯಜಮಾನರು, ಓಟಗಾರರು ಹಾಗೂ ಕಂಬಳಾಭಿಮಾನಿಗಳು ಸಭೆಯಲ್ಲಿದ್ದರು. ರಕ್ಷಿತ್‌ ಜೈನ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

 

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.