ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕ ಸಿಂಪಡಣೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಚಾಲನೆ


Team Udayavani, May 29, 2021, 5:45 PM IST

gfdhsjak

ಬೆಂಗಳೂರು : ಬೆಂಗಳೂರು ನಗರದಲ್ಲಿ ಕೋವಿಡ್‌ ಸಾಂಕ್ರಾಮಿಕ ರೋಗವನ್ನು ಹತೋಟಿಗೆ ತರುವ ಉದ್ದೇಶದಿಂದ ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕವನ್ನು ಸಿಂಪಡಿಸುವ ಏರಿಯಲ್‌ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಯ ಪ್ರಾಯೋಗಿಕ ಕಾರ್ಯಾಚರಣೆ ಯೋಜನೆಗೆ ಇಂದು ಕಂದಾಯ ಸಚಿವರಾದ ಆರ್‌ ಅಶೋಕ್‌ ಚಾಲನೆ ನೀಡಿದರು.

ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ ನಿಂದ ಚಾಲನೆ ನೀಡಲಾದ ಈ ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಶ್ರೀ ರಾಕೇಶ್‌ ಸಿಂಗ್‌, ಬಿಡಿಎ ಅಧ್ಯಕ್ಷ ಎಸ್‌ ಆರ್‌ ವಿಶ್ವನಾಥ್‌, ಕ್ಯಾಪ್ಟನ್‌ ನಾಗೇಶ್‌ ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಂದಾಯ ಸಚಿವ ಆರ್‌ ಅಶೋಕ್‌, ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕೆ ರಾಜ್ಯ ಸರಕಾರದ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೇ ಮೊದಲ ಬಾರಿಗೆ ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕವನ್ನು ವಿಮಾನದ ಮೂಲಕ ಸಿಂಡಪಣೆ ಮಾಡುವ ಕಾರ್ಯಾಚರಣೆಯನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಏರಿಯಲ್‌ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆ ಮೂರು ದಿನಗಳ ಕಾಲ ಬೆಂಗಳೂರು ನಗರದ ಜನನಿಬಿಡ ಪ್ರದೇಶಗಳಲ್ಲಿ ವಿಮಾನದ ಮೂಲಕ ಸಿಂಪಡಣೆಯನ್ನು ಮಾಡಲಿದೆ ಎಂದರು.

ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ವಿಮಾನದ ಮೂಲಕ ಜೈವಿಕ ಸೋಂಕು ನಿವಾರಕವನ್ನು ಸಿಂಪಡನೆ ಮಾಡುವ ಕಾರ್ಯ ಸಫಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರದೇಶಗಳಲ್ಲಿ ಈ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು. ಸೋಮುವಾರದಿಂದ ನಗರದ ಶಿವಾಜಿನಗರ, ಕೆ ಆರ್‌ ಮಾರುಕಟ್ಟೆ ಪ್ರದೇಶಗಳಲ್ಲಿ ಸಿಂಪಡನೆ ಎಂದು ಹೇಳಿದರು.

ಏರಿಯಲ್‌ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆಯ ಮುಖ್ಯಸ್ಥರಾದ ಕ್ಯಾಪ್ಟನ್‌ ಮುರಳಿ ರಾಮಕೃಷ್ಣನ್‌ ಮಾತನಾಡಿ, ಅಮೇರಿಕಾ ಹಾಗೂ ಆಫ್ರಿಕಾ ದೇಶಗಳಲ್ಲಿ ವೈಮಾನಿಕ ಜೈವಿಕ ಸೋಂಕು ನಿವಾರಣೆ ಸಿಂಪಡಣಾ ಕಾರ್ಯದಲ್ಲಿ ವಿಶೇಷ ಪರಿಣಿತಿಯನ್ನ ಹೊಂದಿರುವ ತಂಡ ಬೆಂಗಳೂರು ನಗರದಲ್ಲಿ ಈ ಕಾರ್ಯಚರಣೆಯನ್ನು ಪ್ರಾಯೋಗಿಕವಾಗಿ ನಡೆಸಲಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ವೈಮಾನಿಕವಾಗಿ ಜೈವಿಕ ಸೋಂಕು ನಿವಾರಣೆ ಸಿಂಪಡಣಾ ಕಾರ್ಯವನ್ನು ನಡೆಸಲಾಗುವುದು. ಗಾಳಿಯಲ್ಲಿರುವ ಕೋವಿಡ್‌ ವೈರಾಣು ವನ್ನು ಸಾಯಿಸುಷ್ಟು ಸಮಯ ಗಾಳಿಯಲ್ಲಿ ಸೋಂಕು ನಿವಾರಣ ದ್ರಾವಣ ಸಿಂಪಡಿಸುವಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಈ ಸಂಸ್ಥೆ ಸಿದ್ದಗೊಳಿಸಿದೆ. ಸೂಕ್ಷ್ಮ ಮೈಕ್ರಾನ್‌ ಕಣಗಳ ಸಾಂದ್ರತೆಯಲ್ಲಿರುವ ಜೈವಿಕ ಸೋಂಕು ನಿವಾರಣಾ ದ್ರಾವಣ ಗಾಳಿಯಲ್ಲಿ ತೇಲಾಡುತ್ತಿರುವ ಬ್ಯಾಕ್ಟೀರಿಯಾ ಹಾಗೂ ವೈರಾಣುಗಳನ್ನು ಕೊಲ್ಲಲಿವೆ.

ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ಈ ವೈಮಾನಿಕ ಸಿಂಪಡಣೆಯನ್ನು ಮಾಡಲು ಸರಕಾರದ ಸಂಸ್ಥೆಗಳಿಂದ ಅಗತ್ಯ ಅನುಮತಿಗಳನ್ನು ಏರಿಯಲ್‌ವರ್ಕ್ಸ್‌ ಏರೋ ಎಲ್‌ಎಲ್‌ಪಿ ಸಂಸ್ಥೆ ಪಡೆದುಕೊಂಡಿದೆ ಎಂದು ಹೇಳಿದರು.
300 ಲಿಟರ್‌ಗಳಷ್ಟು ಸೋಂಕು ನಿವಾರಣಾ ದ್ರಾವಣವನ್ನು ಹೊತ್ತೊಯ್ಯಬಲ್ಲ ಅಮೇರಿಕನ್‌ ಚಾಂಫಿಯನ್‌ ಸ್ಕೌಟ್‌ ವಿಮಾನ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿ ಒಂದು ಗಂಟೆಯಲ್ಲಿ 300 ಹೆಕ್ಟೇರ್‌ನಷ್ಟು ಪ್ರದೇಶದಲ್ಲಿ ಸಿಂಪಡಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಕಾರ್ಯಕ್ಕಾಗಿ ಅದು ಯುಎಲ್‌ವಿ (ULV) ಸ್ಪ್ರೇಯರ್‌ ಮೂಲಕ ಸಿಪಿ ನೋಜಲ್‌ (CP Nozzles) ಗಳನ್ನು ಬಳಸಿ 100 (Below 100 Microns) ಮೈಕ್ರಾನ್‌ಗಳಿಗಿಂತಲೂ ಕಡಿಮೆ ಪ್ರಮಾಣದಲ್ಲಿ ಸಿಂಪಡಣೆ ಮಾಡಲಿದೆ ಎಂದರು.

ಈ ಸಿಂಪಡಣಾ ಕಾರ್ಯದಲ್ಲಿ ಎರಡು ರೀತಿಯ ಜೈವಿಕ ಸೋಂಕು ನಿವಾರಕ ದ್ರಾವಣಗಳನ್ನು ಬಳಸಲಾಗುವುದು

1. ಏರ್‌ಲೆನ್ಸ್‌ ಮೈನಸ್‌ ಕರೋನಾ (Airlens Minus Corona): ಇದು ರಾಸಾಯನಿಕ ರಹಿತ ಮಾನವ ಸ್ನೇಹೀ ಹಾಗೂ ಪರಿಣಾಮಕಾರಿಯಾದ ಸ್ಯಾನಿಟೈಸೇಷನ್‌ ಸಿಸ್ಟಮ್‌ ಆಗಿದೆ. ಕೇವಲ ನಲ್ಲಿಯ ನೀರು ಮತ್ತು ವಿದ್ಯುತ್‌ಶಕ್ತಿಯನ್ನು ಬಳಸಿಕೊಂಡು ತಯಾರಿಸಲಾಗುವ ಸೋಂಕು ನಿವಾರಣಾ ದ್ರಾವಣವನ್ನು ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಆಸ್ಪತ್ರೆಗಳು ಮತ್ತು ಮನೆಗಳಲ್ಲಿ ಬಳಸಬಹುದಾಗಿದೆ. ಪೆರ್‌ಸಾಪಿಎನ್‌ ಇನ್ನೊವೇಷನ್ಸ್‌ (PerSapien Innovations) ಸಂಸ್ಥೆಯಿಂದ ಕಂಡುಹಿಡಿಯಲಾಗಿರುವ ಈ ನೂತನ ತಂತ್ರಜ್ಞಾನವನ್ನು, ಸ್ಟಾನ್‌ಫೋರ್ಡ್‌ ಯೂನಿವರ್ಸಿಟಿ, ಐಐಟಿ ಮತ್ತು ಎಐಐಎಂಎಸ್‌ (IITS & AIIMS) ನಿಂದ ಇಂಜಿನೀಯರ್‌ಗಳು ಮತ್ತು ವಿಜ್ಞಾನಿಗಳು ತಂಡ ಪರೀಕ್ಷಿಸಿದ್ದು ಐಸಿಎಂಆರ್‌ (ICMR) ನಿಂದ ಧೃಢೀಕೃತಗೊಳಿಸಲ್ಪಟ್ಟಿದೆ. ಈ ನೂತನ ತಂತ್ರಜ್ಞಾನ ವೈರಾಣುಗಳು, ಬ್ಯಾಕ್ಟೀರಿಯಾ ಮತ್ತು ಇನ್ನಿತರ ಪ್ಯಾಥೋಜೀನ್ಸ್‌ಗಳ ವಿರುದ್ದ ಬಹಳ ಸುರಕ್ಷಿತ, ಒಳ್ಳೆಯ ಮತ್ತು ಅತ್ಯಂತ ಪರಿಣಾಮಕಾರಿಯಾಗಿದೆ.

2. ಶುಗಾರಧಾನ ಜೈವಿಕ ಆಂಟಿಮೈಕ್ರೋಬಿಯಲ್‌ ಕಾನ್ಸನ್‌ಟ್ರೇಟ್‌(Sugaradhana Organic Antimicrobial concentrate): ಈ ಸೋಂಕು ನಿವಾರಕ ದ್ರಾವಣವನ್ನು ನಮ್ಮ ಪ್ರಾಚೀನ ಆರೋಗ್ಯ ಪದ್ದತಿಯಾದ ಆಯುರ್ವೇದದ ಅಂಶಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ. ಇದು ಲ್ಯಾಬ್‌ಗಳಲ್ಲಿ ಮತ್ತು ಹೊರಾಂಗಣಗಳಲ್ಲಿ ಬ್ಯಾಕ್ಟೀರಿಯಾ, ಫಂಗಸ್‌ ಮತ್ತು ವೈರಾಣುಗಳ ವಿರುದ್ದ ಪರಿಣಾಕಾರಿಯಾದ ಫಲಿತಾಂಶ ನೀಡುತ್ತದೆ. ಈ ಜೈವಿಕ ಸೋಂಕು ನಿವಾರಣಾ ದ್ರಾವಣ ಚರ್ಮದ ಮೇಲೇ ಯಾವುದೇ ದುಷ್ಪರಿಣಾಮ ಬೀರದ ಶೇಕಡಾ 100 ರಷ್ಟು ಸುರಕ್ಷಿತವಾದದ್ದು. ಇದು ಗಾಳಿಯಲ್ಲಿ ಮಾಲಿನ್ಯ ಹರಡುವುದನ್ನ ಕಡಿಮೆ ಮಾಡುತ್ತದೆ. ಈ ದ್ರಾವಣವನ್ನು ಸಿಂಪಡಣೆ ಮಾಡಿರುವ ಪ್ರದೇಶದಲ್ಲಿ ಕರೋನಾ ವೈರಾಣುವನ್ನು ಪರಿಣಾಮಕಾರಿಯಾಗಿ ನಿವಾರಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಈ ದ್ರಾವಣವನ್ನು ಡಾ ಕಾರ್ತಿಕ್‌ ನಾರಾಯಣನ್‌ ಅವರು ನಿರ್ಮಿಸಿದ್ದಾರೆ.

ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ತಾಂತ್ರಿಕ ತಂಡ ಈ ಪ್ರಾಯೋಗಿಕ ಯೋಜನೆಯ ಕಾರ್ಯದ ಮೇಲುಸ್ತವಾರಿ ವಹಿಸಲಿದೆ. ಮೂರು ದಿನಗಳ ಪ್ರಾಯೋಗಿಕ ಕಾರ್ಯಾಚರಣೆಯ ನಂತರ ಅದರಿಂದಾದ ಪ್ರಯೋಜನ ಹಾಗೂ ಪರಿಮಾಣಗಳನ್ನು ತಿಳಿಸಲಿದೆ ಎಂದು ಏರಿಯಲ್‌ ವರ್ಕ್ಸ್‌ ಏರೋ ಎಲ್‌ಎಲ್‌ಪಿಯ ಮುಖ್ಯಸ್ಥರಾದ ಮುರಳಿ ರಾಮಕೃಷ್ಣ ತಿಳಿಸಿದ್ದಾರೆ. ಪ್ರಾಯೋಗಿಕ ಕಾರ್ಯಾಚರಣೆಯ ಸಂಧರ್ಭದಲ್ಲಿ ಪ್ರಾತ್ಯಕ್ಷಿಕೆಯನ್ನು ತೋರಿಸಲಾಯಿತು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.