ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ
Team Udayavani, Feb 24, 2021, 11:58 PM IST
ವಿಜಯಪುರ : ಜಿಲ್ಲೆಯ ಮನಗೂಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಮತ್ತೆ ಭೂಮಿ ಅಲುಗಾಡಿದೆ. ಭೂಕಂಪನದ ಅನುಭವ ಆಗುತ್ತಲೇ ಗ್ರಾಮದಲ್ಲಿ ಮಲಗಿದ್ದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಬುಧವಾರ ರಾತ್ರಿ 10-30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಮನೆಯಲ್ಲಿ ಪಾತ್ರೆ, ಇತರೆ ವಸ್ತುಗಳು ಕೆಳಗೆ ಬಿದ್ದಿವೆ. ಮಲಗಿದವರನ್ನು ಅಲುಗಾಡಿಸಿ ಎಬ್ಬಿಸಿದ ಅನುಭವ ಅಗಿದ್ದು, ಕೂಡಲೇ ಮನೆಯಿಂದ ಹೊರಗೆ ಓಡಿ ಬಂದಿರುವ ಜನರು ಕಣ್ಣಿನ ರೆಪ್ಪೆ ಬಡಿಯದೇ ಜಾಗರಣೆ ಮಾಡುತ್ತಿದ್ದಾರೆ.
ಭೂಮಿಯಿಂದ ಭಾರೀ ಶಬ್ದ ಕೇಳಿಸಿದ್ದು, ಭೂಮಿಯೂ ಕಂಪಿಸಿದೆ. ಮನಗೂಳಿ ಗ್ರಾಮದಲ್ಲಿ ಕಳೆದ ಒಂದು ವಾರದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವಾಗಿದೆ. ಪದೇ ಪದೇ ಭೂಕಂಪದ ಅನುಭವವಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ತಡರಾತ್ರಿಯೂ ಮನೆ ಒಳಗೆ ಹೋಗದೇ ಮಕ್ಕಳು, ವೃದ್ಧರು, ಮಹಿಳೆಯರೊಂದಿಗೆ ಅಂಗಳದಲ್ಲಿ ಕುಳಿತಿರುವ ಮನಗೂಳಿ ಜನರು ಆತಂಕದಲ್ಲಿ ರಾತ್ರಿ ಕಳೆಯುತ್ತಿದ್ದಾರೆ.
ಗ್ರಾಮದಲ್ಲಿ ಗಂಭೀರ ದುರಂತ ಸಂಭವಿಸುವ ಮೊದಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ತಕ್ಷಣ ಗ್ರಾಮಕ್ಕೆ ಆಗಮಿಸಿ ಅಧ್ಯಯನ ನಡೆಸಬೇಕು. ಈ ಕುರಿತು ಸಬೂಬು ಹೇಳದೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ