ಡಾ| ಹೆಗ್ಗಡೆ, ಧರ್ಮಸ್ಥಳ ವಿರುದ್ಧ ಅಪಪ್ರಚಾರ: ಖಂಡನೆ
ಹೊಸದಿಲ್ಲಿಯ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯರ ಸಂಘ ಖಂಡನೆ
Team Udayavani, Aug 2, 2023, 12:28 AM IST
ಹೊಸದಿಲ್ಲಿ: 35 ವರ್ಷಗಳ ಹಿಂದೆಯೇ ಉಜಿರೆಯಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಹಾಗೂ ಪಿಎಚ್ಡಿ ಪದವಿಗಳನ್ನು ನೀಡುವ ಕಾಲೇಜು ಮತ್ತು ಆಸ್ಪತ್ರೆಗಳನ್ನು ಸ್ಥಾಪಿಸಿ, ದೇಶದಲ್ಲಿ ಇಂತಹ ಸಂಸ್ಥೆಗಳನ್ನು ಸ್ಥಾಪಿಸಲು ಪ್ರೇರೇಪಿಸಿದ ಸಂಘದ ಪೋಷಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿರುವುದನ್ನು ಹೊಸದಿಲ್ಲಿಯ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯರ ಸಂಘ ಖಂಡಿಸಿದೆ.
ಇಂತಹ ಹೇಳಿಕೆಗಳು ಮರುಕಳಿಸದಂತೆ ಕಾನೂನು ಮತ್ತು ಸುರಕ್ಷತೆಯನ್ನು ಕಾಪಾಡಬೇಕಾಗಿ ಸರಕಾರವನ್ನು ಆಗ್ರಹಿಸಿದೆೆ. ಮುಂದೆ ಇದೇ ರೀತಿಯ ಬೇಜವಾಬ್ದಾರಿಯುತ ಹೇಳಿಕೆಗಳು ಮರುಕ ಳಿಸಿದರೆ ದೇಶಾದ್ಯಂತ ಉಗ್ರ ಕಾನೂನಾತ್ಮಕ ಹೋರಾಟವನ್ನು ಸಂಘದ ವತಿಯಿಂದ ಮಾಡಬೇಕಾಗುತ್ತದೆ ಎಂದು ದಿಲ್ಲಿಯಲ್ಲಿ ನಡೆದ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಡಾ| ನವೀನ ಕೆ.ವಿಶ್ವೇಶ್ವರಯ್ಯ ತಿಳಿಸಿದ್ದಾರೆ.