ಉಪ್ಪಿನಂಗಡಿ: ಇ- ಸಿಗರೇಟ್ ವಶ
Team Udayavani, Feb 27, 2023, 5:55 AM IST
ಉಪ್ಪಿನಂಗಡಿ: ಇಲ್ಲಿನ ಮೊಬೈಲ್ ಅಂಗಡಿಗೆ ಶನಿವಾರ ರಾತ್ರಿ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸರು ಅನಧಿಕೃತವಾಗಿ ಮಾರಲಾಗುತ್ತಿದ್ದ ಇ- ಸಿಗರೇಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಅದರ ಮಾಲಕ ನರಿಮೊಗರು ಗ್ರಾಮದ ಮುಕ್ವೆಯ ಶೇಖ್ ಶಾಹಿದ್ (27) ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರಲ್ಲದೆ, ಸುಮಾರು 26 ಸಾವಿರ ರೂ. ಮೌಲ್ಯದ ಒಟ್ಟು 52 ಇ- ಸಿಗರೇಟ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಅಂಗಡಿಯಲ್ಲಿ ಮಾರಾಟ ಮಾಡಲು ಇರಿಸಿಕೊಂಡಿದ್ದ ವಿವಿಧ ಫ್ಲೇವರ್ನ ಒಟ್ಟು 52 ನಿಷೇಧಿತ ಇ-ಸಿಗರೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಪರವಾನಿಗೆ ನವೀಕರಣವಾಗಿಲ್ಲ ಈ ಅಂಗಡಿಯು ಕಾಂಪ್ಲೆಕ್ಸ್ನ ಹಿಂಬದಿಯಲ್ಲಿ ಜನ ನಿಬಿಡತೆಯಿಲ್ಲದ ಜಾಗದಲ್ಲಿ ಇದ್ದು, ಮೇಲ್ನೋಟಕ್ಕೆ ಮೊಬೈಲ್ ಮಾರಾಟ ಮಳಿಗೆಯಂತೆ ಕಾಣುತ್ತದೆ. ಆದರೆ ಈ ಅಂಗಡಿ ಮೊಬೈಲ್ ಮಾರಾಟದ ಪರವಾನಿಗೆಯನ್ನೂ ನವೀಕರಿಸಿರಲಿಲ್ಲ ಎಂಬ ಅಂಶ ತನಿಖೆ ವೇಳೆ ತಿಳಿದು ಬಂದಿದೆ. ಉಪ್ಪಿನಂಗಡಿಯಲ್ಲಿ ಕೆಲವೊಂದು ಅಂಗಡಿಗಳು ಪರವಾನಿಗೆಯನ್ನು ನವೀಕರಿಸದೇ ಅಕ್ರಮ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿವೆ ಎಂಬ ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಗ್ರಾ.ಪಂ. ಈ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ