ದಸರಾ ಮಹೋತ್ಸವ: ಗಜಪಡೆಯ ಆಯ್ಕೆ ಪ್ರಕ್ರಿಯೆ ಪೂರ್ಣ
Team Udayavani, Aug 6, 2023, 9:27 PM IST
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಗಜಪಡೆಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, 14 ಆನೆಗಳನ್ನು ಎರಡು ತಂಡಗಳಲ್ಲಿ ಮೈಸೂರಿಗೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.
ಆನೆಗಳ ಆಯ್ಕೆ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಮತ್ತು ವೈದ್ಯರ ತಂಡ ಮತ್ತಿಗೋಡು, ದುಬಾರೆ, ಆನೆಕಾಡು, ಭಿಮನಕಟ್ಟೆ, ರಾಂಪುರ, ಬಳ್ಳೆ ಶಿಬಿರಗಳಿಗೆ ತೆರಳಿ ಒಂದು ಸುತ್ತಿನ ಪರೀಕ್ಷೆ ನಡೆಸಿತ್ತು. ಡಿಸಿಎಫ್ ಸೌರಭ್ ಕುಮಾರ್ ನೇತೃತ್ವದ ತಂಡ ಆ.2ರಂದು ಮತ್ತೆ ಮತ್ತಿಗೋಡು, ಭೀಮನಕಟ್ಟೆ, 3ರಂದು ದುಬಾರೆ ಮತ್ತು ಆನೆಕಾಡು ಆನೆ ಶಿಬಿರ ಹಾಗೂ ಆ.5ರಂದು ರಾಂಪುರ ಮತ್ತು ಬಳ್ಳೆ ಶಿಬಿರಗಳಿಗೆ ತೆರಳಿ ಆನೆಗಳನ್ನು ಪರಿಶೀಲಿಸಲಾಗಿದೆ. ವಾರಾಂತ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ದಸರೆಗೆ ಭಾಗವಹಿಸುವ 14 ಆನೆಗಳ ಪಟ್ಟಿ ಮತ್ತು ಗಜಪಯಣ ನಡೆಯುವ ದಿನಾಂಕ ನಿಗದಿಯಾಗಲಿದೆ.
ಪಟ್ಟಿಯಲ್ಲಿ ಎರಡು ಹೊಸ ಆನೆ: ದುಬಾರೆ ಸಾಕಾನೆ ಶಿಬಿರದ ಗಂಡಾನೆಯಾದ ಕಂಜನ್ ಮತ್ತು ರಾಂಪುರ ಶಿಬಿರದ ಹೆಣ್ಣಾನೆ ಹಿರಣ್ಯಾ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದು, ಅಂತಿಮ ಆಯ್ಕೆಯಲ್ಲಿಯೂ ಸ್ಥಾನ ಪಡೆದರೆ ದಸರೆಯಲ್ಲಿ ಪಾಲ್ಗೊಳ್ಳಲಿವೆ. ಮೊದಲ ಹಂತದಲ್ಲಿ ಅಭಿಮನ್ಯು, ಮಹೇಂದ್ರ, ಕರ್ನಾಟಕ ಭೀಮ, ವರಲಕ್ಷ್ಮೀ, ಲಕ್ಷ್ಮೀ, ಅರ್ಜುನ, ಧನಂಜಯ ಹಾಗೂ ಗೋಪಿ ಆನೆಗಳು ಬರುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ