ಕುಡಿವ ನೀರಿನ ಘಟಕ: ನಿಯಮ ರೂಪಿಸಲು ತೀರ್ಮಾನ


Team Udayavani, Dec 7, 2019, 5:39 AM IST

sw-47

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳಲ್ಲಿ ಶೇ.50 ಕ್ಕೂ ಹೆಚ್ಚು ದುರಸ್ತಿ ಸೇರಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಿರ್ವಹಣೆ ವಿಚಾರದಲ್ಲಿಯೂ ಸಾಕಷ್ಟು ಗೊಂದಲಗಳಿರುವ
ಕಾರಣ ಇದಕ್ಕಾಗಿಯೇ ನೀತಿ ರೂಪದ ನಿಯಮಾವಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌
ಇಲಾಖೆ ಮುಂದಾಗಿದೆ.

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರು ಘಟಕಗಳು, ಅವುಗಳ ಸ್ಥಿತಿಗತಿ, ನಿರ್ವಹಣೆ, ವಾರ್ಷಿಕ ವೆಚ್ಚ, ಘಟಕ ಅಳವಡಿಕೆ ವೆಚ್ಚ, ನಿತ್ಯ ನೀರು ಪಡೆಯುತ್ತಿರುವವರ ಸಂಖ್ಯೆ ಎಲ್ಲದರ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ರಾಜ್ಯದ ಎಲ್ಲ ಗ್ರಾಪಂ, ತಾಪಂ, ಜಿಪಂಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆ ಪತ್ರ ಬರೆದು ಸೂಚಿಸಿದೆ.

ನೂತನ ನಿಯಮಾವಳಿ ರಚನೆ ಸಂಬಂಧ ಮುಂದಿನ ಜನವರಿಯಲ್ಲಿ ನಡೆಯಲಿರುವ ರಾಜ್ಯ
ವಿಧಾನಮಂಡಲದ ಅಧಿವೇಶನದೊಳಗೆ ಕರಡು ಸಿದ್ಧಪಡಿಸಲು ಇಲಾಖೆಗೆ ಸೂಚಿಸಲಾಗಿದೆ ಎಂದು
ವಿಶ್ವಸನೀಯ ಮೂಲಗಳು ತಿಳಿಸಿವೆ. ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ ಹೊಣೆ ಆಯಾ ಗ್ರಾಪಂಗಳಿಗೆ ನೀಡುವುದು. ಆದಷ್ಟೂ ಕಡಿಮೆ ವೆಚ್ಚದಲ್ಲಿ ಘಟಕ ಅನುಷ್ಠಾನ ಮಾಡುವುದು. ನಿರುದ್ಯೋಗಿ ಯುವಕರು ಅಥವಾ ಯುವ ಸಂಘಗಳು, ಮಹಿಳಾ ಸ್ವ ಸಹಾಯ ಸಂಘಗಳಿಗೆ ನಿರ್ವಹಣೆ ಹೊಣೆಗಾರಿಕೆ ನೀಡುವುದು. ನಿತ್ಯ ಘಟಕ ಬಳಕೆ ಮತ್ತಿತರ ಮಾಹಿತಿ ಆನ್‌ಲೈನ್‌ ಮೂಲಕ ಇಲಾಖೆಯ ಕೇಂದ್ರ ಕಚೇರಿಗೆ ರವಾನೆಯಾಗುವುದು ನೂತನ ನಿಯಮಾವಳಿಯಲ್ಲಿ ಸೇರಲಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಗ್ರಾಪಂಗೆ ಒಂದರಂತೆ 6,021 ಶುದ್ಧ ಕುಡಿಯುವ ನೀರು ಘಟಕ ಅಳವಡಿಸಲು ಮೊದಲಿಗೆ
ತೀರ್ಮಾನಿಸಲಾಗಿತ್ತು. ನಂತರ ಗ್ರಾಪಂಗೆ ಎರಡು ಘಟಕ ಅಳವಡಿಕೆ ನಿರ್ಧಾರ ಮಾಡಲಾಯಿತು. ತದ
ನಂತರ ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರು ಘಟಕ ಅಳವಡಿಕೆಯಾಗಬೇಕೆಂಬ ತೀರ್ಮಾನದಡಿ 29 ಸಾವಿರ ಗ್ರಾಮಗಳಿಗೆ ಯೋಜನೆ ರೂಪಿಸಲಾಯಿತು. ಪ್ರಸ್ತುತ 17 ಸಾವಿರ ಶುದಟಛಿ ಕುಡಿಯುವ ನೀರು ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಶೇ.50ಕ್ಕೂ ಹೆಚ್ಚು ಘಟಕಗಳು ದುರಸ್ತಿಗೊಳಪಟ್ಟಿವೆ.

ಶುದ್ಧ ಕುಡಿಯುವ ನೀರು: ಈ ಮಧ್ಯೆ, ಶುದ್ಧ ಕುಡಿಯುವ ನೀರು ಘಟಕ ಅಳವಡಿಕೆಯಲ್ಲಿ ಭ್ರಷ್ಟಾಚಾರ ಆಗಿದೆ. ಮೂರ್‍ನಾಲ್ಕು ಲಕ್ಷ ರೂ.ಗಳ ವೆಚ್ಚದಲ್ಲಿ ಅಳವಡಿಸಬಹುದಾದ ಘಟಕಗಳಿಗೆ ಹದಿನೈದು ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಘಟಕಗಳ ನಿರ್ವಹಣೆಗಾಗಿ ಖಾಸಗಿ ಏಜೆನ್ಸಿಯೊಂದಕ್ಕೆ ವಹಿಸಲಾಗಿ ಆ ಸಂಸ್ಥೆಯೂ ಸರಿಯಾಗಿ ಕಾರ್ಯನಿರ್ವಹಿಸಲಿಲ್ಲ ಎಂಬ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲೂ ಪ್ರಸ್ತಾಪವಾಗಿತ್ತು. ಹೀಗಾಗಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಎಲ್ಲ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಬೆಳಗಾವಿಯಲ್ಲಿ ನಡೆಸಿ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಕುರಿತು ಸಮಗ್ರವಾಗಿ ಚರ್ಚಿಸಿ ಸೂಕ್ತ ನಿಯಮಾವಳಿ ರೂಪಿಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗಿದೆ.

ಹಿಂದಿನ ಕಾಂಗ್ರೆಸ್‌ ಹಾಗೂ ಜೆಡಿಎಸ್‌- ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರು ಘಟಕಗಳು ಉದ್ದೇಶಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಶೇ.50ರಷ್ಟು ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ, ಇದಕ್ಕೆ ಸೂಕ್ತ ನಿಯಮಾವಳಿ ಅಗತ್ಯ. ಘಟಕಗಳ ಕಾರ್ಯನಿರ್ವಹಣೆಗಳ ಬಗ್ಗೆ ಈಗಾಗಲೇ ಎಲ್ಲ ಗ್ರಾಪಂ, ತಾಪಂ, ಜಿಪಂಗಳಿಗೆ ಪತ್ರ ಬರೆದು ಮಾಹಿತಿ ಪಡೆಯಲಾಗಿದೆ.
 ಕೆ.ಎಸ್‌. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ

● ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.