ವಿರೂಪಾಪೂರಗಡ್ಡಿ ಅಮಲು ಪದಾರ್ಥ ಮಾರಾಟ : ವ್ಯಕ್ತಿ ಬಂಧನ
Team Udayavani, Oct 28, 2019, 7:40 PM IST
ಗಂಗಾವತಿ: ತಾಲೂಕಿನ ವಿರೂಪಾಪೂರಗಡ್ಡಿ ಯಲ್ಲಿ ಪ್ರವಾಸಿಗರಿಗೆ ಮತ್ತು ಬರಿಸುವ ಸಮುದ್ರ ಬಾಳೆಬೀಜ ಹಾಗೂ ಗಾಂಜಾ ಮಾರುತ್ತಿದ್ದವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ವಿರೂಪಾಪೂರಗಡ್ಡಿಯ ನಿವಾಸಿ ಪಂಪಾಪತಿ ತಂ ಅರಳಪ್ಪ(35) ಎಂದು ಗುರುತಿಸಲಾಗಿದೆ. ಈತನಿಂದ ಪ್ರವಾಸಿಗರು ಮತ್ತು ಟೆಕ್ಕಿಗಳಿಗೆ ಮಾರಾಟ ಮಾಡಲು ಸಂಗ್ರಹಿಸಿದ್ದ 57 ಗ್ರಾಂ ಸಮುದ್ರ ಬಾಳೆ ಎಲೆ ಬೀಜ ಹಾಗೂ 172 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಎದುರು ಪಂಚನಾಮೆ ಮಾಡಿದ್ದಾರೆ.
ಡಿವೈಎಸ್ಪಿ ಡಾ.ಚಂದ್ರಶೇಖರ ಸಿಪಿಐ ಸುರೇಶ್ ತಳವಾರ ಪಿಎಸ್ಐ ಜೆ.ದೊಡ್ಡಪ್ಪ ದಾಳಿಯ ನೇತೃತ್ವ ವಹಿಸಿದ್ದರು.
ಆನೆಗೊಂದಿ ವಿರೂಪಾಪೂರಗಡ್ಡಿ ಸಾಣಾಪೂರ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮತ್ತು ಭರಿಸುವ ಸಮುದ್ರ ಬಾಳೆಬೀಜ ಮಾರಾಟ ದಂಧೆ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ವಿಸ್ತೃತ ವರದಿ ಪ್ರಕರಟವಾಗಿತ್ತು. ವಿದೇಶಿ ಪ್ರವಾಸಿಗರು ಹೆಚ್ಚಾಗಿ ಇಲ್ಲಿಗೆ ಬರುತ್ತಿರುವುದರಿಂದ ಗಾಂಜಾ ಸಮುದ್ರ ಬಾಳೆಬೀಜದ ಮಾರಾಟ ವ್ಯಾಪಕವಾಗಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ