23ರಿಂದ ದಸರಾ ದೀಪಾಲಂಕಾರ: ಕೆಂಪುಕೋಟೆ ಪ್ರಮುಖ ಆಕರ್ಷಣೆ, ಬೆಳಕಲ್ಲಿ ಗಜಪಡೆ ತಾಲೀಮು

ಈ ವರ್ಷ 124 ಕಿ.ಮೀ. ರಸ್ತೆ ದೀಪಾಲಂಕಾರ ಮಾಡಲಾಗುತ್ತಿದೆ.

Team Udayavani, Sep 16, 2022, 5:25 PM IST

23ರಿಂದ ದಸರಾ ದೀಪಾಲಂಕಾರ: ಕೆಂಪುಕೋಟೆ ಪ್ರಮುಖ ಆಕರ್ಷಣೆ, ಬೆಳಕಲ್ಲಿ ಗಜಪಡೆ ತಾಲೀಮು

ಮೈಸೂರು: ನಾಡಹಬ್ಬ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ದೀಪಾಲಂಕಾರಕ್ಕೆ ಭರದ ಸಿದ್ಧತೆ ನಡೆದಿದ್ದು, ಈ ಬಾರಿ ಹೊಸದಿಲ್ಲಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಂಸತ್‌ ಭವನ, ಸುಭಾಷ್‌ಚಂದ್ರ ಬೊಸ್‌ ಅವರ ಪ್ರತಿಕೃತಿ ವಿಶೇಷವಾಗಿದೆ.

ನಗರದಲ್ಲಿ ದೀಪಾಲಂಕಾರ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ದೀಪಾಲಂಕಾರ ಸಮಿತಿ ಉಪ ವಿಶೇಷಾಧಿಕಾರಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ಮಾಹಿತಿ ನೀಡಿ, ಈ ಬಾರಿಯ ದಸರಾ ಉತ್ಸವದಲ್ಲಿ ನೂತನ ಸಂಸತ್‌ ಭವನ, ಬೋಸ್‌ ಪ್ರತಿಕೃತಿ ಜತೆಗೆ ಚಿತ್ರನಟ ಡಾ. ಪುನೀತ್‌ ರಾಜಕುಮಾರ್‌ಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದ್ದು, ಪಿಒಪಿಯಲ್ಲಿ ನಿರ್ಮಿಸಿದ ಅವರ ಪ್ರತಿಮೆಗೆ ತ್ರಿಡಿ ವೀಡಿಯೋ ಸ್ಪರ್ಶ ನೀಡಲಾಗಿದೆ ಎಂದರು.

ನಗರದ ಎಲ್‌ಐಸಿ ವೃತ್ತದಲ್ಲಿ ರಾಷ್ಟ್ರ ಲಾಂಛನ, ರಾಷ್ಟ್ರಧ್ವಜ, ಪ್ರಾಣಿ, ಪಕ್ಷಿಗಳ ಮಾದರಿ ಇರಲಿದ್ದು, ಜ್ಞಾನಪೀಠ ಪುರಸ್ಕೃತರಾದ ಕನ್ನಡಿಗರ ಪ್ರತಿಕೃತಿಗಳು, ಮೈಸೂರು ಮಹಾರಾಜರು, ಕೆಂಪುಕೋಟೆ ಮಾದರಿ ದೀಪಾಲಂಕಾರದಲ್ಲಿ ಕಂಗೊಳಿಸಲಿವೆ. ಕಳೆದ ವರ್ಷ 100 ಕಿ.ಮೀ. ದೀಪಾಲಂಕಾರ ಮಾಡಲಾಗಿತ್ತು. ಈ ವರ್ಷ 124 ಕಿ.ಮೀ. ರಸ್ತೆ ದೀಪಾಲಂಕಾರ ಮಾಡಲಾಗುತ್ತಿದೆ. ಸೂರ್ಯಾಸ್ತದಿಂದ ರಾತ್ರಿ 10.30ರ ತನಕ ದೀಪಾಲಂಕಾರ ಇರಲಿದ್ದು,
ಈಗಾಗಲೇ ಸಿದ್ಧತೆ ಆರಂಭವಾಗಿದೆ ಎಂದು ವಿವರಿಸಿದರು.

ಸ್ವಾಗತ ಕಮಾನಿನೊಂದಿಗೆ ಆಕರ್ಷಕ ವಿದ್ಯುತ್‌ ದೀಪಾಲಂಕಾರ: ನಗರದ 96 ವೃತ್ತಗಳಲ್ಲಿ ದೀಪ ಅಲಂಕಾರ ಮಾಡಲಾಗುತ್ತಿದ್ದು, 35 ಪ್ರಾಯೋಜಕರು ಮುಂದೆ ಬಂದಿದ್ದಾರೆ. ಮೈಸೂರು ಹೆಬ್ಟಾಗಿಲುಗಳಾದ ನಂಜನಗೂಡು, ಹುಣಸೂರು, ಬೆಂಗಳೂರು ಮತ್ತು ತಿ.ನರಸೀಪುರದ ರಸ್ತೆಗಳಲ್ಲಿ ಸ್ವಾಗತ ಕಮಾನಿನೊಂದಿಗೆ ಆಕರ್ಷಕ ವಿದ್ಯುತ್‌ ದೀಪಾಲಂಕಾರ ಇರಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ಸಿಂಹ ಬನ್ನೂರು ಮತ್ತು ಎಚ್‌.ಡಿ.ಕೋಟೆ ಮೂಲಕ ಮೈಸೂರಿಗೆ ಬರುವ ರಸ್ತೆಯಲ್ಲೂ ದೀಪಾಲಂಕಾರ ಮಾಡುವಂತೆ ಸಲಹೆ ನೀಡಿದರು.

ಬೆಳಕಲ್ಲಿ ಗಜಪಡೆ ತಾಲೀಮು
ಈ ಬಾರಿಯ ಜಂಬೂ ಸವಾರಿ ಮೆರವಣಿಗೆ ಸಾಯಂಕಾಲ ಜರುಗುವುದರಿಂದ ಗಜಪಡೆ ದೀಪದ ಬೆಳಕಿನಲ್ಲಿ ಬನ್ನಿಮಂಟಪಕ್ಕೆ ತೆರಳಬೇಕಿದೆ. ಹಾಗಾಗಿ ಆನೆಗಳಿಗೆ ವಿದ್ಯುತ್‌ ದೀಪದ ಬೆಳಕಿನಲ್ಲಿ ಮೆರವಣಿಗೆ ಸಾಗಲು ಅಭ್ಯಾಸವಾಗಲು ಮೂರು ದಿನ ಮುಂಚಿತವಾಗಿಯೇ ಅಂದರೆ ಸೆ.23 ರಿಂದ ರಾಜಮಾರ್ಗದಲ್ಲಿ ದೀಪಾಲಂಕಾರ ಆಯೋಜಿಸಲಾಗುತ್ತದೆ. ಈ ವೇಳೆ ದಸರಾ ಗಜಪಡೆ 23ರಿಂದ 25ರವರೆಗೆ ಪ್ರತಿನಿತ್ಯ ಸಂಜೆ ದೀಪದ ಬೆಳಕಿನಲ್ಲಿ ತಾಲೀಮು ನಡೆಸಲಿವೆ ಎಂದರು. ಆನೆ ಮತ್ತು ಅಂಬಾರಿ ಸೇರಿ 16 ಅಡಿ ಎತ್ತರ ಇರುವುದರಿಂದ ನಾವು 22 ಅಡಿ ಎತ್ತರದಲ್ಲಿ ದೀಪಾಲಂಕಾರ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದೇವೆ ಎಂದರು.

ನಾಲ್ವಡಿ ಒಡೆಯರ್‌ ಪ್ರತಿಕೃತಿ
ಈ ಬಾರಿ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ವಿಮಾನ ನಿಲ್ದಾಣದ ದ್ವಾರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಾದರಿ ನಿರ್ಮಿಸಿ, ನಾಲ್ವಡಿ ಕೃಷ್ಣರಾಜ ಒಡೆಯರ್‌ ವಿಮಾನ ನಿಲ್ದಾಣ ಎಂದು ಹೆಸರು ಬರೆಯಬೇಕೆಂದು ಸಂಸದ ಪ್ರತಾಪಸಿಂಹ ಸಲಹೆ ನೀಡಿದರು. ಈಗಾಗಲೇ ರಾಜ್ಯ ಸರ್ಕಾರ ಮಂಡಕಳ್ಳಿ ವಿಮಾನ ನಿಲ್ದಾ ಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು ನಾಮಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರದಿಂದಲೂ ಒಪ್ಪಿಗೆ ದೊರೆಯಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಸೆಸ್ಕ್ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.