ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ


Team Udayavani, Jan 23, 2022, 5:25 AM IST

ದ.ಕ.: ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌: 5 ಸಾವಿರ ಕಿಟ್‌ ವಿತರಿಸಲು ಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹೆಚ್ಚಿನ ಮಂದಿಯಲ್ಲಿ ಸೌಮ್ಯ ಗುಣಲಕ್ಷಣ ಕಂಡುಬರುತ್ತಿದೆ. ಕೋವಿಡ್‌ ದೃಢಪಟ್ಟು ಗೃಹ ನಿಗಾವಣೆಯಲ್ಲಿರುವವರಿಗೆ ಔಷಧಗಳ ಪ್ರತ್ಯೇಕ ಕಿಟ್‌ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಪ್ರಸ್ತುತ ಮೂರನೇ ಅಲೆಯಲ್ಲಿ ಸೋಂಕುಪೀಡಿತರಲ್ಲಿ ಹೆಚ್ಚಿನವರಿಗೆ ಸೌಮ್ಯ ಲಕ್ಷಣಗಳಷ್ಟೇ ಕಂಡುಬರುತ್ತಿವೆ. ಹೆಚ್ಚಿನವರಿಗೆ ಆಸ್ಪತ್ರೆ ದಾಖಲಾತಿಯ ಅಗತ್ಯ ಬೀಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಂಥವರನ್ನು ಹೋಂ ಐಸೋಲೇಶನ್‌ನಲ್ಲಿ ಇರಿಸಲು ರಾಜ್ಯ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. ಅವರಿಗೆ ಮನೆಯಲ್ಲಿಯೇ ಆರೈಕೆ ಪಡೆದುಕೊಳ್ಳಲು ಔಷಧಗಳುಳ್ಳ ಕಿಟ್‌ ವಿತರಿಸಲು ಸೂಚನೆ ನೀಡಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪತ್ತೆಯಾದ ಶೇ. 80ರಷ್ಟು ಸೋಂಕುಪೀಡಿತರು ಹೋಂ ಐಸೋಲೇಶನ್‌ನಲ್ಲಿ ಇದ್ದಾರೆ. ಅವರಿಗೆ ಆರೋಗ್ಯ ಇಲಾಖೆಯಿಂದ ಸುಮಾರು 5 ಸಾವಿರ ಕಿಟ್‌ ನೀಡಲು ನಿರ್ಧರಿಸಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆಯಿಂದ ತಾಲೂಕು ಆರೋಗ್ಯ ಇಲಾಖೆಗೆ ಕಿಟ್‌ ರವಾನಿಸಲಾಗಿದ್ದು, ಅಲ್ಲಿಂದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸೋಂಕುಪೀಡಿತರ ಮನೆಗೆ ತಲುಪಿಸಲಾಗುತ್ತಿದೆ.

ಕಿಟ್‌ನಲ್ಲಿ ಏನೇನಿದೆ?
ಹೋಂ ಐಸೋಲೇಶನ್‌ನಲ್ಲಿ ಇದ್ದವರಿಗೆ ಈ ಹಿಂದೆ ಮಾತ್ರೆಗಳನ್ನು ಕೈಯಲ್ಲಿ ಕೊಡಲಾಗುತ್ತಿತ್ತು. ಆದರೆ ಈಗ ಕಿಟ್‌ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಮೂರು ಪದರಗಳುಳ್ಳ ಹತ್ತು ಮಾಸ್ಕ್ಗಳು, ಸ್ಯಾನಿಟೈಸರ್‌ ಬಾಟಲ್‌, ಕೆಮ್ಮಿನ ಸಿರಪ್‌ ಬಾಟಲ್‌, ಪ್ಯಾರಸಿಟಮಾಲ್‌ ಮಾತ್ರೆ, ಶೀತದ ಮಾತ್ರೆ, ವಿಟಮಿನ್‌-ಸಿ ಮಾತ್ರೆ ಮತ್ತು ಔಷಧ ಸೇವನೆ ಹೇಗೆ ಎಂಬ ವಿವರಗಳಿರುವ ಕೈಪಿಡಿ ಇರುತ್ತದೆ.

ಸೌಮ್ಯ ಲಕ್ಷಣಗಳಿದ್ದು, ಹೋಂ ಐಸೋಲೇಶನ್‌ಗೆ ಒಳಗಾಗುವ ಕೊರೊನಾ ಸೋಂಕುಪೀಡಿತರಿಗೆ ಆರೋಗ್ಯ ಇಲಾಖೆಯ ಮೂಲಕ ನೀಡುವ ಕಿಟ್‌ನಲ್ಲಿ ಒಟ್ಟು 5 ದಿನ ಉಪಯೋಗಿಸಬೇಕಾದ ಔಷಧ ಇರಲಿದೆ. ಜತೆಗೆ ಈ ಔಷಧಗಳನ್ನು ಹೇಗೆ ಉಪಯೋಗಿಸಬೇಕು ಎಂಬ ಸೂಚನೆಗಳು ಇರುವ ಕೈಪಿಡಿಯೂ ಇರುತ್ತದೆ.
ಡಾ| ಕಿಶೋರ್‌ ಕುಮಾರ್‌ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.