ಒಳಚರಂಡಿ ಪೈಪ್ಲೈನ್ ಒಡೆದು ಕಲುಷಿತ ನೀರು ಸಂಗ್ರಹ
Team Udayavani, Sep 14, 2020, 6:10 PM IST
ಬೆಳಗಾವಿ: ಮೂರು ದೇವಸ್ಥಾನಗಳು ಇರುವ ಈ ಪ್ರದೇಶದಲ್ಲಿ ಒಳಚರಂಡಿ ಪೈಪ್ಲೈನ್ ಒಡೆದು ಕಲುಷಿತ ನೀರು ರಸ್ತೆ ಮೇಲೆ
ಹರಿಯುತ್ತಿರುವುದರಿಂದ ಸ್ಥಳೀಯರು ಕೆಲ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಮಧ್ಯ ಭಾಗದಲ್ಲಿರುವ ಸೋಮವಾರ ಪೇಟೆಯಲ್ಲಿ ಮೂರು ದೇವಸ್ಥಾನಗಳ ನಡುವೆ ಒಳಚರಂಡಿ ಇದ್ದು, ಇದರ ಪೈಪ್ಲೈನ್ ಒಡೆದು ಹೋಗಿದ್ದರಿಂದ ಚರಂಡಿ ನೀರೆಲ್ಲ ರಸ್ತೆ ಮೇಲೆ ಹರಿಯುತ್ತಿದೆ. ಇಲ್ಲಿ ನಡೆದುಕೊಂಡು ಹೋಗುವುದು ಸ್ಥಳೀಯರಿಗೆ ಕಷ್ಟದ ಕೆಲಸವಾಗಿದೆ.
ಪೈಪ್ಲೈನ್ ಒಡೆದು ಗಜೀಲು ರಸ್ತೆಗೆ ಹರಿಯುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮೂಗು
ಮುಚ್ಚಿಕೊಂಡು ಹೋಗುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಮಹಾನಗರ ಪಾಲಿಕೆ ಆರೋಗ್ಯ ವಿಭಾಗಕ್ಕೆ ಮನವಿ ಸಲ್ಲಿಸಿದರೂ ಯಾರೂ ಇತ್ತ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ನಿತ್ಯ ಈ ಮೂರೂ ದೇವಸ್ಥಾನಗಳಿಗೆ ಬರಬೇಕಾದರೆ ಚರಂಡಿ ನೀರಿನಲ್ಲಿಯೇ ನಡೆದುಕೊಂಡು ಬರುವಂತಾಗಿದೆ. ವಾಹನಗಳು
ಓಡಾಡುತ್ತಿರುವುದರಿಂದ ದೇವಸ್ಥಾನದ ಗೋಡೆಗಳ ಮೇಲೂ ಈ ಗಲೀಜು ನೀರು ಸಿಡಿಯುತ್ತಿದೆ. ಕೂಡಲೇ ಕೂಡಲೇ ಮಹಾನಗರ
ಪಾಲಿಕೆ ಅ ಧಿಕಾರಿಗಳು ಇತ್ತ ಗಮನಹರಿಸಿ ಒಳಚರಂಡಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸೋಮವಾರ ಪೇಟೆ ಸುತ್ತಲಿನ ಜನರಿಗೆ ಈ ಕಿರಿಕಿರಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ನಿತ್ಯ ತೊಂದರೆ ಪಡುವಂತಾಗಿದೆ. ಮಕ್ಕಳು, ಮಹಿಳೆಯರು ಓಡಾಡುವುದೇ ಕಷ್ಟಕರವಾಗಿದೆ. ಪಾಲಿಕೆ ಅಧಿಕಾರಿಗಳಾಗಲೀ ಅಥವಾ ಜನಪ್ರತಿನಿಧಿಗಳಾಗಲೀ ಇತ್ತ ನಿರ್ಲಕ್ಷವಹಿಸಿದ್ದಾರೆ ಎಂದು ದೂರಿದರು.
ಮಹಾನಗರ ಪಾಲಿಕೆ ಚುನಾವಣೆ ಬಂದಾಗ ಮಾತ್ರ ವೋಟ್ ಕೇಳಲು ಅಭ್ಯರ್ಥಿಗಳು ಬರುತ್ತಾರೆ. ಆದರೆ ನಂತರದ ದಿನಗಳಲ್ಲಿ ಇತ್ತ ಯಾರೂ ಗಮನ ಹರಿಸುವುದಿಲ್ಲ. ಪಾಲಿಕೆಯವರಂತೂ ತಮ್ಮ ಕೆಲಸ ಮಾಡಿ ಹೋಗುತ್ತಾರೆ. ಏನಾದರೂ ಸಮಸ್ಯೆಯಾದರೆ ಕೇಳಲು ಹೋದವರಿಗೆ ಭರವಸೆ ನೀಡಿ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬೆಳಗಾವಿಯನ್ನು ಸ್ಮಾರ್ಟ್ ಸಿಟಿಯನ್ನಾಗಿ ಮಾಡುತ್ತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇಂಥ ಗಲೀಜು ನೀರು ಕಾಣಿಸುವುದಿಲ್ಲ. ಎಲ್ಲಿ ನೋಡಿದರಲ್ಲಿ ಚರಂಡಿ ನೀರು ನಿಂತಿದ್ದರಿಂದ ಸೊಳ್ಳೆ, ಕೀಟಗಳ ಹಾವಳಿಯೂ ಹೆಚ್ಚಾಗಿದೆ. ಇದರು ಜನರ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಪೈಪ್ಲೈನ್ ದುರಸ್ತಿ ಮಾಡಬೇಕು. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ರಸ್ತೆ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಳಚರಂಡಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ