ಸ್ವಂತ ಖರ್ಚಿನಿಂದ ಪೈಪ್ಲೈನ್ ವ್ಯವಸ್ಥೆ : ಸಮಸ್ಯೆಗೆ ಸ್ಪಂದಿಸಿದ ಪುರಸಭೆ ಸದಸ್ಯ
Team Udayavani, Jan 9, 2021, 12:34 PM IST
ಕುಣಿಗಲ್: ಅಧಿಕಾರಿಗಳ ಅಸಹಕಾರ, ಜನರ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದನ್ನು ಸಮಸ್ಯೆ ಅರಿತ ಪುರಸಭಾ ಸದಸ್ಯ ಆನಂದ್ಕುಮಾರ್ ತಮ್ಮ ಸ್ವತಂ ಖರ್ಚಿನಲ್ಲಿ ಪೈಪ್ಲೈನ್ ಕಾಮಗಾರಿ ಮಾಡಿಸಿ ನಾಗರಿಕರ ಕುಡಿವ ನೀರಿನ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಪಟ್ಟಣದ 20ನೇ ವಾರ್ಡ್ನ ಕೆಆರ್ಎಸ್ ಆಗ್ರಹಾರದ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಿಂದ ಐಡಿಬಿಐ ಬ್ಯಾಂಕ್ ಬಿಎಂರಸ್ತೆ ವರೆಗೆ ಪೈಪ್ಲೈನ್ ಹಾಳಾಗಿ ಈ ಭಾಗದ ಜನರ ಕುಡಿಯುವ ನೀರಿಗೆ ತೀವ್ರ ತೊಂದರೆ ಉಂಟಾಗಿತ್ತು. ಈ ಸಂಬಂಧ ಸ್ಥಳೀಯರು ಹಲವು ಭಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ. ಸದಸ್ಯ ಆನಂದ್ಕುಮಾರ್ ತಮ್ಮ ಸ್ವಂತ ಹಣ 18 ಸಾವಿರ ರೂ ವಿನಿಯೋಗಿಸಿ ಪೈಪ್ ಲೈನ್ ದುರಸ್ತಿ ಕಾಮಗಾರಿ ಮಾಡಿಸಿ ಈ ಭಾಗದ ಜನರ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಜನರ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ:ಕ್ಷುಲ್ಲಕ ಕಾರಣಕ್ಕೆ ತಂದೆ ಮಗನ ಕೊಲೆ : ಪೊಲೀಸರಿಂದ ಮೂವರು ಆರೋಪಿಗಳ ಸೆರೆ
ಈ ಕುರಿತು ಆನಂದ್ಕುಮಾರ್ ಪ್ರತಿಕ್ರಿಯಿಸಿ, ಪೈಪ್ಲೈನ್ ಹಾಳಾಗಿ ಹಲವು ತಿಂಗಳು ಕಳೆದಿದೆ, ಇದರ ದುರಸ್ತಿ ಮಾಡಿ
ಸಾರ್ವಜನಿಕರ ಕುಡಿವ ನೀರಿನ ವ್ಯವಸ್ಥೆ ಮಾಡುವಂತೆ ಪುರಸಭಾ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರ ಬಗ್ಗೆ ಅಧಿಕಾರಿಗಳು ಬೇಜವಾಬ್ದಾರಿ ತಾಳಿದ ಪರಿಣಾಮ ಜನರು ನೀರಿಗಾಗಿ ಪರದಾಡಿದರು. ಕೊನೆಗೆ ನನ್ನ ಸ್ವಂತ ಖರ್ಚಿನಿಂದ ಸುಮಾರು 120 ಅಡಿಗೂ ಅಧಿಕ ಪೈಪ್ ಲೈನ್ ಕಾಮಗಾರಿ ಮಾಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್