ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ


Team Udayavani, Jan 23, 2022, 5:25 AM IST

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹೆಚ್ಚಿನ ಮಂದಿಯಲ್ಲಿ ಸೌಮ್ಯ ಗುಣಲಕ್ಷಣ ಕಂಡುಬರುತ್ತಿದೆ. ಕೋವಿಡ್‌ ದೃಢಪಟ್ಟು ಗೃಹ ನಿಗಾವಣೆಯಲ್ಲಿರುವವರಿಗೆ ಔಷಧಗಳ ಪ್ರತ್ಯೇಕ ಕಿಟ್‌ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಪ್ರಸ್ತುತ ಮೂರನೇ ಅಲೆಯಲ್ಲಿ ಸೋಂಕುಪೀಡಿತರಲ್ಲಿ ಹೆಚ್ಚಿನವರಿಗೆ ಸೌಮ್ಯ ಲಕ್ಷಣಗಳಷ್ಟೇ ಕಂಡುಬರುತ್ತಿವೆ. ಹೆಚ್ಚಿನವರಿಗೆ ಆಸ್ಪತ್ರೆ ದಾಖಲಾತಿಯ ಅಗತ್ಯ ಬೀಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಂಥವರನ್ನು ಹೋಂ ಐಸೋಲೇಶನ್‌ನಲ್ಲಿ ಇರಿಸಲು ರಾಜ್ಯ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. ಅವರಿಗೆ ಮನೆಯಲ್ಲಿಯೇ ಆರೈಕೆ ಪಡೆದುಕೊಳ್ಳಲು ಔಷಧಗಳುಳ್ಳ ಕಿಟ್‌ ವಿತರಿಸಲು ಸೂಚನೆ ನೀಡಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪತ್ತೆಯಾದ ಶೇ. 80ರಷ್ಟು ಸೋಂಕುಪೀಡಿತರು ಹೋಂ ಐಸೋಲೇಶನ್‌ನಲ್ಲಿ ಇದ್ದಾರೆ. ಅವರಿಗೆ ಆರೋಗ್ಯ ಇಲಾಖೆಯಿಂದ ಸುಮಾರು 5 ಸಾವಿರ ಕಿಟ್‌ ನೀಡಲು ನಿರ್ಧರಿಸಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆಯಿಂದ ತಾಲೂಕು ಆರೋಗ್ಯ ಇಲಾಖೆಗೆ ಕಿಟ್‌ ರವಾನಿಸಲಾಗಿದ್ದು, ಅಲ್ಲಿಂದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸೋಂಕುಪೀಡಿತರ ಮನೆಗೆ ತಲುಪಿಸಲಾಗುತ್ತಿದೆ.

ಕಿಟ್‌ನಲ್ಲಿ ಏನೇನಿದೆ?
ಹೋಂ ಐಸೋಲೇಶನ್‌ನಲ್ಲಿ ಇದ್ದವರಿಗೆ ಈ ಹಿಂದೆ ಮಾತ್ರೆಗಳನ್ನು ಕೈಯಲ್ಲಿ ಕೊಡಲಾಗುತ್ತಿತ್ತು. ಆದರೆ ಈಗ ಕಿಟ್‌ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಮೂರು ಪದರಗಳುಳ್ಳ ಹತ್ತು ಮಾಸ್ಕ್ಗಳು, ಸ್ಯಾನಿಟೈಸರ್‌ ಬಾಟಲ್‌, ಕೆಮ್ಮಿನ ಸಿರಪ್‌ ಬಾಟಲ್‌, ಪ್ಯಾರಸಿಟಮಾಲ್‌ ಮಾತ್ರೆ, ಶೀತದ ಮಾತ್ರೆ, ವಿಟಮಿನ್‌-ಸಿ ಮಾತ್ರೆ ಮತ್ತು ಔಷಧ ಸೇವನೆ ಹೇಗೆ ಎಂಬ ವಿವರಗಳಿರುವ ಕೈಪಿಡಿ ಇರುತ್ತದೆ.

ಸೌಮ್ಯ ಲಕ್ಷಣಗಳಿದ್ದು, ಹೋಂ ಐಸೋಲೇಶನ್‌ಗೆ ಒಳಗಾಗುವ ಕೊರೊನಾ ಸೋಂಕುಪೀಡಿತರಿಗೆ ಆರೋಗ್ಯ ಇಲಾಖೆಯ ಮೂಲಕ ನೀಡುವ ಕಿಟ್‌ನಲ್ಲಿ ಒಟ್ಟು 5 ದಿನ ಉಪಯೋಗಿಸಬೇಕಾದ ಔಷಧ ಇರಲಿದೆ. ಜತೆಗೆ ಈ ಔಷಧಗಳನ್ನು ಹೇಗೆ ಉಪಯೋಗಿಸಬೇಕು ಎಂಬ ಸೂಚನೆಗಳು ಇರುವ ಕೈಪಿಡಿಯೂ ಇರುತ್ತದೆ.
ಡಾ| ಕಿಶೋರ್‌ ಕುಮಾರ್‌ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.