ಡಾ| ಟಿಎಂಎ ಪೈ ಅವರ ಜನ್ಮದಿನಾಚರಣೆ
Team Udayavani, May 1, 2020, 6:00 AM IST
ಮಣಿಪಾಲದಲ್ಲಿ ಟಿ. ವಸಂತಿ ಪೈ ಅವರು ಡಾ| ಟಿಎಂಎ ಪೈ ಅವರ ಮೂರ್ತಿಗೆ ಗೌರವ ಸಲ್ಲಿಸಿದರು.
ಉಡುಪಿ/ಮಂಗಳೂರು:ಮಣಿಪಾಲ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ| ಟಿಎಂಎ ಪೈ ಅವರ ಜನ್ಮದಿನವನ್ನು ಮಣಿಪಾಲ ಮತ್ತು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಕೋವಿಡ್-19 ರಣ ಲಾಕ್ಡೌನ್ ಇರುವ ಕಾರಣ ವಿಶೇಷ ಸಮಾರಂಭ ಇರಲಿಲ್ಲ.ಮಣಿಪಾಲದ ಮಾಧವ ವಿಹಾರದಲ್ಲಿ, ಬಳಿಕ ಅವರಿದ್ದ ಮನೆ ಸ್ಮತಿ ಭವನ ಮತ್ತು ಮಣಿಪಾಲ ವಿ.ವಿ. ಆಡಳಿತಸೌಧದ ಮುಂಭಾಗ ದಲ್ಲಿರುವ ಡಾ| ಟಿಎಂಎ ಪೈಯವರ ಪುತ್ಥಳಿಗೆ ಮಾಹೆ ವಿ.ವಿ. ಟ್ರಸ್ಟ್ನ ಟ್ರಸ್ಟಿ ಟಿ. ವಸಂತಿ ಪೈ, ವಿ.ವಿ ಸಹಕುಲಾಧಿಪತಿ ಡಾ|ಎಚ್.ಎಸ್.ಬಲ್ಲಾಳ್, ಕುಲಪತಿ ಡಾ| ಎಚ್. ವಿನೋದ ಭಟ್, ಕುಲಸಚಿವ ಡಾ| ನಾರಾಯಣ ಸಭಾಹಿತ್, ಸಹಕುಲಪತಿ ಡಾ| ಪಿಎಲ್ಎನ್ಜಿ ರಾವ್ ಮೊದಲಾದವರು ಪುಷ್ಪನಮನ ಸಲ್ಲಿಸಿದರು.
ಕಸ್ತೂರ್ಬಾ ಆಸ್ಪತ್ರೆ ಒಪಿಡಿ ವಿಭಾಗದಲ್ಲಿಯೂ ಸಿಬಂದಿ ಡಾ| ಪೈಯವರ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ಗೌರವ ಸಲ್ಲಿಸಿದರು.
ಮಾಧವ ವಿಹಾರ ಮತ್ತು ಸ್ಮತಿ ಭವನಕ್ಕೆ ಡಾ| ಟಿಎಂಎ ಪೈ ಫೌಂಡೇಶನ್ ಕಾರ್ಯದರ್ಶಿ ಟಿ. ಅಶೋಕ್ ಪೈ, ಪತ್ನಿ ಗಾಯತ್ರಿ ಪೈ, ಪುತ್ರ ಸಚಿನ್ ಪೈ ಅವರು ಗೌರವಾರ್ಪಣೆ ಸಲ್ಲಿಸಿದರು.
ಮಂಗಳೂರಿನಲ್ಲಿ
ಅತ್ತಾವರದ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಜಾನ್ ರಾಮಪುರಮ್ ಅವರು ಡಾ| ಟಿಎಂಎ ಪೈ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಅನಾ ರೋಗ್ಯ, ಅನಕ್ಷರತೆ ಹಾಗೂ ಬಡತನ ನಿರ್ಮೂಲನೆ ಮಾಡಲು ಡಾ| ಟಿ.ಎಂ.ಎ. ಪೈ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ಎಜುಕೇಶನ್ ಎಂಬ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದು ಈ ಮೂಲಕ ತಮ್ಮ ಕನಸನ್ನು ನನಸಾಗಿಸಲು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದರು ಎಂದರು.
ಆಸ್ಪತ್ರೆಯಲ್ಲಿರುವ ಎಲ್ಲ ರೋಗಿ ಗಳಿಗೆ ಹಣ್ಣು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪ ವೈದ್ಯಕೀಯ ಅಧೀಕ್ಷಕ ಡಾ| ದೀಪಕ್ ಮಡಿ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ