ಕುಡಿವ ನೀರಿನ ಸಮಸ್ಯೆ ಶೀಘ್ರ ಇತ್ಯರ್ಥ : ಸಮರೋಪಾದಿಯಲ್ಲಿ ನಡೆಯುವ ಕೆಲಸಕ್ಕೆ ಮೆಚ್ಚುಗೆ
Team Udayavani, Jan 30, 2022, 6:14 PM IST
ಸುರಪುರ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ರಾಜುಗೌಡ ಶನಿವಾರ ನಗರಸಭೆ ವ್ಯಾಪ್ತಿಯ ರಂಗಂಪೇಟೆಗೆ ಭೇಟಿ ನೀಡಿ, ಮಂಡಳಿಯಿಂದ ನಡೆದಿರುವ ಕುಡಿಯವ ನೀರಿನ ಪೈಪ್ಲೈನ್ ಕಾಮಗಾರಿ ಪರಿಶೀಲಿಸಿದರು.
ನಿರ್ಮಾಣ ಹಂತದಲ್ಲಿರುವ 7 ಟ್ಯಾಂಕ್ಗಳ ಮತ್ತು ಪೈಪ್ಲೈನ್ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಇದು ನನ್ನ ಬಹುದಿನ ಕನಸಿನ ಯೋಜನೆ ಅನುಷ್ಠಾನಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. ಕಾಮಗಾರಿ ಕಳಪೆ ಆಗದಂತೆ ಜಾಗೃತಿ ವಹಿಸಿ, ನೀವು ಮಾಡಿದ ಕೆಲಸ ಬಹುಕಾಲ ಬಾಳಿಕೆ ಬರಬೇಕು. ಜನಮಾನಸದಲ್ಲಿ ಸ್ಥರವಾಗಿ ಉಳಿಯಬೇಕು ಎಂದು ಸ್ಥಳದಲ್ಲಿದ್ದ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜನಿಯರ್ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ನಂತರ ರಂಗಂಪೇಟೆ-ತಿಮ್ಮಾಪುರದ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲಿಸಿದರು. ಅಗಲೀಕರಣದಲ್ಲಿ ಮನೆ ಕಳೆದುಕೊಂಡಿರುವ ಅನೇಕರು ಶಾಸಕರನ್ನು ಭೇಟಿ ಮಾಡಿ, ಇರುವ ಮನೆ
ಕಳೆದುಕೊಂಡು ಬೀದಿಗೆ ಬಿದ್ದಿದ್ದೇವೆ. ದಯವಿಟ್ಟು ಮನೆ ಒದಗಿಸಿಕೊಡುವಂತೆ ಮನವಿ ಮಾಡಿದರು. ಮನೆ ಕಳೆದುಕೊಂಡ ಬಡವರ ಕೈ ಬಿಡುವುದಿಲ್ಲ. ಕೊಳಚೆ ನಿರ್ಮೂಲನಾ ನಿಗಮದಿಂದ
ಮನೆಗಳು ಮಂಜೂರಿಯಾಗಿವೆ. ಮನೆ ಕಳೆದುಕೊಂಡವರಿಗೆ ಮತ್ತು ವಸತಿ ರಹಿತ ಅರ್ಹ ಬಡವರಿಗೆ ಮನೆ ಕಲ್ಪಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು. ಮನೆ ಕಳೆದುಕೊಂಡವರ
ಪಟ್ಟಿ ಮಾಡಿ ಕೊಡುವಂತೆ ಸ್ಥಳದಲ್ಲಿದ್ದ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಅವರಿಗೆ ಸೂಚಿಸಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ನಿರಂತರ ನೀರು ಕೊಡುವುದಾಗಿ ಭರವಸೆ ನೀಡಿದ್ದೆ. ನುಡಿದಂತೆ ನಡೆದುಕೊಂಡಿದ್ದೇನೆ ಕುಡಿಯುವ ನೀರಿನ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಯಲಿದ್ದು, ದಿನದ 24 ಗಂಟೆಯೂ ನೀರು ಸಿಗಲಿದೆ ಎಂದು ತಿಳಿಸಿದರು. ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,
ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಎಇ ಶಂಕರಗೌಡ, ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ, ಮುಖಂಡರಾದ ರಾಜಾ ಹನುಮಪ್ಪ ನಾಯಕ (ತಾತಾ),
ವೇಣುಗೋಪಾಲನಾಯಕ ಜೇವರ್ಗಿ, ಭೀಮಾಶಂಕರ ಬಿಲ್ಲವ್, ರಾಜು ಪುಲ್ಸೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ