ವಿಜಯಪುರ ಮೂಲದ ಡಾ.ಎಸ್.ಕೆ.ಕುಲಕರ್ಣಿ ಅವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ
Team Udayavani, Nov 13, 2020, 5:18 PM IST
ವಿಜಯಪುರ : ಔಷಧಿ ಶಾಸ್ತ್ರ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರ ಮೂಲದ ಡಾ.ಶ್ರೀನಿವಾಸ ಕುಲಕರ್ಣಿಯವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ ದೊರೆತಿದೆ.
ಅಮೇರಿಕದ ಸ್ಟ್ಯಾನ್ಪೊರ್ಡ್ ವಿಶ್ವವಿದ್ಯಾಲಯವು ಪ್ರತಿ ವರ್ಷವೂ ಮಾದರಿ ಹಾಗೂ ಸೈಟೇಶನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ, ಗೌರವಿಸುತ್ತದೆ. ಡಾ.ಶ್ರೀನಿವಾಸ ಕುಲಕರ್ಣಿ ಅವರು ಔಷಧೀಯ ಶಾಸ್ತ್ರದ ಕ್ಷೇತ್ರದಲ್ಲಿ ಕೈಗೊಂಡ ಸಂಶೋಧನೆಗಳನ್ನು ಮನ್ನಿಸಿ, ಈ ಗೌರವ ನೀಡಲಾಗಿದೆ.
ಡಾ. ಕುಲಕರ್ಣಿ ಅವರು : 505 ಸಂಶೋಧನಾ ಪ್ರಕಟಣೆಗಳು, 13 ಸಾವಿರಕ್ಕೂ ಹೆಚ್ಚು ಉಲ್ಲೇಖಗಳು ಮತ್ತು 61ಕ್ಕೂ ಹೆಚ್ಚು ಫಾರ್ಮುಲಾಗಳನ್ನು ಔಷಧೀಯ ಶಾಸ್ತ್ರದಲ್ಲಿ ರಚಿಸಿದ್ದಾರೆ. ಜಗತ್ತಿನ ಶ್ರೇಷ್ಠ ಒಂದು ಲಕ್ಷ ವಿಜ್ಞಾನಿಗಳಲ್ಲಿ 132ನೇ ಕ್ರಮಾಂಕಗಳಿಸಿದ್ದು, ಹಾಗೂ ಭಾರತದ ಪ್ರಥಮರಾಗಿದ್ದಾರೆ.
ಇದನ್ನೂ ಓದಿ:ಜಾತಿ ಓಲೈಕೆಯ ಪಕ್ಷಗಳಿಗೆ ಫಲಿತಾಂಶದಿಂದ ತಕ್ಕ ಉತ್ತರ ಸಿಕ್ಕಿದೆ : ಬಿ.ವೈ ವಿಜಯೇಂದ್ರ
ಫಾರ್ಮಕಾಲಜಿ ಸಂಶೋಧನೆಯಲ್ಲಿ ಇವರು ಜಾಗತಿಕ ಮಾನ್ಯತೆಯುಳ್ಳ ವಿಜ್ಞಾನಿಗಳಾಗಿದ್ದು, ಇವರ ಮಾರ್ಗದರ್ಶನದಲ್ಲಿ 30 ಹೆಚ್ಚು ಸಂಶೋಧಕರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರ ಐದು ಸಂಶೋಧನೆಗಳಿಗೆ ಪೇಟೆಂಟ್ ಪಡೆಯಲಾಗಿದೆ.
ಈ ಹಿಂದೆ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿಯಾಗಿ ಕೂಡ ಇವರು ಕಾರ್ಯನಿರ್ವಹಿಸಿದ್ದಾರೆ. ಡಾ.ಕುಲಕರ್ಣಿಯವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದವರು. ಸದ್ಯ ಬೆಳಗಾವಿಯಲ್ಲಿ ನೆಲೆಸಿರುವ ಇವರು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವ ವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಹಾಗೂ ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿದ್ದಾರೆ.
ಡಾ.ಶ್ರೀನಿವಾಸ ಕುಲಕರ್ಣಿ ಅವರಿಗೆ ಮಾಜಿ ಸಚಿವ, ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ್, ಆಡಳಿತಾಧಿಕಾರಿ ಡಾ.ರಾಘವೇಂದ್ರ ಕುಲಕರ್ಣಿ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು