12 ವರ್ಷಗಳ ಬಳಿಕ ದ್ವಾರಸಮುದ್ರ ಕೆರೆ ಭರ್ತಿ : ಊರಿನ ಜನತೆ, ರೈತರ ಮೊಗದಲ್ಲಿ ಸಂತಸ


Team Udayavani, Dec 9, 2021, 2:17 PM IST

12 ವರ್ಷಗಳ ಬಳಿಕ ದ್ವಾರಸಮುದ್ರ ಕೆರೆ ಭರ್ತಿ : ಊರಿನ ಜನತೆ, ರೈತರ ಮೊಗದಲ್ಲಿ ಸಂತಸ

ಹಳೇಬೀಡು: ನಿರಂತರವಾಗಿ ಸುರಿದ ಮಳೆಯಿಂದ ದ್ವಾರಸಮುದ್ರ ಕೆರೆಗೆ ನೀರು ಹರಿದು ಬರುತ್ತಿದ್ದು, ಸಾವಿರಾರು ರೈತರ ಮೊಗದಲ್ಲಿ, ಹೋಬಳಿ ಜನರಿಗೆ ಸಂತಸ ಉಂಟುಮಾಡಿದೆ.
ಸುಮಾರು 9ನೇ ಶತಮಾನದಲ್ಲಿ ರಾಷ್ಟ್ರಕೂಟರ ದೊರೆ ನಿರ್ಮಿಸಿದ್ದ ಎನ್ನಲಾದ ದ್ವಾರಸಮುದ್ರ ಕೆರೆ ಸುಮಾರು 900 ಹೆಕ್ಟೇರ್‌ ವಿಸ್ತೀರ್ಣ ಹೊಂದಿದೆ. ದ್ವಾರಸಮುದ್ರ ಕರೆ ಭರ್ತಿಯಾಗಿರುವುದರಿಂದ 3-4 ವರ್ಷಗಳ ಕಾಲ ರೈತರು ನೆಮ್ಮದಿ ಜೀವನ ಸಾಗಿಸಬಹುದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಿಂದ ನಿತ್ಯ ಗಂಗಾ ಪೂಜೆ: 12 ವರ್ಷಗಳ ನಂತರ ಭರ್ತಿಯಾಗಿರುವ ದ್ವಾರಸಮುದ್ರ ಕೆರೆಗೆ ಗ್ರಾಮದ ಮಹಿಳೆಯರು ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಮಹಿಳೆಯರು ದ್ವಾರಸಮುದ್ರ ಕೆರೆಗೆ ಬಂದು ಗಂಗಾ ಮಾತೆಗೆ ಹೂವು, ಹಣ್ಣು, ತಂಬಿಟ್ಟು ಸೇರಿದಂತೆ ಇನ್ನಿತರ ಪೂಜಾ ಪರಿಕರಗಳೊಂದಿಗೆ ಭಕ್ತಿಯಿಂದ ಗಂಗೆ ಪೂಜೆ ಮಾಡಿ, ಹೋಬಳಿಯ ಜನತೆಗೆ ರೈತರಿಗೆ ಸುಖ- ಸಮೃದ್ಧಿ ನೀಡಲಿ ಎಂದು ದೇವರಲ್ಲಿ ನಿತ್ಯ ಪಾರ್ಥನೆ ಮಾಡುತ್ತಿರುವುದು ದ್ವಾರಸಮುದ್ರ ಕೆರೆಗೆ ಜೀವ ಕಳೆ ಬಂದಂತೆ ಕಾಣುತ್ತಿದೆ.

ಆಕರ್ಷಣೆಗೆ ಬೋಟಿಂಗ್‌ ವ್ಯವಸ್ಥೆ: ದ್ವಾರಸಮುದ್ರ ಕೆರೆ ತುಂಬಿರುವುದರಿಂದ ಬಂದ ಪ್ರವಾಸಿಗರಿಗೆ ಮುದ ನೀಡಲು ಮತ್ತು ಪ್ರವಾಸಿಗರನ್ನು ಆಕರ್ಷಿಸಲು ಹೊಯ್ಸಳ ಬೋಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಭಯದ ನಡುವೆ ಪ್ರವಾಸಿಗರು ಹೊಯ್ಸಳರ ಕಾಲದ ಪ್ರಸಿದ್ಧ ದೇವಾಲಯ ವೀಕ್ಷಣೆ ಮಾಡಲು ಆಗಮಿಸಿದವರು ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ದ್ವಾರಸಮುದ್ರ ಕರೆಗೆ ಬಂದು ಬೋಟಿಂಗ್‌ ವಿಹಾರದ ಮೂಲಕ ಸ್ಥಳೀಯ ಪ್ರಕೃತಿ ಸೌಂದರ್ಯ ಸವಿದು ಮನಃ ತುಂಬಿಕೊಂಡು ವಾಪಾಸ್‌ ಹೋಗಲು ದ್ವಾರಸಮುದ್ರ ಕೆರೆ ಆಕರ್ಷಣೀಯ ಕೇಂದ್ರವಾಗಿದೆ.  ದ್ವಾರಸಮುದ್ರ ಕೆರೆ ತುಂಬಿದ ನಂತರ ಕೆರೆ ವೀಕ್ಷಣೆಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯ ಮತ್ತು ಹೊರರಾಜ್ಯ ಪ್ರವಾಸಿಗರ ಜತೆಗೆ ಸ್ಥಳೀಯರು ಮಕ್ಕಳು ಕೂಡ ಬೋಟಿಂಗ್‌ಗೆ ಹೋಗಿ ಖುಷಿಪಡುತ್ತಿದ್ದಾರೆ.

ರಣಘಟ್ಟ ಯೋಜನೆ ಕಾಮಗಾರಿ ಪ್ರಾರಂಭ:
ಹಳೇಬೀಡಿನಿಂದ ಕೇವಲ 10 ಕೀಲೋ ಮೀಟರ್‌ ದೂರದಲ್ಲಿಯೇ ಬೇಲೂರಿನಲ್ಲಿ ಯಗಚಿ ನದಿ ಇದ್ದರೂ, ಹಳೇಬೀಡಿನ ದ್ವಾರಸಮುದ್ರ ಕರೆಗೆ ಹೊಯ್ಸಳರ ಕಾಲದ ರಣಘಟ್ಟ ಒಡ್ಡಿನ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ, ಸುಮಾರು ಎರಡು- ಮೂರು ದಶಕಗಳಿಂದಲೂ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೆ, ನೀರು ಮಾತ್ರ ದ್ವಾರಸಮುದ್ರ ಕೆರೆಗೆ ಬರುವುದು
ಮರೀಚಿಕೆಯಾಗಿ ಉಳಿದಿತ್ತು. ರೈತರ ಹೋರಾಟ, ಸ್ಥಳೀಯ ಶಾಸಕ ಕೆ.ಎಸ್‌.ಲಿಂಗೇಶ್‌ ಒತ್ತಡ, ಹಲವು ಸ್ವಾಮೀಜಿಗಳ ಹೋರಾಟಕ್ಕೆ ಮಣಿದು ತಮ್ಮ ಸರ್ಕಾರದ ಅವಧಿಯ ಬಜೆಟ್‌ನಲ್ಲಿ ಸುಮಾರು 100 ಕೋಟಿ ಹಣವನ್ನು ರಣಘಟ್ಟ ಯೋಜನೆ ಮೀಸಲಿಟ್ಟರು. ನಂತರ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕುಮಾರಸ್ವಾಮಿ ಸರ್ಕಾರದ ಬಜೆಟ್‌ನಲ್ಲಿ ಮೀಸಲಿಟ್ಟ
ಹಣವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿ, ಅದರಂತೆ ನಡೆದುಕೊಂಡು ಹೆಚ್ಚುವರಿಯಾಗಿ 28 ಕೋಟಿ ಹಣ ಮೀಸಲಿಟ್ಟು, ರಣಘಟ್ಟ ಶಾಶ್ವತ ನೀರಾವರಿ ಯೋಜನೆಗೆ ಅವಕಾಶ ನೀಡಿತ್ತು. ಅದರ ಕಾಮಗಾರಿ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, 2 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.

– ಕುಮಾರ್‌.ಎಂ.ಸಿ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.